ರೆಡ್ಡಿ ಸಮಾಜದ ಬಡವರಿಗೆ ನೆರವು ನೀಡಿ: ದರ್ಶನಾಪುರ
Team Udayavani, Jan 21, 2022, 11:26 AM IST
ಸೇಡಂ: ರೆಡ್ಡಿ ಸಮಾಜದಲ್ಲೂ ಬಡವರಿದ್ದಾರೆ. ಅವರ ನೆರವಿಗೆ ಬರುವ ಅವಶ್ಯಕತೆ ಇದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.
ತಾಲೂಕಿನ ಹೂಡಾ ಜವಾಹರನಗರ ಬಳಿ ನಿರ್ಮಿಸಲಾಗುತ್ತಿರುವ ಮಹಾಸ್ವಾ ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ ದೇವಾಲಯಕ್ಕೆ ಭೇಟಿ ನೀಡಿ, ನಂತರ ವೇಮನ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಕಲಬುರಗಿ ಜಿಲ್ಲೆಯ ವಿವಿದೆಢೆಯಲ್ಲಿ ಹೇಮರೆಡ್ಡಿ ಮಲ್ಲಮ್ಮ ದೇವಾಲಯಗಳ ನಿರ್ಮಾಣ ಕಾರ್ಯ ನಡೆದಿದೆ. ವೇಮನ ವೈರಾಗ್ಯಶೀಲರಾಗಿ, ಕಾಯಕನಿಷ್ಠರಾಗಿ ಜೀವಿಸಿ ತತ್ವಪದ್ಯಗಳನ್ನು ಭೋಧಿ ಸುವ ಮೂಲಕ ಸಮಾಜದಲ್ಲಿ ತತ್ವ ಜ್ಞಾನಿಯಾದರು. ಅವರ ತತ್ವದಿಂದ ಅದರ್ಶವ್ಯಕ್ತಿಗಳಾಗಿ ಬದುಕಲು ಕಲಿಯೋಣ ಎಂದರಲ್ಲದೇ ದೇವಾಲಯ ನಿರ್ಮಾಣಕ್ಕೆ 5 ಲಕ್ಷ ರೂ. ವೈಯಕ್ತಿಕ ನೆರವು ನೀಡುವುದಾಗಿ ತಿಳಿಸಿದರು.
ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಚನ್ನಾರೆಡ್ಡಿ ಪಾಟೀಲ ಮಾತನಾಡಿ, ಶಿಕ್ಷಣದ ಮೂಲಕ ಸಮಾಜವನ್ನು ಸಂಘಟಿಸುವ ಅವಶ್ಯಕತೆ ಇದೆ. ಇದರಿಂದ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸಾಧ್ಯ ಎಂದರು.
ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ, ರೆಡ್ಡಿ ಸಮಾಜದ ಅಧ್ಯಕ್ಷ ನಾಗಭೂಷಣರೆಡ್ಡಿ ಪಾಟೀಲ, ಹೇಮ ವೇಮ ಟ್ರಸ್ಟ್ ಅಧ್ಯಕ್ಷ ಶರಣರೆಡ್ಡಿ ಜಿಲ್ಲೇಡಪಲ್ಲಿ, ಭೂದಾನಿ ಮಾಣಿಕರೆಡ್ಡಿ ಹಾಶನಪಲ್ಲಿ, ರೆಡ್ಡಿ ಸಮಾಜದ ಜಿಲ್ಲಾ ಉಪಾಧ್ಯಕ್ಷ ಬಿ.ಆರ್. ಪಾಟೀಲ, ಶಾಂತರೆಡ್ಡಿ, ನಾಗರೆಡ್ಡಿ ಪಾಟೀಲ ಕರದಾಳ, ರೆಡ್ಡಿ ಸಮಾಜದ ಯುವ ಘಟಕ ಅಧ್ಯಕ್ಷ ಶಿವಲಿಂಗರೆಡ್ಡಿ ಪಾಟೀಲ ಬೆನಕನಹಳ್ಳಿ, ಲಕ್ಷ್ಮೀ ಪಲ್ಲಾರೆಡ್ಡಿ, ರಾಮರೆಡ್ಡಿ ಪಾಟೀಲ ನಾಲವಾರ, ಶರಣಭೂಪಾಲರೆಡ್ಡಿ ಹಾಬಾಳ, ಅನಂತರೆಡ್ಡಿ ಪಾಟೀಲ ಹಾಶನಪಲ್ಲಿ, ಸತೀಶರೆಡ್ಡಿ ಪಾಟೀಲ ರಂಜೋಳ, ಬಿಜೆಪಿ ಅಧ್ಯಕ್ಷ ಪರ್ವತರೆಡ್ಡಿ ಪಾಟೀಲ ನಾಮವಾರ, ವೀರಾರೆಡ್ಡಿ ಹೂವಿನಬಾವಿ ಇತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ