ಭಾರತಕ್ಕಿದೆ ಕ್ರಾಂತಿಕಾರಿ ಯುವಕರ ಅವಶ್ಯಕತೆ
Team Udayavani, Jan 28, 2022, 12:27 PM IST
ವಾಡಿ: ಸ್ವಾತಂತ್ರ್ಯ ಚಳವಳಿಯಲ್ಲಿ ಬ್ರಿಟಿಷರನ್ನು ನಡುಗಿಸಿದ್ದ ಕೆಚ್ಚೆದೆಯ ನೇತಾಜಿ ಸುಭಾಶ್ಚಂದ್ರ ಬೋಸ್, ಶಹೀದ್ ಭಗತ್ಸಿಂಗ್, ಚಂದ್ರಶೇಖರ ಆಜಾದ್, ಖುದಿರಾಮ ಬೋಸ್ ಅವರಂತ ಕ್ರಾಂತಿಕಾರಿ ಯುವಕರ ಅವಶ್ಯಕತೆ ಸ್ವಾತಂತ್ರ್ಯೋತ್ತರದ ಶೋಷಿತ ಭಾರತಕ್ಕಿದೆ ಎಂದು ಗುಲಬರ್ಗಾ ವಿವಿ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ| ರಮೇಶ ಲಂಡನಕರ ಅಭಿಪ್ರಾಯ ವ್ಯಕ್ತಪಡಿಸಿದರು.
ಎಐಡಿಎಸ್ಒ, ಎಐಡಿವೈಒ, ಆರ್ಕೆಎಸ್ ಸಂಘಟನೆಗಳ ವತಿಯಿಂದ ಗುರುವಾರ ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಬಡತನ, ನಿರುದ್ಯೋಗ, ಶೋಷಣೆ, ಜಾತಿವಾದ, ಕೋಮುವಾದ, ಭ್ರಷ್ಟಾಚಾರದಿಂದ ಕೂಡಿರುವ ದೇಶದಲ್ಲಿ ಯುವಜನರು ಕೆಟ್ಟ ರಾಜಕಾರಣಕ್ಕೆ ದುರ್ಬಳಕೆಯಾಗುತ್ತಿದ್ದಾರೆ. ಅತ್ಯಂತ ಸರಳವಾಗಿ ಮಾದಕ ವಸ್ತುಗಳು ಯುವಜನರ ಕೈಗೆ ಸಿಗುವಂತಹ ಕೆಟ್ಟ ವ್ಯವಸ್ಥೆ ಬದಲಿಸಲು ಯುವಶಕ್ತಿ ವೈಚಾರಿಕವಾಗಿ ಜಾಗೃತರಾಗಬೇಕಿದೆ. ಇದಕ್ಕಾಗಿ ಅನ್ಯಾಯದ ವಿರುದ್ಧ ಸಿಡಿದೇಳುವ ಮತ್ತು ಹೋರಾಟದ ಮನೋಭಾವ ಮೂಡಿಸುವ ವೈಚಾರಿಕ ಪಠ್ಯ ಶಿಕ್ಷಣ ಜಾರಿಗೆ ಬರಬೇಕು ಎಂದರು.
ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಎಂ.ಜಿ ಮಾತನಾಡಿ, 1947ರಲ್ಲಿ ಆಗಿದ್ದು ಕೇವಲ ರಾಜಕೀಯ ಹಸ್ತಾಂತರ. ಭಿಕ್ಷೆ ರೂಪದಲ್ಲಿ ಶ್ರೀಮಂತರ ಕೈಗೆ ಸ್ವಾತಂತ್ರ್ಯ ನೀಡಿ ತೊಲಗಿದ ಬ್ರಿಟಿಷರು, ಭಾರತದಲ್ಲಿ ಶೋಷಣೆ ಶಾಶ್ವತವಾಗಿರಲು ಕಾರಣರಾದರು. ಕ್ರಾಂತಿಕಾರಿಗಳ ನೇತೃತ್ವದಲ್ಲಿ ಸ್ವಾತಂತ್ರ್ಯ ಬಂದಿದ್ದರೆ ದೇಶದ ಸ್ಥಿತಿ ಹೀಗಿರುತ್ತಿರಲಿಲ್ಲ ಎಂದರು.
ಶಿಕ್ಷಣಪ್ರೇಮಿ ಪ್ರಕಾಶ ಚಂದನಕೇರಿ ಮುಖ್ಯ ಅತಿಥಿಯಾಗಿದ್ದರು. ಆರ್ಕೆಎಸ್ ಜಿಲ್ಲಾ ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ಮುಖಂಡರಾದ ವೀರಭದ್ರಪ್ಪ ಆರ್.ಕೆ, ಶರಣು ಹೇರೂರ, ಮಲ್ಲಿನಾಥ ಹುಂಡೇಕಲ್, ಗೌತಮ ಪರತೂರಕರ, ಮಲ್ಲಿಕಾರ್ಜುನ ಗಂದಿ, ವಿಠ್ಠಲ ರಾಠೊಡ, ರಾಜು ಒಡೆಯರಾಜ, ಯೇಸಪ್ಪ ಕೇದಾರ ಮತ್ತಿತರರು ಪಾಲ್ಗೊಂಡಿದ್ದರು. ಗೋವಿಂದ ಯಳವಾರ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ