ಮಳೆಗೆ ತುಂಬಿದ ರಸ್ತೆ ತಗ್ಗು; ವಾಹನ ಸಂಚಾರ ಅಸ್ತವ್ಯಸ್ಥ
Team Udayavani, Jul 6, 2022, 2:45 PM IST
ಚಿಂಚೋಳಿ: ಕಳೆದೆರಡು ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿರುವ ಮಳೆಯಿಂದ ತಾಲೂಕಿನಲ್ಲಿ ಸಂಪೂರ್ಣ ಹದಗೆಟ್ಟಿರುವ ಗಣಾಪುರ-ಕರ್ಚಖೇಡ-ನಿಡಗುಂದಾ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ಲಾರಿಗಳು ಸಿಲುಕಿಕೊಂಡಿದ್ದರಿಂದ ಸುಮಾರು ಐದಾರು ಕಿ.ಮೀ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸೇಡಂ ಮತಕ್ಷೇತ್ರಕ್ಕೆ ಒಳಪಟ್ಟಿರುವ ತಾಲೂಕಿನ ಕುಂಚಾವರಂ-ಭಕ್ತಂಪಳ್ಳಿ-ಗಣಾಪುರ -ಬುರುಗಪಳ್ಳಿ, ಚತ್ರಸಾಲ-ನಿಡಗುಂದಾ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಅಲ್ಲಲ್ಲಿ ದೊಡ್ಡ ತಗ್ಗುಗಳು ಬಿದ್ದಿವೆ. ಈ ತೆಗ್ಗುಗಳಲ್ಲಿ ಮಳೆ ನೀರು ನಿಂತಿದ್ದರಿಂದ ಆಳದ ಅರಿವು ಇಲ್ಲದ ವಾಹನ ಸವಾರರು ಸಿಲುಕಿಕೊಂಡು ಪರದಾಡುವಂತೆ ಆಗಿದೆ. ಬೈಕ್ ಸವಾರರು ಬಿದ್ದು ಸಣ್ಣಪುಟ್ಟ ಗಾಯ ಮಾಡಿಕೊಂಡಿದ್ದಾರೆ.
ಗಣಾಪುರ ಗ್ರಾಮದ ಐತಿಹಾಸಿಕ ಸಂಗಮೇಶ್ವರ ದೇವಸ್ಥಾನ ಬಳಿ ಸೇತುವೆ ಹತ್ತಿರ ಭಾರಿ ತಗ್ಗು ಬಿದ್ದಿದ್ದು ಲಾರಿಯೊಂದು ಸಿಲುಕಿದ್ದರಿಂದ ಛತ್ರಸಾಲ ಸಿಮೆಂಟ್ ಕಂಪನಿಯಿಂದ ಬೇರೆಡೆ ಹೋಗುವ ಲಾರಿಗಳು ರಸ್ತೆಯಲ್ಲೇ ನಿಲ್ಲುವಂತಾಗಿತ್ತು. ಪಟ್ಟಣದ ಚಂದಾಪುರ ನಗರದಲ್ಲಿ ಮಧ್ಯಾಹ್ನ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ಮಳೆಯಲ್ಲೇ ಶಾಲೆ-ಕಾಲೇಜು ವಿದ್ಯಾರ್ಥಿಗಳು ತಮ್ಮ ಊರಿಗೆ ತೆರಳಿದರು. ತಾಂಡೂರ ಕ್ರಾಸ್ನಲ್ಲಿ ಬಸ್ ಶೆಲ್ಟರ್ ಇಲ್ಲದ್ದರಿಂದ ಮಳೆಯಲ್ಲಿಯೇ ನಿಲ್ಲುವಂತಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯಿಂದ ಮುಂಗಾರು ಬೆಳೆಗಳಲ್ಲಿ ಚೇತರಿಕೆ ಕಂಡು ಬರುತ್ತಿದೆ. ಹೆಸರು, ಉದ್ದು, ತೊಗರಿ, ಸೋಯಾಬಿನ್, ಸಜ್ಜೆ, ನವಣಿ, ಹೈಬ್ರಿಡ್ ಜೋಳ ಸೇರಿದಂತೆ ಮುಂಗಾರು ಬೆಳೆಗಳು ನಳನಳಿಸುತ್ತಿವೆ. ಸುಲೇಪೇಟ, ಕೋಡ್ಲಿ, ಚಿಮ್ಮನಚೊಡ,ನಿಡಗುಂದಾ, ಕೊರವಿ, ಚಿಂಚೋಳಿ, ಕುಂಚಾವರಂ, ಸಾಲೇಬೀರನಳ್ಳಿ, ಹಸರ ಗುಂಡಗಿ, ಚಂದನಕೇರಾ ಗ್ರಾಮಗಳಲ್ಲಿ ಹೆಸರು , ಉದ್ದು. ತೊಗರಿ ಬೆಳೆಗಳು ಸಮ್ಮದ್ಧಿಯಾಗಿ ಬೆಳೆದಿರುವುದರಿಂದ ರೈತರು ಬೆಳೆಯಲ್ಲಿ ಎಡೆ ಹೊಡೆಯುತ್ತಿದ್ದಾರೆ. ಹುಲ್ಲು ಕೀಳುವುದು. ಕೀಟ ನಾಶಕ ಸಿಂಪರಣೆ ನಡೆಸಲಾಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ