ಮಳೆ-ತಂಪಿನಿಂದ ತೊಗರಿ ಬೆಳೆಗೆ ಹಾನಿ
Team Udayavani, Nov 19, 2021, 10:28 AM IST
ಚಿಂಚೋಳಿ: ತಾಲೂಕಿನಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆ ಮತ್ತು ಮೋಡ ಕವಿದ ತಂಪು ವಾತಾವರಣ, ಮುಸುಕಿನ ಮಂಜಿನಿಂದ ತೊಗರಿ ಹೂವು ಮತ್ತು ಮೊಗ್ಗು ಉದುರಿ ಹೋಗಿ, ಬೆಳೆಗಾರನಿಗೆ ನಷ್ಟವಾಗಿದೆ.
ತಾಲೂಕಿನಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ತೊಗರಿ ಬೆಳೆ ಸತತವಾಗಿ ಸುರಿದ ಮಳೆಯಿಂದ ಅನೇಕ ಕಡೆಗಳಲ್ಲಿ ಸಂಪೂರ್ಣ ಹಾನಿಯಾಗಿದೆ. ಅಲ್ಲದೆ ಇನ್ನು ಕೆಲವು ಕಡೆ ಹೊಲಗಳಲ್ಲಿ ನೀರು ನಿಂತು, ತೊಗರಿ ಬೆಳೆ ಬೇರು ಕೊಳೆತಿದೆ. ಮತ್ತೆ ಕೆಲವೆಡೆ ನೆಟೆರೋಗ ಕಾಣಿಸಿಕೊಂಡು ಬೆಳೆ ಹಾಳಾಗಿದೆ.
ತಾಲೂಕಿನ ಸುಲೇಪೇಟ, ಚಿಂಚೋಳಿ, ಕೋಡ್ಲಿ, ಚಿಮ್ಮನಚೋಡ, ಐನಾಪುರ, ಕುಂಚಾವರಂ ಹೋಬಳಿ ಗ್ರಾಮಗಳಲ್ಲಿ ತೊಗರಿ ಬೆಳೆ ಹೂವು ಮತ್ತು ಮೊಗ್ಗಿನಿಂದ ಸಮೃದ್ಧಿಯಾಗಿ ಬೆಳೆದಿದೆ. ಆದರೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಹೂವುಗಳಿಂದ ಕಂಗೊಳಿಸುತ್ತಿದ್ದ ತೊಗರಿ ಹೂವು, ಮೊಗ್ಗು, ಚೆಳ್ಳಿಕಾಯಿ ಉದುರಿ ಹೋಗಿದೆ. ಒಟ್ಟು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೊಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’