ಹಜರತ್ ಲಾಡ್ಲೆ ಮಶಾಕ್ ಉರುಸಿಗೆ ಭರದ ಸಿದ್ಧತೆ
Team Udayavani, Nov 12, 2021, 11:12 AM IST
ಆಳಂದ: ಈ ಭಾಗದ ಪ್ರಸಿದ್ಧ ಸೂಫಿ-ಸಂತ ಹಜರತ್ ಲಾಡ್ಲೆ ಮಶಾಕರ ನ.15ರಿಂದ ಎರಡು ದಿನಗಳ ಕಾಲ ನಡೆಯಲಿರುವ 666ನೇ ಉರುಸ್ ನ ಭರದ ಸಿದ್ಧತೆ ನಡೆದಿದೆ ಎಂದು ದರ್ಗಾ ಕಮಿಟಿಯ ಅಧ್ಯಕ್ಷರಾದ ಆಸೀಫ್ ಅನ್ಸಾರಿ ಕಾರಬಾರಿ, ಮೋಹಿಜ್ ಕಾರಬಾರಿ ಅವರು ಜಂಟಿಯಾಗಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉರುಸ್ ನಿಮಿತ್ತ ಈಗಾಗಲೇ ದರ್ಗಾ ಮತ್ತು ಆವರಣ ಗೋಡೆ ಸುಣ್ಣ, ಬಣ್ಣದಿಂದ ಕಂಗೊಳಸುತ್ತಿದ್ದು ಹಾಗೂ ಚಾರಮಿನಾರಗೆ ಅಲಂಕೃತ ವಿದ್ಯುತ್ ದೀಪಾಲಂಕರ ಕೈಗೊಂಡಿದ್ದು ನೋಡುಗರನ್ನು ಆಕರ್ಷಿಸುತ್ತಿದೆ.
ಬರುವ ನ.15ರಂದು ಗಂಧೋತ್ಸವ ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಹೊರಟು ಪ್ರಮುಖ ರಸ್ತೆಗಳ ಮೂಲಕ ಬೆಳಗಿನ ಜಾವ ಲಾಡ್ಲೆ ಮಶಾಕರ ದರ್ಗಾಕ್ಕೆ ತಲುಪಲಿದೆ. ನ.16ರಂದು ದೀಪೋತ್ಸವ ಮಧ್ಯಾಹ್ನ ಖವಾಲಿ ಕಾರ್ಯಕ್ರಮ ಜರುಗಲಿದೆ. ಉರುಸ್ ನಿಮಿತ್ತ ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ದೂರದಿಂದ ಬರುವ ಭಕ್ತಾದಿಗಳಿಗೆ ವಸತಿ ವ್ಯವಸ್ಥೆ ಕೈಗೊಳ್ಳಲಾಗಿದೆ. ಉರುಸ್ ಅಂಗವಾಗಿ ಈಗಾಗಲೇ ಅಂಗಡಿ, ಮುಗ್ಗಟುಗಳು ತೆರೆದುಕೊಂಡಿವೆ ದರ್ಗಾಕ್ಕೆ ಬರುವ ಭಕ್ತಾದಿಗಳು ಶಾಂತತೆ ಮತ್ತು ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಉರುಸ್ನಲ್ಲಿ ಹೈದರಾಬಾದ, ಮುಂಬೈ, ದೆಹಲಿ, ಪುಣೆ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ಕಾಲ ದರ್ಗಾದಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಗಳಲ್ಲಿ ಸಾಹಿತಿಗಳು ಮತ್ತು ಧಾರ್ಮಿಕ ಮುಖಂಡರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಕಮೀಟಿ ಕಾರ್ಯದರ್ಶಿ ಕಲೀಲ ಅನ್ಸಾರಿ, ಸೈಫಾನ್ ಮೂಲಕ ಅನ್ಸಾರಿ, ರಮ್ಮು ಅನ್ಸಾರಿ, ಆರೀಫ್ ಅನ್ಸಾರಿ, ಮುಕ್ಸುದ್ ಅನ್ಸಾರಿ, ಮುಕದುಮ ಅನ್ಸಾರಿ, ಇಪ್ತೆಕಾರ ಅನ್ಸಾರಿ, ಇಸೂಫ್ ಕಾರಬಾರಿ ಮತ್ತಿತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ