ಅತಿವೃಷ್ಟಿ: ಮಣ್ಣು ಪಾಲಾದ ಮುಂಗಾರು ಬೆಳೆ: 5152 ಹೆಕ್ಟೇರ್‌ ಬೆಳೆ ನಷ್ಟ

ಹತ್ತಿ ಬೆಳೆ ನಷ್ಟದ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದೇವೆ.

Team Udayavani, Aug 6, 2021, 4:58 PM IST

Bele

ವಾಡಿ: ಕಳೆದ ಎರಡು ವರ್ಷಗಳಿಂದ ನಿರಂತರ ಅತಿವೃಷ್ಟಿಗೆ ತುತ್ತಾಗುತ್ತಿರುವ ಮುಂಗಾರು ಬೆಳೆ, ಈ ವರ್ಷವೂ ಮಹಾ ಮಳೆಗೆ ಮುಗ್ಗರಿಸಿ ಮಣ್ಣು ಮುಕ್ಕಿದೆ. ಹವಮಾನ ವೈಪರಿತ್ಯದಿಂದ ವರ್ಷಧಾರೆ ಆರ್ಭಟಿಸಿದ್ದು, ಜಮೀನುಗಳು ತತ್ತರಿಸಿ ಬೆಳೆ ಸರ್ವನಾಶವಾಗಿದೆ. ಚಿತ್ತಾಪುರ ತಾಲೂಕಿನಾದ್ಯಂತ ಕೊಳೆತ ಹೆಸರು ಬೆಳೆಗಳದ್ದೇ ದರ್ಶನವಾಗುತ್ತಿದೆ. ವಾಡಿ, ನಾಲವಾರ, ಸನ್ನತಿ, ರಾವೂರ ವಲಯದಲ್ಲಿ ಭೂಮಿ ತೇವಾಂಶ ಅತಿಹೆಚ್ಚಳದಿಂದ ಹೆಸರು ಬೆಳೆಯ ಹಸಿರೆಲೆಗಳಿಗೆ ಹಳದಿ ರೋಗ ಬಾ ಧಿಸಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.

ಕೆಸರಿನ ಹೂಳಿನಲ್ಲಿ ಕೊಳೆತು ಹಾಳಾದ ಫಸಲಿನಿಂದಾಗಿ ಇಳುವರಿಗೆ ಕುತ್ತು ಬಂದೆರೆಗಿದೆ. ನೀರು ಹೊತ್ತು ನಿಂತ ಹೊಲಗಳಲ್ಲಿನ ಹೆಸರು ಬೆಳೆಯ ಹಸಿರೆಲೆಗಳು ಹಳದಿ ಬಣ್ಣಕ್ಕೆ ಮರಳಿದ್ದು ಒಂದೆಡೆಯಾದರೆ, ಪ್ರವಾಹಕ್ಕೆ ಸಿಲುಕಿ ನರಳಿದ ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಹಸಿ ಬರದ ಛಾಯೆ ಮೂಡಿದೆ.

ಹೆಸರು ಬೆಳೆ ಕೃಷಿಗೆ ಕಡಿಮೆ ವೆಚ್ಚವಾದರೂ ಅಲ್ಪಾವಧಿಯಲ್ಲಿಯೇ ಹೆಚ್ಚು ಲಾಭ ತಂದುಕೊಡುವ ಬೆಳೆಯಾಗಿದ್ದರಿಂದ ಒಕ್ಕಲಿಗರು ಮುಂಗಾರು ಹಂಗಾಮಿನಲ್ಲಿ ಹೆಚ್ಚಿನ ಪ್ರಮಾಣದ ಹೆಸರು ಬಿತ್ತನೆ ಮಾಡಿದ್ದಾರೆ. ಕೀಟ ಬಾಧೆ ಒಕ್ಕರಿಸಿ ಎಲೆಗಳು ಪುಡಿಪುಡಿಯಾಗಿವೆ. ಜಿಗಿ ಹುಳು, ಹೇನು, ನಂಜು, ಬೂದಿ ರೋಗ ತಗುಲಿ ಬೆಳೆ ನೆಲಕಚ್ಚಿದೆ. ಬಂಪರ್‌ ಬೆಳೆ ಹಾಗೂ ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ರೈತರಿಗೆ ಅತಿವೃಷ್ಟಿಯ ಬರಸಿಡಿಲು ಬಡಿದಿದೆ. ಬಿತ್ತನೆಗೆ ಖರ್ಚು ಮಾಡಿದ ಬಂಡವಾಳ ಅಕ್ಷರಶಃ ನೀರುಪಾಲಾಗಿದೆ. ಅಳಿದುಳಿದ ಬೆಳೆ ಉಳಿಸಿಕೊಳ್ಳಲು ರೋಗ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ರೈತರು ಔಷಧ ಸಿಂಪಡಣೆ ಮಾಡುತ್ತಿದ್ದಾರೆ. ಬೇಸಾಯಗಾರರ ಬೆವರು ಕೂಡ ಮಣ್ಣಿಗೆ ಸೇರಿ ಕಣ್ಣೀರಾಗಿ ಹರಿದಿದೆ.

ಮಳೆ ಹೊಡೆತಕ್ಕೆ ಸಿಲುಕಿ ನರಳುತ್ತಿರುವ ರೈತರಿಗೆ ಧೈರ್ಯ ಹೇಳಿ ಪರ್ಯಾಯ ಮಾರ್ಗ ತೋರಿಸಬೇಕಾದ ಕೃಷಿ ಇಲಾಖೆ ಅಧಿಕಾರಿಗಳು ಕಚೇರಿ ಸೇರಿಕೊಂಡಿದ್ದಾರೆ. ಹೆಸರು ಹಾಳಾಗಿ ಗೋಳಾಡುವವರು ಒಂದೆಡೆಯಾದರೆ, ತೊಗರಿ ಬೀಜದ ಮೊಳಕೆ ಕೊಳೆತು ಸಂಪೂರ್ಣ ಹಳ್ಳ ಹಿಡಿದಿದ್ದು ಕಂಡು ಬೆಳೆಗಾರ ಮರುಗುತ್ತಿದ್ದಾನೆ. ತೊಗರಿ ಬೆಳೆ ಹರಗಿ ಫಸಲು ಕಿತ್ತೆಸೆಯುತ್ತಿರುವ ಅನ್ನದಾತರು ಮರು ಬಿತ್ತನೆಗೆ ಚಾಲನೆ ನೀಡಿದ್ದಾರೆ.

ಹಳದಿ ರೋಗದಿಂದ ಶೇ.50ರಷ್ಟು ಇಳುವರಿ ನಷ್ಟ ಉಂಟಾಗಿದೆ. ತಗ್ಗು ಪ್ರದೇಶದ ಜಮೀನುಗಳಲ್ಲಿ ಬೆಳೆ ಸಂಪೂರ್ಣ ನಾಶವಾಗಿ ಶೇ.100ರಷ್ಟು ನಷ್ಟದ ಹೊಡೆತ ಬಿದ್ದಿದೆ. ಮಳೆ ನಂತರ ಬೆಳೆ ವೀಕ್ಷಣೆ ಮತ್ತು ಹಾನಿ ಸರ್ವೇಗೆ ಮುಂದಾಗಬೇಕಿದ್ದ ಅಧಿಕಾರಿಗಳು, ಜನಪ್ರತಿನಿಧಿಗಳು ರೈತರ ಕಷ್ಟಕ್ಕೆ ಬೆನ್ನು ತಿರುಗಿಸಿದ್ದು ಶೋಚನೀಯ.

ವಿಪರೀತ ಮಳೆಯಿಂದಾಗಿ ನಾಲವಾರ ಕೃಷಿ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ ಸುಮಾರು 5152 ಹೆಕ್ಟೆರ್‌ ಪ್ರದೇಶದಲ್ಲಿ ಬೆಳೆ ನಷ್ಟ ಉಂಟಾಗಿದೆ. ವಿವಿಧ ರೀತಿಯ ರೋಗ ಬಾಧೆಯಿಂದ ಹೆಸರು ಹಾಳಾಗಿದೆ. ತೇವಾಂಶ ಹೆಚ್ಚಾಗಿ ಬೆಳೆ ಚೇತರಿಸಿಕೊಳ್ಳದೆ ತೊಗರಿ ಫಸಲು ಸಂಪೂರ್ಣ ಕೊಳೆತುಹೋಗಿದೆ. ತೊಗರಿ ಮರು ಬಿತ್ತನೆಗಾಗಿ ಸಕಾಲದಲ್ಲಿ ಬೇಡಿಕೆಯಿದ್ದಷ್ಟು ರೈತರಿಗೆ ಬೀಜ ವಿತರಣೆ ಮಾಡಿದ್ದೇವೆ. ಅಂದಾಜು ರೂಪದಲ್ಲಿ ಈಗಾಗಲೇ ಬೆಳೆ ನಷ್ಟದ ಪಟ್ಟಿ ತಯಾರಿಸಿದ್ದೇವೆ. ತೊಗರಿ 3460 ಹೆಕ್ಟೇರ್‌, ಹೆಸರು 1120 ಹೆಕ್ಟೇರ್‌, ಉದ್ದು 92 ಹೆಕ್ಟೇರ್‌, 480 ಹೆಕ್ಟೇರ್‌ ಹತ್ತಿ ಬೆಳೆ ನಷ್ಟದ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದೇವೆ. ಬೆಳೆ ಪರಿಹಾರ ನಿರೀಕ್ಷೆಯಲ್ಲಿ ರೈತರಿದ್ದು, ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ.
ಸತೀಶಕುಮಾರ ಪವಾರ, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ನಾಲವಾರ

*ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.