ಪಾಲಿಕೆ ಫೈಟ್: ಚುನಾವಣೆಗೆ ಎಷ್ಟು ಖರ್ಚು ಮಾಡ್ತೀರಿ?

ಪಕ್ಷ ತ್ಯಜಿಸಿ ಮತ್ತೂಂದು ಪಕ್ಷಕ್ಕೆ ಹೋಗಿ ಟಿಕೆಟ್‌ ಪಡೆಯುತ್ತಿರುವ ವಿದ್ಯಮಾನಗಳು ನಡೆಯುತ್ತಿವೆ.

Team Udayavani, Aug 21, 2021, 5:24 PM IST

ಪಾಲಿಕೆ ಫೈಟ್: ಚುನಾವಣೆಗೆ ಎಷ್ಟು ಖರ್ಚು ಮಾಡ್ತೀರಿ?

ಕಲಬುರಗಿ: ದಿಢೀರನೇ ಹಾಗೂ ಚುನಾವಣೆ ಪ್ರಚಾರಕ್ಕೆ ಕೇವಲ ಒಂದೇ ವಾರ ಸಮಯ ಇರುವುದರಿಂದ ಪಾಲಿಕೆ ಚುನಾವಣೆ ಒಮ್ಮೆಲೆ ತಾರಕಕ್ಕೆರಿದ್ದು, ಸ್ಪರ್ಧಾ ಆಕಾಂಕ್ಷಿಗಳಲ್ಲಿ ಹಾಗೂ ಜನಪ್ರತಿನಿಧಿಗಳಲ್ಲಿ ಮತ್ತು ವಿವಿಧ ಪಕ್ಷಗಳ ಮುಖಂಡರಲ್ಲಿ ಸಂಚಲನ ಮೂಡಿದೆ.

ಚುನಾವಣೆಗೆ ಅಧಿಸೂಚನೆಯಾಗಿ ನಾಮಪತ್ರ ಸಲ್ಲಿಸಲು ವಾರಕ್ಕಿಂತ ಕಡಿಮೆ ಸಮಯ ಇರುವುದರಿಂದ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹಗಲಿರಳು ಸರಣಿ ಸಭೆ ಹಾಗೂ ಅಭಿಪ್ರಾಯ ಕ್ರೋಢಿಕರಿಸಿದರೂ ಎಷ್ಟೇ ಕಸರತ್ತು ನಡೆಸುತ್ತಿದ್ದರೂ ಸರಳವಾಗಿ ಸ್ಪರ್ಧಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಆಗುತ್ತಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಸೋಮವಾರ ಆ. 23ರಂದೇ ನೂಕು ನುಗ್ಗಲು ಎನ್ನುವಂತೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಚುನಾವಣೆ ದಿನಾಂಕ ನಿಗದಿಯಾಗಿದ್ದರೂ ಕೊನೆ ಘಳಿಗೆಯಲ್ಲಿ ಚುನಾವಣೆ ಮುಂದೂಡಿಕೆಯಾಗಬಹುದು ಎಂದು ಊಹಿಸಿಕೊಂಡು ನಾಲ್ಕು ದಿನ ಸುಮ್ಮನಿದ್ದವರು
ಈಗ ದಿಢೀರ್‌ ಎದ್ದಿದ್ದು, ಚುನಾವಣೆ ಅಖಾಡಕ್ಕೆ ಧುಮಕುತ್ತಿದ್ದಾರೆ. ಒಂದೊಂದು ವಾರ್ಡ್‌ಗೆ ಕನಿಷ್ಟ ನಾಲ್ಕೈದು ಸ್ಪರ್ಧಾ ಆಕಾಂಕ್ಷಿಗಳಾಗಿದ್ದರಿಂದ ಪಕ್ಷದ ಮುಖಂಡರೂ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಭ್ಯರ್ಥಿಗಳನ್ನು ಅಳೆದು ತೂಗಲಾಗುತ್ತಿದೆ.

ಚುನಾವಣೆಗೆ ಎಷ್ಟು ಖರ್ಚು ಮಾಡೋ ಹಾಗೆ ಇದ್ದೀರಿ? ಆದಾಯದ ಮೂಲ ಏನು? ಬ್ಯಾಕ್‌ ಗ್ರೌಂಡ್‌ ಹೇಗೆ? ಒಳಪಂಗಡ ಯಾವುದು? ಪಕ್ಷಕ್ಕೆ ಯಾವ ರೀತಿ ದುಡಿದಿದ್ದೀರಿ ಎಂಬಿತ್ಯಾದಿ ಪ್ರಶ್ನೆಗಳನ್ನು ಕೂಲಂಕುಷವಾಗಿ ಕೇಳಲಾಗುತ್ತಿದೆ. ಹೆಚ್ಚಿನ ಹಣ ಖರ್ಚು ಮಾಡದೇ ಪಾಲಿಕೆ ಸದಸ್ಯನಾಗಿ ಸಮಾಜ ಸೇವೆ ಮಾಡಬೇಕೆನ್ನುವರಿಗೆ ಅಷ್ಟು ಪ್ರಾತಿನಿಧ್ಯತೆ ಕೊಡುತ್ತಿಲ್ಲ ಎನ್ನಲಾಗಿದೆ. ಟಿಕೆಟ್‌ ಆಕಾಂಕ್ಷಿಗಳಂತೂ ಎಲ್ಲವನ್ನು ತಿಳಿಸಿದರೂ ಕೊನೆ ಘಳಿಗೆಯಲ್ಲಿ ಹೈಕಮಾಂಡ್‌ದಿಂದ ಒತ್ತಡ ಬಂದವರಿಗೆ ಮಣೆ ಹಾಕಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಯುವಕರೇ ಉತ್ಸುಕತೆ: ಪಾಲಿಕೆ ಚುನಾವಣೆಯಲ್ಲಿ ಆಯಾ ವಾರ್ಡ್‌ನಲ್ಲಿ ಸಣ್ಣಪುಟ್ಟ ಕೆಲಸ ಮಾಡಿದವರು ಹಾಗೂ ನಿವೃತ್ತರಾದವರು ಏನಾದರೂ ವಾರ್ಡ್ ಗೆ ಪ್ರಮಾಣಿಕವಾಗಿ ಕೆಲಸ ಮಾಡಬೇಕೆನ್ನುವರು ಪ್ರಸಕ್ತವಾಗಿ ಅಷ್ಟಾಗಿ ಕಾಣುತ್ತಿಲ್ಲ. ಯುವಕರೇ ಚುನಾವಣೆಗೆ ಆಸಕ್ತಿ ತಳೆದು ಟಿಕೆಟ್‌ ಪಡೆಯಲು ಇನ್ನಿಲ್ಲದ ಕಸರತ್ತು ಮಾಡುತ್ತಿರುವುದು ಕಂಡು ಬರುತ್ತಿದೆ. ಟಿಕೆಟ್‌ ವಂಚಿತರು ಪಕ್ಷ ತ್ಯಜಿಸಿ ಮತ್ತೂಂದು ಪಕ್ಷಕ್ಕೆ ಹೋಗಿ ಟಿಕೆಟ್‌ ಪಡೆಯುತ್ತಿರುವ ವಿದ್ಯಮಾನಗಳು ನಡೆಯುತ್ತಿವೆ.

ಕಲಬುರಗಿ ಪಾಲಿಕೆ ಸದಸ್ಯರಾಗುವವರು ಕನಿಷ್ಟ ಪಕ್ಷ ಸ್ಪರ್ಧಾ ವಾರ್ಡ್‌ನಲ್ಲಿ ಕನಿಷ್ಟ 10 ವರ್ಷ ಇರುವುದರ ಜತೆಗೆ ಸೇವಾ ಮನೋಭಾವನೆ ಹೊಂದಿರಬೇಕು. ಈಗ ಎಲ್ಲ ಮರೆಯಾಗಿ ಕೇವಲ ಹಣದ ಖರ್ಚೆ ಮುನ್ನೆಲೆಗೆ ಬರುತ್ತಿದೆ. ಇದು ನಿಜಕ್ಕೂ ಆತಂಕಕಾರಿ ಸಂಗತಿ ಎಂಬುದಾಗಿ ಪ್ರಜ್ಞಾವಂತ ನಾಗರಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ ಕಟೀಲ ಶುಕ್ರವಾರ ಕಲಬುರಗಿ ನಗರಕ್ಕೆ ಆಗಮಿಸಿ ಪಕ್ಷದ ಮುಖಂಡರೊಂದಿಗೆ ಪಾಲಿಕೆ ಚುನಾವಣೆ ಕುರಿತಾಗಿ ಚರ್ಚಿಸಿದ್ದಾರೆ. ಶನಿವಾರ ಚುನಾವಣೆ ಸಭೆ ನಡೆಸಲಿದ್ದಾರೆ. ರಾಜ್ಯಾಧ್ಯಕ್ಷರು ಶುಕ್ರವಾರ ವಿಮಾನ ಮೂಲಕ ಕಲಬುರಗಿಗೆ ಆಗಮಿಸಿ ಟಿಕೆಟ್‌ ಆಕಾಂಕ್ಷಿ ಮನೆಗೆ ತೆರಳಿದ್ದನ್ನು ನೋಡಿದರೆ ಚುನಾವಣೆ ಯಾವ ಮಟ್ಟಿಗೆ ಗಂಭೀರತೆ ಪಡೆದುಕೊಂಡಿದೆ ಎನ್ನುವುದು ನಿರೂಪಿಸುತ್ತದೆ. ಚುನಾವಣೆ ಉಸ್ತುವಾರಿಗಳಂತೂ ನಗರದಲ್ಲಿಯೇ ಠಿಕಾಣಿ ಹೂಡಿ ಚುನಾವಣೆಗೆ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.