ಮತದಾರರ ಬೇಟೆಗೆ ಕೈ-ಕಮಲದ ಅಬ್ಬರ


Team Udayavani, Dec 7, 2021, 10:57 AM IST

5bjp

ಕಲಬುರಗಿ: ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿ ಉಳಿದಿದ್ದು, ಮತದಾರರ ಬೇಟೆಗೆ ಬಿಜೆಪಿ-ಕಾಂಗ್ರೆಸ್‌ ನಡುವೆ ಪೈಪೋಟಿ ಏರ್ಪಟ್ಟಿದೆ.

ಹಣವಂತ-ಗುಣವಂತ, ಬಡವ- ಶ್ರೀಮಂತ, ಮತದಾರರ ಸಮಸ್ಯೆ ಗೊತ್ತಿದ್ದವರು-ಗೊತ್ತಿಲ್ಲದವರು, ನಾವು ಗೆದ್ದರೆ ಮತದಾರರ ಬಳಿಗೆ, ಅವರು ಗೆದ್ದರೆ ಮನೆ ಎದುರು ಕಾಯುವುದು, ಸ್ಥಳೀಯ ಮತದಾರರಿಗೆ ಸ್ಪಂದಿಸದಿರುವುದು, ನಾವು ಸ್ಪಂದಿಸುತ್ತೇವೆ. ಹೀಗೆ ಕಾಂಗ್ರೆಸ್‌-ಬಿಜೆಪಿ ನಡುವೆ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಹಾಲಿ ಸದಸ್ಯ ಬಿ.ಜಿ.ಪಾಟೀಲ ಅಭ್ಯರ್ಥಿ ಎಂಬುದು ಮೊದಲೇ ಗೊತ್ತಿತ್ತು. ಆದರೆ ಕಾಂಗ್ರೆಸ್‌ ಪಕ್ಷ ಅಳೆದು-ತೂಗಿ ಎಲ್ಲವನ್ನು ವಿಚಾರಿಸಿ ಕೊನೆಗೆ ಜಿಲ್ಲಾ ಪಂಚಾಯತ್‌ ವಿರೋಧ ಪಕ್ಷದ ಮಾಜಿ ನಾಯಕ ಶಿವಾನಂದ ಪಾಟೀಲ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ ಕಾಂಗ್ರೆಸ್‌ ಪಕ್ಷ ನಾಮಕಾವಾಸ್ತೆ ಸ್ಪರ್ಧಿಸಿದೆ ಎಂದಿತ್ತು. ಆದರೆ ಕಾಂಗ್ರೆಸ್‌ ಪಕ್ಷ ಕೆಳಹಂತದಿಂದ ಅದರಲ್ಲೂ ಸಂಘಟನಾತ್ಮಕವಾಗಿ ಪ್ರಚಾರಕ್ಕೆ ಇಳಿದಿರುವುದು ಬಿಜೆಪಿಯನ್ನು ಚಿಂತೆಗೀಡು ಮಾಡಿದೆ.

ಕಾಂಗ್ರೆಸ್‌ ಪಕ್ಷದಿಂದ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಕ್ಷೇತ್ರದಾದ್ಯಂತ ಸಂಚರಿಸಿ ಪ್ರಚಾರ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ಮತದಾನ ಹಕ್ಕು ಕೊಟ್ಟಿದ್ದೇ ತಾವು ಹಾಗೂ ಕಳೆದ ಲೋಕಸಭೆ ಚುನಾವಣೆ ಸೋಲಿಗೆ ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸುವ ಮುಖಾಂತರ ತಕ್ಕ ಉತ್ತರ ನೀಡಿ ಎಂಬುದು ಹೇಳಿರುವುದು ಆತ್ಮಾವಲೋಕನಕ್ಕೆ ಎಡೆ ಮಾಡಿಕೊಟ್ಟಿದೆ.

ಬಿಜೆಪಿಯಿಂದ ಹಿರಿಯ ಸಚಿವರಾದ ಕೆ.ಎಸ್‌. ಈಶ್ವರಪ್ಪ, ಮುರುಗೇಶ ನಿರಾಣಿ ಹಾಗೂ ಇತರರು ಪ್ರಚಾರ ನಡೆಸಿದ್ದಾರೆ. ಇನ್ನುಳಿದಂತೆ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕೆಕೆಆರ್‌ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಸಂಸದ ಡಾ| ಉಮೇಶ ಜಾಧವ ಹಾಗೂ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರಿಂದ ಚುನಾವಣೆ ಕಾವು ಇಮ್ಮಡಿಗೊಂಡಿದೆ.

ಬಹಿರಂಗ ಚರ್ಚೆಗೆ ಆಹ್ವಾನ

ಚುನಾವಣೆ ಸಂದರ್ಭದಲ್ಲಿ ಪರಸ್ಪರ ಆರೋಪ ಹಾಗೂ ಟೀಕೆಗಳು ಕೇಳಿಬರುವುದು ಸಹಜ. ಅಭಿವೃದ್ಧಿ ಕೆಲಸಗಳು ಹಾಗೂ ಅನುದಾನ ಹಂಚಿಕೆ ಕುರಿತಾಗಿ ಬಹಿರಂಗ ಚರ್ಚೆಗೆ ಸಿದ್ಧ ಎಂಬುದಾಗಿ ಬಿಜೆಪಿ ಅಭ್ಯರ್ಥಿ ಹಾಲಿ ಸದಸ್ಯ ಬಿ.ಜಿ. ಪಾಟೀಲ ಆಹ್ವಾನ ನೀಡಿದ್ದು, ಚುನಾವಣೆ ಅಖಾಡ ಮತ್ತಷ್ಟು ರಂಗೇರಿದೆ ಎನ್ನುವಂತಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.