ಗೌಡರ ಭೇಟಿ ಕೇವಲ ಔಪಚಾರಿಕ: ದೇಶಮುಖ
Team Udayavani, Jan 6, 2022, 10:29 AM IST
ಸೇಡಂ: ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡ ಅವರ ನಮ್ಮ ನಿವಾಸದ ಭೇಟಿ ಕೇವಲ ಔಪಚಾರಿಕ ಭೇಟಿಯಾಗಿತ್ತು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಯುವ ಮುಖಂಡ ನಾಗರೆಡ್ಡಿ ಪಾಟೀಲ ದೇಶಮುಖ ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ಅವರ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಾದ ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ ಅವರು, ಎಚ್ .ಡಿ. ದೇವೇಗೌಡರು ಮುಖ್ಯಮಂತ್ರಿ ಗಳಾಗಿದ್ದಾಗ ಶಾಸಕರಾಗಿದ್ದರು. ಅಲ್ಲದೆ ತೀರಾ ಹಳೆಯ ಗೆಳೆತನ ಇಬ್ಬರೂ ನಾಯಕರದ್ದಾಗಿರುವ ಕಾರಣ, ಸೇಡಂ ಬಂದಾಗ ನಮ್ಮ ಮನೆಗೆ ಬಂದು ಊಟ ಮಾಡಿ ಹೋಗಿದ್ದಾರೆ ಅಷ್ಟೆ. ದೇವೇಗೌಡರು ಸೇಡಂ ಬರುವುದಾಗಿ ಕೆಲ ದಿನಗಳ ಹಿಂದೆಯೇ ತಿಳಿಸಿದ್ದರು. ಅಲ್ಲದೆ ಬಂದಾಗ ನಿಮ್ಮ ಮನೆಯಲ್ಲಿ ಊಟ ಮಾಡ್ತೇನೆ ಅಂದಾಗ, ಬನ್ನಿ ಎಂದು ಆಹ್ವಾನಿಸಿದ್ದೆವು. ಈ ನಿಟ್ಟಿನಲ್ಲಿ ಬುಧವಾರ ಬಂದಾಗ ಬಂದು ನಮ್ಮ ಆತಿಥ್ಯ ಸ್ವೀಕರಿಸಿದ್ದಾರೆ. ಈ ಕುರಿತು ಯಾವುದೇ ರೀತಿಯ ರಾಜಕೀಯ ವಿಶ್ಲೇಷಣೆಗಳು ಬೇಡ. ನಾವು ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ. ಮುಂದಿನ ಬಾರಿ ರಾಜಕುಮಾರ ಪಾಟೀಲ ಅವರನ್ನು ಸಚಿವರನ್ನಾಗಿ ನೋಡುವ ಆಸೆ ಇದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಮತ್ತೂಮ್ಮೆ ಶಾಸಕರನ್ನಾಗಿ ಮಾಡುತ್ತೇವೆ ಎಂದರು.
ರೆಡ್ಡಿ ಸಮಾಜದ ತಾಲೂಕು ಅಧ್ಯಕ್ಷ ನಾಗಭೂಷಣರೆಡ್ಡಿ ಹೂಡಾ, ಹಿರಿಯ ಮುಖಂಡ ಶರಣರೆಡ್ಡಿ ಜಿಲ್ಲೇಡಪಲ್ಲಿ, ಮುರುಗೇಂದ್ರರೆಡ್ಡಿ ಬಿಲಾಕಲ್, ಪುರಸಭೆ ಉಪಾಧ್ಯಕ್ಷ ಶಿವಾನಂದಸ್ವಾಮಿ ಇತರರು ಈ ವೇಳೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್