ಉಗ್ರಾಣಕ್ಕೆ ರಂಧ್ರ: ಕೇಸ್ ದಾಖಲು
Team Udayavani, Dec 8, 2021, 12:45 PM IST
ಚಿಂಚೋಳಿ: ತಾಲೂಕಿನ ಗಡಿಪ್ರದೇಶ ಕುಂಚಾವರಂ ಗ್ರಾಪಂ ಕಾರ್ಯಾಲಯಕ್ಕೆ ಹೊಂದಿಕೊಂಡಿರುವ ಉಗ್ರಾಣ ಕೋಣೆಗೆ ಯಂತ್ರದಿಂದ ದೊಡ್ಡ ರಂಧ್ರ ಕೊರೆದು ಹಾನಿ ಮಾಡಿದ ಆರೋಪದ ಮೇಲೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅ ಧಿಕಾರಿ, ಪಿಡಿಒ ಹಾಗೂ ವ್ಯಾಪಾರಿಯೊಬ್ಬರ ವಿರುದ್ಧ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಇಂದಿರಾ ಪಾಟೀಲ ತಿಳಿಸಿದ್ದಾರೆ.
ಕುಂಚಾವರಂನ ಸಂದೀಪ ಬಕ್ಕಪ್ಪ ಎನ್ನುವಾತ ತನ್ನ ಸಿಹಿತಿಂಡಿಯ ವ್ಯಾಪಾರ, ವಹಿವಾಟು ನಡೆಸಲು ಗ್ರಾಪಂ ಮಳಿಗೆಯೊಂದನ್ನು ಬಾಡಿಗೆ ಪಡೆದುಕೊಂಡಿದ್ದರು. ಆದರೆ ಬಾಡಿಗೆ ನೀಡಿದ ಅಂಗಡಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ನೆಲಸಮವಾಗಿತ್ತು. ನಂತರ ಸಿಹಿತಿಂಡಿ ವ್ಯಾಪಾರಿ ಗ್ರಾಪಂ ಕಟ್ಟಡದಲ್ಲಿಯೇ ಮಳಿಗೆ ಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ಗ್ರಾಪಂ ಸದಸ್ಯರು ಸಭೆ ನಡೆಸಿ, ಸಿಹಿತಿಂಡಿ ವ್ಯಾಪಾರಿಗೆ ಮಳಿಗೆ ನೀಡಬಾರದೆಂದು ವಿರೋಧ ವ್ಯಕ್ತಪಡಿಸಿ ನಿರ್ಣಯ ಅಂಗೀಕರಿಸಿದ್ದರು. ಆದರೂ ಅಂಗಡಿ ಆರಂಭಿಸುವ ಸಲುವಾಗಿ ಉಗ್ರಾಣ ಕೋಣೆಗೆ ಯಂತ್ರದ ಸಹಾಯದಿಂದ ರಂಧ್ರ ಕೊರೆಯಲಾಗಿತ್ತು. ಇದನ್ನು ಪ್ರಶ್ನಿಸಿದವರಿಗೆ ಜೀವ ಭಯ ಹಾಕಿದ್ದಾರೆ ಎಂದು ಪೋಚಾವರಂ ಗ್ರಾಮದ ಅಶೋಕ ಮಸಾನಿ ಕುಂಚಾವರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಕುಂಚಾವರಂ ಪಿಎಸ್ಐ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ