ಅಕಾಲಿಕ ಮಳೆಗೆ ನಲುಗಿದ ಜನತೆ-ಬೆಳೆಯೂ ತತ್ತರ


Team Udayavani, Nov 22, 2021, 11:45 AM IST

6rain

ಕಲಬುರಗಿ: ಹಿಂಗಾರು ಹಂಗಾಮಿನ ಮಳೆಗಳೆಲ್ಲ ಮುಗಿದಿದ್ದು, ಅಕಾಲಿಕವಾಗಿ ಅದರಲ್ಲೂ ವಾಯುಭಾರ ಕುಸಿತದಿಂದ ಎದುರಾಗಿರುವ ಮಳೆಗೆ ಬಿಸಿಲು ನಾಡು ತತ್ತರಿಸಿದ್ದು, ಅಳಿದುಳಿದ ವಾಣಿಜ್ಯ ಬೆಳೆ ತೊಗರಿ ಮತ್ತಷ್ಟು ನಷ್ಟ ಹೊಂದುವಂತಾಗಿದೆ.

ಹಿಂಗಾರಿನ ಕೊನೆ ಮಳೆ ವಿಶಾಖ ಮಳೆ ಎರಡು ದಿನದ ಹಿಂದೆಯಷ್ಟೇ ಮುಗಿದಿದ್ದು, ಈಗ ಯಾವುದೇ ಮಳೆಯಿಲ್ಲ. ಮಳೆಗಳೆಲ್ಲ ಮುಗಿದ ನಂತರ ನವೆಂಬರ್‌ ತಿಂಗಳಲ್ಲಿ ಮಳೆ ಬಂದಿರುವುದೇ ಅಪರೂಪ. ಒಂದು ವೇಳೆ ಬಂದರೂ ಧಾರಾಕಾರ ಮಳೆ ಸುರಿದಿಲ್ಲ. ಆದರೆ ರವಿವಾರ ಮೋಡ ಕವಿದ ವಾತಾವರಣ ನಡುವೆ ಧಾರಾಕಾರ ಮಳೆ ಸುರಿದಿದೆ.

ಮಳೆಗೆ ಜೋಳ, ಕಡಲೆ ಸಹ ನೀರಲ್ಲಿ ನಿಲ್ಲುವಂತಾಗಿದೆ. ಕಲಬುರಗಿ ಮಹಾನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಒಟ್ಟಾರೆ ರವಿವಾರ ದಿನವಿಡಿ ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಜನ ತೊಂದರೆಗೆ ಒಳಗಾಗಿದ್ದು ಕಂಡು ಬಂತು. ಅತಿವೃಷ್ಟಿಯಿಂದ ಈಗಾಗಲೇ ಅರ್ಧಕ್ಕಿಂತ ಹೆಚ್ಚಿನ ಭೂಮಿಯ ತೊಗರಿ ಬೆಳೆ ನೆಟೆರೋಗಕ್ಕೆ ತುತ್ತಾಗಿದೆ.

ವಿಪರ್ಯಾಸವೆಂದರೆ ಎರಡ್ಮೂರು ಸಲ ಕೀಟನಾಶಕ ಸಿಂಪಡಣೆ ಮಾಡಿದ ಮೇಲೆ ತೊಗರಿ ಬೆಳೆ ಒಣಗಿದೆ. ಹೀಗಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇನ್ನೂ ಎರಡ್ಮೂರು ವಾರ ಕಾಯ್ದರೆ ತೊಗರಿ ಕಟಾವಿಗೆ ಬರುತ್ತದೆ. ಆದರೆ ಅಕಾಲಿಕ ಮಳೆಗೆ ತೊಗರಿ ಸಂಪೂರ್ಣ ನಾಶವಾಗುವಂತಾಗಿದೆ.

ತೊಗರಿ ಹೂವು ಬಾಡಿದ್ದರೆ, ಕಾಯಿ ಹಿಡಿದಿದ್ದ ತೊಗರಿ ನೆಟೆರೋಗಕ್ಕೆ ಒಳಗಾಗಿದೆ. ಉಳಿದಂತೆ ಕಡಲೆ, ಜೋಳಕ್ಕೆ ಮಳೆ ಸ್ವಲ್ಪ ಅನುಕೂಲವಾಗಿದೆ ಎನ್ನಬಹುದು. ಮಳೆ ಇನ್ನಷ್ಟು ಬಂದರೆ ಜೋಳಕ್ಕೂ ಕುತ್ತಾಗುತ್ತದೆ. ಅಕಾಲಿಕ ಮಳೆಯಿಂದ ಜನರು ಸಹ ತೊಂದರೆಗೆ ಒಳಗಾಗಿದ್ದಾರೆ. ಶೀತ ಗಾಳಿಯಿಂದ ಹಲವರು ರೋಗಗಳಿಗೆ ಒಳಗಾಗುವಂತೆ ಮಾಡಿದೆ. ಒಟ್ಟಾರೆ ಈ ಅಕಾಲಿಕ ಮಳೆ ಹಲವಾರು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನೊಂದೆಡೆ ಮಳೆ ಬಂದರೆ ತರಕಾರಿ ಬೆಲೆ ಕಡಿಮೆಯಾಗಬೇಕು. ಆದರೆ ದಿನೇ-ದಿನೇ ಬೆಲೆ ಹೆಚ್ಚಳವಾಗುತ್ತಿದೆ ಎಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.