ನಿರಗುಡಿ ಸರ್ಕಾರಿ ಪ್ರೌಢಶಾಲೆ ಕಟ್ಟಡ ಕಾಮಗಾರಿಗೆ ಅಣೂರೆ ಚಾಲನೆ
Team Udayavani, Nov 25, 2021, 11:12 AM IST
ಆಳಂದ: ತಾಲೂಕಿನ ನಿರಗುಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಜಿಪಂ ಅನುದಾನದ ಅಡಿಯಲ್ಲಿ ಒಂದು ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭಕ್ಕೆ ಎಸ್ಡಿಎಂಸಿ ಅಧ್ಯಕ್ಷ ಗುಂಡಪ್ಪ ಎಸ್. ಅಣೂರೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅಣೂರೆ ಅವರು, ಗ್ರಾಮದಲ್ಲಿ ಪ್ರೌಢಶಾಲೆ ಕಟ್ಟಡ ಸ್ಥಾಪಿಸಲು ಬಹುದಿನಗಳ ಬೇಡಿಕೆಯಾಗಿತ್ತು. ಗ್ರಾಮಸ್ಥರ ಈ ಬೇಡಿಕೆಗೆ ಶಾಸಕ ಸುಭಾಷ ಗುತ್ತೇದಾರ ಸ್ಪಂದಿಸಿ, ಜಿಪಂನಿಂದ ಅನುದಾನ ಒದಗಿಸಿದ ಹಿನ್ನೆಲೆಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಗ್ರಾಮಸ್ಥರೆಲ್ಲ ಸೇರಿಕೊಂಡು ಕಾಮಗಾರಿಯ ಗುಣಮಟ್ಟತೆಗೆ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಇಂದಿನ ಅಗ್ಯವಾಗಿದೆ. ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಖರ್ಚು ಮಾಡುತ್ತಿದೆ. ಇದನ್ನು ಸದ್ಭಳಕೆ ಮಾಡಿಕೊಳ್ಳಲು ಗ್ರಾಮೀಣ ಜನರ ಆದ್ಯ ಕರ್ತವ್ಯವಾಗಿದೆ ಎಂದರು.
ಮುಖಂಡ ಮಂಜುನಾಥ ಮೂಲಗೆ ಮಾತನಾಡಿ, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಕಾಮಗಾರಿಗೆ ವಿಳಂಬ ಆಗದಿರಲಿ ಎಂದು ಚಾಲನೆ ನೀಡಲಾಗಿದೆ. ಸಂಬಂಧಿತ ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಕೈಗೊಂಡು ಶಾಲೆಗೆ ಹಸ್ತಾಂತರಿಸಬೇಕು ಎಂದು ಮನವಿ ಮಾಡಿದರು.
ಮುಖಂಡರಾದ ರಾಜು ದೇಶಮುಖ, ಚಂದ್ರಕಾಂತ ಅಣೂರೆ, ಚನ್ನಪ್ಪ ನಾಗೂರೆ, ಬಾಬುರಾವ್ ಬಿರಾದಾರ, ಪರಮೇಶ್ವರ ಹತ್ತಿಕಾಳೆ, ಪಂಡಿತ ಸೋನಕಂಟ್ಲೆ, ರೇವಣಸಿದ್ಧಪ್ಪ ಜಮಗಿ, ಮುಖ್ಯಶಿಕ್ಷಕ ಕೃಷ್ಣಾ ಪಾಟೀಲ, ಶಿಕ್ಷಕ ನೂಲಕರ್, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಶಂಕರ ಮಗಿ, ಪ್ರಮುಖ ಅಶೋಕ ಸಿಮಿಕೋರೆ, ಶ್ರೀಶೈಲ ಜಮಗೆ, ಎಸ್ಡಿಎಂಸಿ ಸದಸ್ಯ ಸೂರ್ಯಕಾಂತ ತಳವಾರ, ಹಣಮಂತ ಗಾಡೆಕರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು