ಅಕ್ರಮ ಪಡಿತರ ಸಾಗಾಟ: 404 ಕ್ವಿಂಟಲ್ ಅಕ್ಕಿ ಜಪ್ತಿ
Team Udayavani, Jan 25, 2022, 11:35 AM IST
ಅಫಜಲಪುರ: ಬಡವರಿಗಾಗಿ ಸರ್ಕಾರದಿಂದ ಬರುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 404 ಕ್ವಿಂಟಲ್ ಅಕ್ಕಿ ವಶಕ್ಕೆ ಪಡೆದ ಘಟನೆ ಜರುಗಿದೆ.
ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಮಾರ್ಗದರ್ಶನದಲ್ಲಿ ಆಹಾರ ಶಿರಸ್ತೇದಾರ್ ಕೃಷ್ಣಾಚಾರ ಪೂಜಾರಿ, ಆಹಾರ ನಿರೀಕ್ಷಕ ಹರಿದಾಸ ಚೌಪಡೆ, ಪ್ರಭಾರ ಆಹಾರ ನಿರೀಕ್ಷಕ ಮಹಮದ್ ಶೋಹೆಬ್ ಪಟೇಲ್ ಅವರು ಪಟ್ಟಣದ ಹಳೆ ಬಜಾರ್ನಲ್ಲಿರುವ ಎರಡು ಅಂಗಡಿಗಳ ಮೇಲೆ ದಾಳಿ ನಡೆಸಿ 202.80 ಕ್ವಿಂಟಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಅಕ್ಕಿ ಸಾಗಿಸಲು ತಂದಿದ್ದ ಲಾರಿಯಲ್ಲೂ ಸಹ 202.10 ಕ್ವಿಂಟಲ್ ಅಕ್ಕಿ ಸಂಗ್ರಹವಿತ್ತು.
ಒಟ್ಟು ಎರಡು ಸೇರಿ 404.90 ಕ್ವಿಂಟಲ್ ಅಕ್ಕಿ ಇದ್ದು ಸುಮಾರು 10.12 ಲಕ್ಷ ಮೌಲ್ಯದ ಅಕ್ಕಿ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಜಗದೇವಪ್ಪ ಪಾಳಾ, ಕ್ರೈಂ ಪಿಎಸ್ಐ ಸುರೇಶಬಾಬು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು