ಎಚ್ಕೆಇ- ಎಚ್ಕೆಸಿಸಿಐ ಚುನಾವಣೆ: ಮತದಾರರಲ್ಲಿ ಸಂಚಲನ

13 ಆಡಳಿತ ಮಂಡಳಿ ಸದಸ್ಯ ಸ್ಥಾನಕ್ಕೆ ಒಟ್ಟಾರೆ 50 ಜನರು ಸ್ಪರ್ಧಿಸುವ ಸಾಧ್ಯತೆಗಳಿವೆ.

Team Udayavani, Jan 18, 2021, 4:41 PM IST

Election-Gulbarga

ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರತಿಷ್ಠಿತ ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ (ಎಚ್ಕೆಇ) ಸಂಸ್ಥೆ ಹಾಗೂ ಹೈದರಾಬಾದ್‌ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಎಚ್ಕೆಸಿಸಿಐ) ಸಂಸ್ಥೆಗೆ ದಿಢೀರ್‌ ಚುನಾವಣೆ ನಿಗದಿಯಾಗಿರುವುದು ಮತದಾರರಲ್ಲಿ ತೀವ್ರ ಸಂಚಲನ ಮೂಡಿದೆ.

ಎಚ್ಕೆಇ ಸಂಸ್ಥೆ ಗೆ ಪ್ರತಿ ಮೂರು ವರ್ಷಕ್ಕೊಮ್ಮೆ ಮಾರ್ಚ್‌ ಕೊನೆ ವಾರದಲ್ಲೇ ನಡೆಯುತ್ತದೆ. ಆದರೆ ಈಗ ಬರುವ ಫೆ.27ರಂದೇ ನಡೆಯುತ್ತಿದೆ. ಮಾರ್ಚ್‌ ತಿಂಗಳಲ್ಲಿ ಚುನಾವಣೆ ನಡೆಯಬಹುದು ಎಂದುಕೊಂಡಿದ್ದ ಸದಸ್ಯರಿಗೆ ದಿಢೀರ್‌ ಚುನಾವಣೆ ಎದುರಾಗಿರುವುದು ಹಾಗೂ ಅದೇ ರೀತಿ ಕಳೆದ 2020 ರ ಮಾ.29 ರಂದು ನಿಗದಿಯಾಗಿದ್ದ ಎಚ್‌ ಕೆಸಿಸಿಐನ ಚುನಾವಣೆಯು ಕೋವಿಡ್‌ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ನಂತರ ಅನೇಕ ಬೆಳವಣಿಗೆಗಳು ನಡೆದು ಕೊನೆಗೆ ನ್ಯಾಯಾಲಯ ಮೆಟ್ಟಿಲೇರಿದ ಮೇಲೆ ಈಗ ಒಮ್ಮೇಲೆ ಚುನಾವಣೆ ಫೆ.14 ರಂದು ನಿಗದಿಯಾಗಿರುವುದು ಸಂಸ್ಥೆ ಸದಸ್ಯರಾಗಿರುವ ವ್ಯಾಪಾರಿಗಳಲ್ಲಿ ಆಶ್ಚರ್ಯ ಹಾಗೂ ಕುತೂಹಲ ಮೂಡಿಸಿದೆ. ಈ ಎರಡೂ ಸಂಸ್ಥೆಗಳ ಚುನಾವಣೆ ಗೆ ಸ್ಪ ರ್ಧಿಸುವರು ತಮ್ಮ ಪ್ರತಿಷ್ಠೆ ಪಣಕ್ಕಿಡುವುದರಿಂದ ರಾಜಕೀಯ ಕ್ಷೇತ್ರದ ಚುನಾವಣೆ ಮೀರಿಸುವ ಮಟ್ಟಿಗೆ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇರುತ್ತವೆ. ಇದೇ ಕಾರಣಕ್ಕೆ ಈ ಎರಡೂ ಸಂಸ್ಥೆಗಳ ಚುನಾವಣೆ ಒಂದು ಮಿನಿ ಚುನಾವಣೆ
ಎನ್ನಬಹುದಾಗಿದೆ.

ಎಚ್ಕೆಇ ಸಂಸ್ಥೆ ಸಾವಿರಾರು ಕೋಟಿ ರೂ. ಆಸ್ತಿ ಹೊಂದಿದೆ. ವೈದ್ಯಕೀಯ ಕಾಲೇಜು, ಸಾರ್ವಜನಿಕ ಬೋಧನಾ ಆಸ್ಪತ್ರೆ, ಇಂಜಿನಿಯರಿಂಗ್‌ ಕಾಲೇಜು
ಸೇರಿ ಹತ್ತಾರು ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ. ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು ಅಲ್ಲದೇ ರಾಜ್ಯದ ರಾಜಧಾನಿ ಬೆಂಗಳೂರಲ್ಲೂ ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ. ಸಂಸ್ಥೆಯಲ್ಲಿ ಸಾವಿರಾರು ನೌಕರರು ಇದ್ದಾರೆ. ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಾದವರು ಹೆಸರಿನ ಜತೆಗೆ ಇತರ ಆರ್ಥಿಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇದೇ ಕಾರಣಕ್ಕೆ ದೊಡ್ಡ ಫೈಟ್‌. ಇನ್ನೂ ಎಚ್ಕೆಸಿಸಿಐ ಅಧ್ಯಕ್ಷರಾದವರು ಮಾರುಕಟ್ಟೆಯಲ್ಲಿ ಹೆಸರು ಮಾಡುವುದರ ಜತೆಗೆ ಸಾಮಾಜಿಕ, ರಾಜಕೀಯ ಜತೆಗೆ ಔದ್ಯೋಗಿಕವಾಗಿ ಮುನ್ನಡೆ ಸಾಧಿ ಸಬಹುದಾಗಿದೆ.

ಎಚ್ಕೆಇ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಮತ್ತೂಮ್ಮೆ ತಮ್ಮ ಪೆನಲ್‌ ದೊಂದಿಗೆ ಸ್ಪರ್ಧಿಸಲು ವೇದಿಕೆ ಸಿದ್ಧ ಮಾಡಿಕೊಂಡಿದ್ದಾರೆ. ಅದೇ ರೀತಿ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ ಹಾಗೂ ವಿಧಾನ ಪರಿಷತ್‌ ನೂತನ ಸದಸ್ಯ ಶಶೀಲ್‌ ಜಿ.ನಮೋಶಿ ಪೆನಲ್‌ ದೊಂದಿಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಮುಂದಾಗಿ ಮತದಾರ ಬಳಿ ತೆರಳಲು ಮುಂದಾಗಿದ್ದಾರೆ. ಖ್ಯಾತ ವೈದ್ಯರಾದ ಡಾ.ಶರಣಬಸಪ್ಪ ಕಾಮರಡ್ಡಿ ಸಹ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

13 ಆಡಳಿತ ಮಂಡಳಿ ಸದಸ್ಯ ಸ್ಥಾನಕ್ಕೆ ಒಟ್ಟಾರೆ 50 ಜನರು ಸ್ಪರ್ಧಿಸುವ ಸಾಧ್ಯತೆಗಳಿವೆ. ಶಾಸಕರ ಸಂಬಂಧಿ ಕರು ಆಡಳಿತ ಮಂಡಳಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸುವುದರಿಂದ ಚುನಾವಣಾ ಅಖಾಡ ಮತ್ತಷ್ಟು ರಂಗೇರುವಂತೆ ಮಾಡಲಿದೆ. ಇನ್ನೂ ಎಚ್ಕೆಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಅಮರನಾಥ ಪಾಟೀಲ್‌, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೆಂಟ (ಸೊಸೆಯ ಸಹೋದರ) ಪ್ರಶಾಂತ ಶಿವಾನಂದ ಮಾನಕರ ಸೇರಿದಂತೆ ಮತ್ತಿತರರು ಕಣದಲ್ಲಿರುವುದರಿಂದ ಚುನಾವಣೆ ಮತ್ತಷ್ಟು ರಂಗೇರುವಂತೆ ಮಾಡಿದೆ. ಎಚ್ಕೆಇ ಮತದಾರರಲ್ಲಿ ಅರ್ಧದಷ್ಟು ಮತದಾರರು ಎಚ್ಕೆಸಿಸಿಐ ಮತದಾರರಾಗಿದ್ದಾರೆ. ಹೀಗಾಗಿ ಈ ಎರಡು ಸಂಸ್ಥೆಗಳು ಒಂದಕ್ಕೊಂದು ಸಂಬಂಧ ಹೊಂದಿವೆ.

ಕಡ್ಡಾಯ ಮತದಾನ ಮತ್ತೆ ಚಾಲ್ತಿಗೆ
ಮೂರು ವರ್ಷಗಳ ಹಿಂದೆ ಚುನಾವಣೆ ಸಂದರ್ಭದಲ್ಲಿ ಮತದಾರನ ತನ್ನ ಮತ ಯಾವುದೇ ಸಂದರ್ಭದಲ್ಲಿ ಬಹಿರಂಗಗೊಳ್ಳಬಾರದು. ಗೌಪ್ಯತೆ ನಡೆಯಬೇಕೆಂದು
ಬಲವಾಗಿ ಕೇಳಿ ಬಂದಿತ್ತು. ಅಂದರೆ ಮತಪತ್ರದ ಮೇಲೆ ನಮೂದಿಸಲಾದ ಸಂಖ್ಯೆಯನ್ನು ಆಧರಿಸಿ ನಂತರ ಯಾರಿಗೆ ಮತ ಎಂಬುದನ್ನು ಅವಲೋಕಿಸಬಹುದಿತ್ತು.

ಅದೇ ಕಾರಣಕ್ಕೆ ಮತದಾರರು ವಾಗ್ಧಾನ ಮಾಡಿದವರಿಗೆ ಮತ ಹಾಕುತ್ತಿದ್ದರು. ಆದರೆ ಕಳೆದ 2018ರಲ್ಲಿ ನಡೆದ ಚುನಾವಣೆಯಲ್ಲಿ ಗೌಪ್ಯತೆ ಮತದಾನ ಕಾರ್ಯರೂಪಕ್ಕೆ ತರಲಾಯಿತು. ಹೀಗಾಗಿ ಮತದಾರರು ಮುಕ್ತವಾಗಿ ಮತದಾನ ಮಾಡಿದರು. ಈಗ 13 ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ಮತದಾರರು ಕಡ್ಡಾಯವಾಗಿ ಕಣದಲ್ಲಿರುವ 13 ಜನರಿಗೆ ಮತದಾನ ಮಾಡಬೇಕೆಂಬ ಮಾತು ಕೇಳಿ ಬರುತ್ತದೆ.

ಮೂರು ವರ್ಷದ ಅವಧಿ ವಿಸ್ತೀರ್ಣಗೊಳ್ಳಲಿ
ಎಚ್‌ಕೆಇ ಸಂಸ್ಥೆಯ ಚುನಾವಣೆ ಮೂರು ವರ್ಷಕ್ಕೊಮ್ಮೆ ನಡೆಯುತ್ತದೆ. ಆದರೆ ಎಚ್‌ಕೆಸಿಸಿಐ ಚುನಾವಣೆ ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ. ಒಂದು ಆಡಳಿತದ
ಅವಧಿ ಮೂರು ವರ್ಷಕ್ಕೆ ವಿಸ್ತೀರ್ಣಗೊಳ್ಳಬೇಕೆಂಬ ಬೇಡಿಕೆ ಕಾರ್ಯರೂಪಕ್ಕೆ ಬಾರದೇ ಹಾಗೆ ಬರಲಾಗುತ್ತಿದೆ. ಪ್ರತಿ ಚುನಾವಣೆ ಬಂದಾಗೊಮ್ಮೆ ಅವಧಿ ಮೂರು ವರ್ಷವಾಗಬೇಕೆನ್ನುತ್ತಾರೆ. ಆದರೆ ನಂತರ ಮರೆತು ಬಿಡಲಾಗುತ್ತಿದೆ. ಈ ಸಲವಾದರೂ ಈ ಬೇಡಿಕೆ ಬಲಗೊಂಡು ಕಾರ್ಯರೂಪಕ್ಕೆ ಬರಲಿ ಎಂಬುದೇ ಮತದಾರರ ಅಭಿಪ್ರಾಯವಾಗಿದೆ.

*ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.