ಬಾಲಕರ ಸಾವಿನ ಬಳಿಕ ಹೆಚ್ಚಿದ ಆತಂಕ
Team Udayavani, Feb 4, 2022, 10:02 AM IST
ವಾಡಿ: ಚಿಕನ್ ಪಾಕ್ಸ್ ಇಬ್ಬರು ಬಾಲಕರನ್ನು ಬಲಿ ಪಡೆದ ನಂತರ ನಾಲವಾರ ಗ್ರಾಮದ ಸ್ಟೇಷನ್ ಬಡಾವಣೆ ಜನರು ಆತಂಕಕ್ಕೊಳಗಾಗಿದ್ದಾರೆ.
ಕಪ್ಪು-ರಕ್ತ ರೂಪದ ಕೆಂಪು ಕಲೆಗಳಿಂದ ಬಾಲಕರಾದ ಇಮ್ರಾನ್ (9) ಹಾಗೂ ರೆಹಮಾನ್ (16) ಬಳಲಿ ಮೃತಪಟ್ಟ ಘಟನೆಯಿಂದ ಇಡೀ ಊರು ಬೆಚ್ಚಿ ಬಿದ್ದಿದೆ.
ಪಟೇಲ ಕುಟುಂಬದ ಮೂವರು ಇದೇ ಕಾಯಿಲೆಯಿಂದ ಬಳಲಿ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಓಣಿ ಜನರು ಮಕ್ಕಳನ್ನು ಮನೆಯಿಂದ ಹೊರಗೆ ಕಳಿಸಲು ಹೆದರುತ್ತಿದ್ದಾರೆ. ತಾಯಿ ಹಫೀಜಾಬೇಗಂ ಮತ್ತು ಅವರ ಇನ್ನಿಬ್ಬರು ಮಕ್ಕಳಿಗೂ ರೋಗ ಅಂಟಿಕೊಂಡಿದ್ದು, ಆಸ್ಪತ್ರೆಗೆ ದಾಖಲಾದ ಬಳಿಕ ಮೃತ ಬಾಲಕರ ತಾಯಿ ಮತ್ತು ಸಹೋದರ-ಸಹೋದರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ತಪಾಸಣೆ ಆರಂಭ
ಪಟೇಲ ಕುಟುಂಬ ಸದಸ್ಯರ ನಂತರ ಬಡಾವಣೆಯ ಇತರೆ ಕುಟುಂಬಗಳಿಗೂ ಈ ರೋಗ ಹರಡುತ್ತಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಜ.31ರಂದು ಕಾಯಿಲೆ ಮರಣಮೃದಂಗ ಬಾರಿಸಿದ ಬಳಿಕ ಎಚ್ಚೆತ್ತ ತಾಲೂಕು ಆರೋಗ್ಯ ಇಲಾಖೆ, ರೋಗ ಲಕ್ಷಣ ಇರುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದೆ.
ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ನಾಲವಾರ ಸ್ಟೇಷನ್ ಬಡಾವಣೆಯ ಜನರ ಮನೆ-ಮನೆಗೆ ತೆರಳಿ ರಕ್ತದ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಬಡಾವಣೆಯ ನಿವಾಸಿಗಳ ರೋಗದ ಲಕ್ಷಣದ ಮೇಲೆ ನಿಗಾ ವಹಿಸಿರುವ ಅವರು, ಪ್ರತಿದಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇಬ್ಬರು ಮಕ್ಕಳು ಮೃತಪಟ್ಟು ಮೂವರು ಆಸ್ಪತ್ರೆಗೆ ದಾಖಲಾದ ಬಳಿಕ ನಾಲವಾರ ಗ್ರಾಮದ ಸ್ಟೇಷನ್ ಬಡಾವಣೆ ನಿವಾಸಿಗಳ ರಕ್ತ ಮಾದರಿ ಸಂಗ್ರಹಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮನೆ-ಮನೆಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸುತ್ತಿದ್ದಾರೆ. ಚಿಕನ್ ಪಾಕ್ಸ್ ಕಾಯಿಲೆ ಪತ್ತೆಗಾಗಿ ಪರೀಕ್ಷೆ ನಡೆಯುತ್ತಿದೆ. ಕುಟುಂಬಕ್ಕೆ ವ್ಯಾಪಿಸಿ ಇಬ್ಬರ ಬಲಿ ಪಡೆದ ರೋಗ ಯಾವುದು ಎಂಬುದು ಪ್ರಯೋಗಾಲಯದ ವರದಿ ಬಂದ ನಂತರ ಬಹಿರಂಗ ಪಡಿಸುತ್ತೇವೆ. ಐದಾರು ದಿನದಲ್ಲಿ ಇದು ಬೆಳಕಿಗೆ ಬರಲಿದೆ. -ಡಾ|ಅಮರದೀಪ ಪವಾರ, ಟಿಎಚ್ಒ-ಚಿತ್ತಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ