ಕಲ್ಲಂಗಡಿ ಮಾರಾಟಕ್ಕೆ ಕೋವಿಡ್ ಕಾಟ

ಹೊಲದಲ್ಲೇ ಕೊಳೆಯುತ್ತಿದೆ ಸಾಲ ಸೂಲ ಮಾಡಿ ಬೆಳೆದ ಬೆಳೆ

Team Udayavani, Apr 17, 2020, 11:27 AM IST

17-April-05

ಇಂಡಿ: ಇಂಗಳಗಿ ಗ್ರಾಮದ ರೈತ ಬೆಳೆದಿರುವ ಕಲ್ಲಂಗಡಿ ಮಾರುಕಟ್ಟೆಗೆ ಸಾಗಿಸಲಾಗದೆ ಹೊಲದಲ್ಲಿಯೇ ಕೊಳೆಯುತ್ತಿರುವುದು.

ಇಂಡಿ: ಸರಕಾರದಿಂದ ಜಿಲ್ಲಾ ಕೇಂದ್ರದಲ್ಲಿ ತೆರೆದಿರುವ ಹಾಪ್‌ಕಾಮ್ಸ್‌ ಮಳಿಗೆಯಿಂದ ರೈತರ ಬೆಳೆ ಖರೀದಿ ಮಾಡಲಾಗುವುದು ಎಂದು ಕೃಷಿ ಸಚಿವರು, ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ರೈತರು ಬೆಳೆದ ಎಲ್ಲ ಬೆಳೆಯನ್ನೂ ಹಾಪ್‌ಕಾಮ್ಸ್‌ದಿಂದ ಖರೀದಿಸಲು ಅಸಾಧ್ಯವಾಗಿದೆ.

ಕಲ್ಲಂಗಡಿ ಬೆಳೆದಿರುವ ತಾಲೂಕಿನ ಇಂಗಳಗಿ, ಆಳೂರ, ಲಚ್ಯಾಣ, ಇಂಡಿ, ಅಹಿರಸಂಗ, ಹಿರೇಬೇವನೂರ, ಭುಯ್ನಾರ ಗ್ರಾಮಗಳಲ್ಲಿನ ರೈತರು ಮಾರುಕಟ್ಟೆ ಇಲ್ಲದೆ ಕಂಗಾಲಾಗಿದ್ದಾರೆ. ಕೊರೊನಾ ವಿರುದ್ಧ ಹೋರಾಟಕ್ಕೆ ಸರ್ಕಾರ ಲಾಕ್‌ಡೌನ್‌ ಆದೇಶ ನೀಡಿ ಜೀವ ಉಳಿಸಲು ಗಟ್ಟಿ ನಿರ್ಧಾರ ತೆಗದುಕೊಂಡಿದ್ದು, ಈ ಸಂದರ್ಭದಲ್ಲಿ ಸಾಲಸೂಲ ಮಾಡಿ ಬೆಳೆದಿರುವ ಬೆಳೆ ಮಾರಾಟಮಾಡಲಾಗದೆ ಅನ್ನದಾತ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾನೆ. ಮಧ್ಯವರ್ತಿಗಳು ಕೆಜಿ ಕಲ್ಲಂಗಡಿಗೆ ಕೇವಲ 2 ರೂಪಾಯಿ ಕೇಳುತ್ತಿದ್ದು, ಇದು ನಾವು ಬೆಳೆಗೆ ಮಾಡಿದ ಖರ್ಚು ಸಹ ಮರಳಿ ಬಾರದಂತ ಸ್ಥಿತಿಯಲ್ಲಿದೆ.

ತಾಲೂಕಿನಲ್ಲಿ ಅನೇಕ ರೈತರು ಕಲ್ಲಂಗಡಿ ಬೆಳೆದಿದ್ದಾರೆ. ಆದರೆ, ಲಾಕ್‌ಡೌನ್‌ ಪರಿಣಾಮ ಮಾರುಕಟ್ಟೆಗೆ ಸಾಗಾಟ ಮಾಡಲು ಸಮಸ್ಯೆಯಾಗಿದೆ. ಹಾಫ್‌ಕಾಮ್ಸ್ ಗೆ ಕಳುಹಿಸಲು ಕರೆ ಮಾಡಿ ಕೇಳಿದ್ದೇವೆ. ಈಗಾಗಲೇ ಅಗತ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಹಣ್ಣು ಖರೀದಿ ಮಾಡಲಾಗಿದೆ. ಸದ್ಯ ಅಗತ್ಯವಿಲ್ಲ ಎನ್ನುವ ಉತ್ತರ ನೀಡಿದ್ದಾರೆ.
ರಮೇಶ ಬೆನಕನಹಳ್ಳಿ,
ಇಂಗಳಗಿ ಗ್ರಾಮದ ರೈತ

2ಎಕರೆಯಲ್ಲಿ ಕಲ್ಲಂಗಡಿ ಬೆಳೆದಿದ್ದೇನೆ. ಮಾರುಕಟ್ಟೆ ಇಲ್ಲದ ಕಾರಣ ಜಮೀನಿನಲ್ಲೇ ಬೆಳೆ ಕೊಳೆಯುತ್ತಿದೆ. ದನ-ಕರುಗಳಿಗೆ ಕಲ್ಲಂಗಡಿ ತಿನ್ನಿಸುತ್ತಿದ್ದೇವೆ. ಕೆಜಿಗೆ ಎರಡು ರೂಪಾಯಿಯಂತೆ ಕೇಳುತ್ತಿದ್ದಾರೆ. ನಮ್ಮ ಗೋಳು ಕೇಳಲು ಯಾರೂ ಮುಂದೆ ಬರುತ್ತಿಲ್ಲ.
ವಿಠ್ಠಲ ಬಿರಾದಾರ,
ಆಳೂರ ಗ್ರಾಮದ ರೈತ

ತಾಲೂಕಿನಲ್ಲಿ ಬೆಳೆದಿರುವ ಕಲ್ಲಂಗಡಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸರ್ವೇ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಲ್ಲಂಗಡಿ , ಲಿಂಬೆ, ಕರಬೂಜ, ದ್ರಾಕ್ಷಿ, ದಾಳಿಂಬೆ ಬೆಳೆಗಳಿಗೂ ಇದೇ ಪರಿಸ್ಥಿತಿ ಇದೆ. ಸರಕಾರದ ಗಮನ ಸೆಳೆದು ರೈತರಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ಯಶವಂತ್ರಾಯಗೌಡ ಪಾಟೀಲ,
ಶಾಸಕರು

ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.