ಪ್ರತಾಪಸಿಂಹ ಕ್ಷಮೆ ಕೇಳದಿದ್ದರೆ ಯಡ್ರಾಮಿ ಬಂದ್
Team Udayavani, Nov 23, 2021, 12:15 PM IST
ಯಡ್ರಾಮಿ: ಚಿತ್ತಾಪುರ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ವಕ್ತಾರ ಪ್ರಿಯಾಂಕ್ ಖರ್ಗೆ ಅವರಿಗೆ ಸಂಸದ ಪ್ರತಾಪಸಿಂಹ ಅವಹೇಳನಕಾರಿ ಮಾತನಾಡಿರುವುದನ್ನು ಖಂಡಿಸಿ ನ.25ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಮುಖಂಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಚಂದ್ರಶೇಖರ ಪುರಾಣಿಕ ಮಾತನಾಡಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಖರ್ಗೆ ಅವರ ಬಗ್ಗೆ ಮಾತನಾಡಿರುವ ಸಂಸದ ಪ್ರತಾಪ ಸಿಂಹ ಅವರು ಕೂಡಲೇ ಹೇಳಿಕೆ ವಾಪಸ್ ಪಡೆದು ಕ್ಷಮೆಯಾಚಿಸುವಂತೆ ಒತ್ತಾಯಿಸಿ, ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನ.25ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೇಳಿಕೆ ಹಿಂಪಡೆದು ಕ್ಷಮೆಯಾಚಿಸದಿದ್ದರೆ ಯಡ್ರಾಮಿ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಕಾಂಗ್ರೆಸ್ ಮುಖಂಡರಾದ ಬಸಲಿಂಗಪ್ಪ ಸಾಹು ತಾಳಿಕೋಟಿ, ಶೇಖಫರೀದ ಮಳ್ಳಿಕರ್, ಇಬ್ರಾಹೀಮಸಾಬ ಉಸ್ತಾದ, ನಾಗಣ್ಣ ಹಾಗರಗುಂಡಗಿ, ಮಲ್ಲಿಕಾರ್ಜುನ ಹಲಕರ್ಟಿ, ಕೆ.ವಿರೇಶಗೌಡ, ಹಯ್ನಾಳಪ್ಪ ಗಂಗಾಕರ, ಬ್ದುಲ್ರಜಾಕ್ ಮನಿಯಾರ, ಶಿವಲಿಂಗ ಸಾಹು ಸುಂಕದ, ಬಸವರಾಜ ಹೂಗಾರ, ದಯಾನಂದ ಹಿರೇಮಠ, ಸುರೇಶ ಡಂಬಳ, ಅಮೀನ ಪಟೆಲ ಚಿಂಚೋಳಿ, ವಿಶ್ವನಾತ ಪಾಟೀಲ, ಅಫ್ರೋಜ್ ಅತ್ನೂರ, ಅಜ್ಮೀರ ಪಟೇಲ ಚಿಂಚೋಳಿ, ಬಸವರಾಜ ಪವಾರ, ಗುರಣ್ಣ ಕಾಚಾಪೂರ, ವಿಶ್ವನಾಥ ಪಾಟೀಲ, ಯಂಕಯ್ಯ ಗುತ್ತೆದಾರ, ಮರೆಪ್ಪ ಗಂಗಾಕರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ