ಕಾಳಗಿಯಲ್ಲಿ ಹೈಟೆಕ್ ಬಸ್ ನಿಲ್ದಾಣ: ಜಾಧವ
Team Udayavani, Dec 19, 2021, 10:47 AM IST
ಕಾಳಗಿ: ಪಟ್ಟಣದಲ್ಲಿ ಈಗಿರುವ ಹಳೆ ಬಸ್ ನಿಲ್ದಾಣದ ಹಿಂದಿನ ಸುಮಾರು ಎರಡು ಎಕರೆ ಜಾಗದಲ್ಲಿ ಅಂದಾಜು 6.69 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಶಾಸಕ ಡಾ| ಅವಿನಾಶ ಜಾಧವ ಹೇಳಿದರು.
ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹೈಟೆಕ್ ಬಸ್ ನಿಲ್ದಾಣಕ್ಕಾಗಿ ದೊಡ್ಡ ಮೊತ್ತದ ಅನುದಾನ ತಂದಿದ್ದು, ಜನಮೆಚ್ಚುವಂತ ಗುಣ ಮಟ್ಟದ ಕಾಮಗಾರಿ ಮಾಡುವ ಮೂಲಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅನು ದಾನದ ಹಣ ಸಾರ್ಥಕವಾಗುವಂತೆ ಮಾಡ ಬೇಕು ಎಂದು ಹೇಳಿದರು.
ಕಾಳಗಿ ತಾಲೂಕಿಗೆ ಬೇಕಾದ ಎಲ್ಲ ಸರ್ಕಾರಿ ಕಚೇರಿಗಳನ್ನು ಒಂದೊಂದಾಗಿ ಸ್ಥಾಪಿಸುವ ಉದ್ದೇಶ ಇಟ್ಟುಕೊಂಡಿದ್ದೇವೆ. ಕೆಲವೇ ದಿನಗಳಲ್ಲಿ ಮಿನಿ ವಿಧಾನಸೌಧ, ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಿದ್ದೇವೆ ಎಂದು ಭರವಸೆ ನೀಡಿದರು.
ಕೊಟ್ಟ ಮಾತಿನಂತೆ ಚಿಂಚೋಳಿ ಸಕ್ಕರೆ ಕಾರ್ಖಾನೆ ನಿರ್ಮಾಣ ಪ್ರಾರಂಭವಾಗಿದೆ. ಇದಕ್ಕೆ ಪೂರಕವಾಗುವಂತೆ ಬೆಣ್ಣೆತೊರೆ ಕಾಲುವೆಗಳ ಕೆಲಸವನ್ನು ಶೀಘ್ರವೇ ಪೂರ್ಣಗೊಳಿಸಿ ಕಬ್ಬು ಬೆಳೆಯುವ ರೈತರ ಅನುಕೂಲಕ್ಕಾಗಿ ಎಲ್ಲ ಹೊಲಗಳಿಗೂ ಟ್ರ್ಯಾಕ್ಟರ್, ಬೈಕ್ ಹಾಗೂ ಇನ್ನಿತರ ವಾಹನಗಳ ಓಡಾಟಕ್ಕೆ ರಸ್ತೆ ನಿರ್ಮಿಸಲಾಗುವುದು ಎಂದು ಹೇಳಿದರು.
ಕಲಬುರಗಿ ಸಂಸದ ಡಾ| ಉಮೇಶ ಜಾಧವ ಮಾತನಾಡಿ, ರಾಜ್ಯದಲ್ಲಿ ಉದಯವಾದ ಹೊಸ ತಾಲೂಕುಗಳಲ್ಲೇ ಪ್ರಥಮ ಬಾರಿ ಕಾಳಗಿಯಲ್ಲೇ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗುತ್ತಿದೆ ಎಂದರಲ್ಲದೇ, ವಿಧಾನ ಪರಿಷತ್ ಚುನಾವಣೆಯಲ್ಲಿ ಅತಿ ಹೆಚ್ಚಿನ ಲೀಡ್ ನೀಡಿದ ಚಿಂಚೋಳಿ-ಕಾಳಗಿ ಜನತೆಗೆ ಅಭಿನಂದನೆ ಹೇಳಿದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಗೌತಮ ಪಾಟೀಲ, ಚಿಂಚೋಳಿ ಬಿಜೆಪಿ ಮುಖಂಡ ಲಕ್ಷ್ಮಣ ಅವುಂಟಿ ಮಾತನಾಡಿದರು.
ಭೂದಾನಿ ಸಹೋದರರಾದ ಕೃಷ್ಣಯ್ಯ ಗುತ್ತೇ ದಾರ, ನಿಂಗಯ್ಯ ಗುತ್ತೇದಾರ, ತಾಪಂ ಮಾಜಿ ಅಧ್ಯಕ್ಷ ರೇವಣಸಿದ್ಧಪ್ಪ ಮಾಸ್ಟರ್ ಚಿಂಚೋಳಿ, ಜಿಪಂ ಮಾಜಿ ಸದಸ್ಯ ರಾಮಲಿಂಗಾರೆಡ್ಡಿ ದೇಶಮುಖ, ಚಂದ್ರಶೇಖರ ಹರಸೂರ, ಚಿಂಚೋಳಿ ಮಂಡಲ ಬಿಜೆಪಿ ಅಧ್ಯಕ್ಷ ಸಂತೋಷ ಗಡಂತಿ, ಪ್ರಧಾನ ಕಾರ್ಯದರ್ಶಿ ಶೇಖರ ಪಾಟೀಲ, ಸಂತೋಷ ಪಾಟೀಲ ಮಂಗಲಗಿ, ಸಂತೋಷ ಜಾಧವ, ದೇವಾ ಕದಂ, ಜಗದೀಶ ಪಾಟೀಲ ರಾಜಾಪುರ, ಶಿವಶರಣಪ್ಪ ಗುತ್ತೇದಾರ, ಉಮೇಶ ಚವ್ಹಾಣ, ರಮೇಶ ಕಿಟ್ಟದ, ಪ್ರಶಾಂತ ಕದಂ, ವಿಜಯಕುಮಾರ ಚೇಂಗಟಿ, ಶಿವರಾಜ ಪಾಟೀಲ ಅರಣಕಲ್, ತಾರು ಸೇಠ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು