ವರ್ಷದೊಳಗೆ ವಸತಿ ಹೀನರಿಗೆ ಒದಗಲಿದೆ ಗೃಹಭಾಗ್ಯ


Team Udayavani, Apr 5, 2022, 9:41 AM IST

1house

ವಾಡಿ: ಪಟ್ಟಣದ ಹೊರ ವಲಯದ 16 ಎಕರೆ ಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಶಾಸಕ ಪ್ರಿಯಾಂಕ್‌ ಖರ್ಗೆ ಅವರ ಕನಸಿನ ಯೋಜನೆ “ಪ್ರಗತಿ ಕಾಲೋನಿ’ಯಲ್ಲಿ ಸ್ಥಳೀಯ ಸಾವಿರಾರು ಜನ ವಸತಿ ಹೀನರಿಗೆ ಗೃಹಭಾಗ್ಯ ಒದಗಿಸಲು ಯೋಜನೆ ಪೂರ್ಣಗೊಂಡಿದ್ದು, ಸಿದ್ಧಗೊಂಡಿರುವ 500 ಫಲಾನುಭವಿಗಳ ಪಟ್ಟಿ ಶಾಸಕರ ಅನುಮೋದನೆಗಾಗಿ ಕಾಯುತ್ತಿದೆ.

ಸ್ವಾತಂತ್ರ್ಯಾ ನಂತರ ಇದೇ ಮೊದಲ ಬಾರಿಗೆ ಪಟ್ಟಣದ ಬಡ ಕುಟುಂಬಗಳಿಗೆ ಶಾಸಕರೊಬ್ಬರು ವಸತಿ ಸೌಲಭ್ಯ ಒದಗಿಸುತ್ತಿದ್ದಾರೆ. ಜಿ+1 ಮಾದರಿಯಲ್ಲಿ ಸಾವಿರ ಮನೆಗಳ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಗೊಂಡಿದ್ದು, ಭೂಮಿಪೂಜೆಗೆ ದಿನಗಣನೆ ಶುರುವಾಗಿದೆ. ಫಲಾನುಭವಿಗಳ ತಲಾ ಒಂದು ಗೃಹ ನಿರ್ಮಾಣಕ್ಕೆ ಒಟ್ಟು 6.50 ಲಕ್ಷ ರೂ. ಖರ್ಚಾಗುತ್ತಿದೆ.

ಪಜಾ, ಒಬಿಸಿ ಫಲಾನುಭವಿಗೆ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 1.5 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ ಪಜಾ ಫಲಾನುಭವಿಗೆ 1.80 ಲಕ್ಷ ರೂ. ಒಬಿಸಿಗೆ 1.2 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ. ಬ್ಯಾಂಕ್‌ ಸಾಲ ಪಜಾಗೆ 2.55 ಲಕ್ಷ ಮತ್ತು ಒಬಿಸಿ ಇತರರಿಗೆ 3.15 ಲಕ್ಷ ರೂ. ಮಂಜೂರು ಮಾಡಲಾಗುತ್ತಿದೆ. ಫಲಾನುಭವಿಗಳು ಅರ್ಜಿಗಳ ಜತೆಗೆ ಆರಂಭಿಕ ಶುಲ್ಕವಾಗಿ 65000 ರೂ. ಪುರಸಭೆಗೆ ಪಾವತಿಸಬೇಕಿದೆ.

ಈಗಾಗಲೇ 525 ಜನ ಕುಟುಂಬಗಳು ಪುರಸಭೆ ಹೆಸರಿನಲ್ಲಿ ತಲಾ 10,000 ರೂ. ಮೊತ್ತದ ಡಿಡಿ ಜಮೆ ಮಾಡಿದ್ದಾರೆ. ಇದೇ ವೇಳೆ ಬಹುತೇಕ ಬಡ ಕುಟುಂಬಗಳು ಬ್ಯಾಂಕ್‌ ಸಾಲದ ಹೊರೆಗೆ ಹೆದರಿ ವಸತಿ ಸೌಲಭ್ಯ ಪಡೆಯುವಲ್ಲಿ ಹಿಂದೇಟು ಹಾಕಿರುವುದು ಕಂಡು ಬಂದಿದೆ. ನ್ಯೂ ಟೌನ್‌ (ಪ್ರಗತಿ ಕಾಲೋನಿ) ನಿರ್ಮಾಣದ ಮನೆಗಳಿಗೆ ಪಡೆಯಲಾಗುತ್ತಿರುವ ದುಬಾರಿ ಮೊತ್ತದ ವಂತಿಗೆ ವಿರೋಧಿ ಸಿ ಕೆಲವರು ಪ್ರತಿಭಟನೆ ನಡೆಸಿದ್ದು, ಅನೇಕರಿಗೆ ಸರ್ಕಾರದ ಈ ವಸತಿ ಸೌಕರ್ಯ ಕೈಗೆಟುಕದಂತಾಗಿದೆ.

ಪರ ವಿರೋಧದ ಚರ್ಚೆಯ ನಡುವೆಯೂ ಮನೆಗಳನ್ನು ನಿರ್ಮಿಸಲು ಭರದ ಸಿದ್ಧತೆಯಲ್ಲಿರುವ ಪುರಸಭೆ ಆಡಳಿತ, ಮೊದಲ ಹಂತದ ಭಾಗವಾಗಿ ಐದು ನೂರು ಫಲಾನುಭವಿಗಳ ಪಟ್ಟಿಯನ್ನು ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ರವಾನಿಸಿದೆ. ಶಾಸಕರ ಅನುಮೋದನೆಯ ನಂತರ ಕಡತವು ರಾಜೀವ್‌ಗಾಂಧಿ  ನಿಗಮಕ್ಕೆ ಕಳುಹಿಸುತ್ತೇವೆ. ಇಲ್ಲಿ ಅರ್ಜಿ ದಾಖಲೆಗಳ ಪರಾಮರ್ಶೆ ನಡೆಯುತ್ತದೆ. ದಾಖಲೆಗಳು ಸಮರ್ಪಕವಾಗಿಲ್ಲದ ಅರ್ಜಿಗಳು ತಿರಸ್ಕೃತಗೊಳ್ಳುತ್ತವೆ. ನಂತರ ಅಂತಿಮ ಪಟ್ಟಿ ಸಿದ್ಧಗೊಳ್ಳುತ್ತದೆ ಎಂದು ಪುರಸಭೆ ಮುಖ್ಯಾ ಧಿಕಾರಿ ಡಾ| ಚಿದಾನಂದ ಸ್ವಾಮಿ ಹಾಗೂ ನೂಡಲ್‌ ಅಭಿಯಂತರ ಮನೋಜಕುಮಾರ ಹಿರೋಳಿ ಪ್ರತಿಕ್ರಿಯಿಸಿದ್ದಾರೆ.

ಪುರಸಭೆ ವ್ಯಾಪ್ತಿಯಲ್ಲಿ ಒಂದೇಯೊಂದು ಸರ್ಕಾರಿ ಕಟ್ಟಡ ಕಟ್ಟಲು ಜಾಗ ಇರಲಿಲ್ಲ. ನಮ್ಮ ಅವಧಿಯಲ್ಲಿ 100 ಎಕರೆ ಭೂಮಿ ಖರೀದಿಸಿ ಕೊಟ್ಟಿದ್ದೀನಿ. ಜಿ+1 ಮಾದರಿಯಲ್ಲಿ ಸಾವಿರ ಮನೆಗಳನ್ನು ಕಟ್ಟಲು ತೀರ್ಮಾನಿಸಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದೇನೆ. ಕೊರೊನಾ ಸಂಕಷ್ಟದಿಂದ ಜನರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬ್ಯಾಂಕ್‌ ಸಾಲ ಕಡಿಮೆ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಬಿಜೆಪಿ ಸರ್ಕಾರ ಮಾತ್ರ ಇದಕ್ಕೆ ಒಪ್ಪುತ್ತಿಲ್ಲ. ಮಂಜೂರು ಮಾಡಿದಷ್ಟು ಮನೆಗಳನ್ನು ಗುಣಮಟ್ಟದಡಿ ನಿರ್ಮಿಸುತ್ತೇವೆ. ಮನೆಗಳ ಗುಣಮಟ್ಟ ನೋಡಿದ ಬಳಿಕ ಇನ್ನಷ್ಟು ಜನರು ವಸತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. -ಪ್ರಿಯಾಂಕ್‌ ಖರ್ಗೆ. ಶಾಸಕರು ಚಿತ್ತಾಪುರ

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.