ಕುಡಿವ ನೀರು ಪೂರೈಕೆಗೆ ಒತ್ತಾಯ
Team Udayavani, Jun 24, 2022, 12:23 PM IST
ಕಲಬುರಗಿ: ನಗರದ ಕೊಠಾರಿ ಭವನದ ಟ್ಯಾಂಕ್ನಿಂದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಹನುಮಾನ ನಗರಕ್ಕೆ ನೀರಿನ ಪೈಪ್ಲೈನ್ ಅಳವಡಿಸಬೇಕು ಎಂದು ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದಿಂದ ಗುರುವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.
ಕಳೆದ ಐದು ವರ್ಷದ ಹಿಂದೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ವಿಶೇಷ ಅನುದಾನದಲ್ಲಿ ಈ ಬಡಾವಣೆಗೆ ಶಾಶ್ವತ ನೀರಿನ ವ್ಯವಸ್ಥೆಗಾಗಿ ಹೊಸ ಪೈಪ್ಲೈನ್ ಅಳವಡಿಸಲು ಯೋಜಿಸಲಾಗಿತ್ತು. ಪಿಡಬ್ಲ್ಯುಡಿ ಇಲಾಖೆಯಿಂದ ಬಡಾವಣೆಯಿಂದ ಕೊಠಾರಿ ಭವನದ ನೀರಿನ ಟ್ಯಾಂಕ್ ವರೆಗೆ ಹೊಸ ಪೈಪ್ಲೈನ್ ಅಳವಡಿಸಲಾಗಿದೆ. ಆದರೆ ನೀರು ಸರಬರಾಜಿನ ಸಂಪರ್ಕ ಮಾತ್ರ ಕಲ್ಪಿಸಿಲ್ಲ. ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಬೇಸಿಗೆ ಯಿಂದಲೂ ಜನರು ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದಶಕದ ಹೋರಾಟಕ್ಕೆ ಫಲ ದೊರೆತರೂ ಇನ್ನೂವರೆಗೆ ಹನುಮಾನ ನಗರದ ನಿವಾಸಿಗಳಿಗೆ ನೀರು ದೊರೆಯುತ್ತಿಲ್ಲ. ಈಗ ಈ ಪೈಪ್ಗೆ ಕೋಠಾರಿ ಭವನದ ನೀರಿನ ಟ್ಯಾಂಕ್ನ ಸಂಪರ್ಕ ಸ್ಥಾಪಿಸಲು ಅನಾವಶ್ಯಕವಾದ ಕಾಲಹರಣ ಮಾಡಲಾಗುತ್ತಿದೆ. ಇದರಿಂದಾಗಿ ಬಡಾವಣೆ ಜನರು ನೀರಿಗಾಗಿ ಕಾಯುತ್ತಿದ್ದಾರೆ. ಅದ್ದರಿಂದ ಕೂಡಲೇ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಬಡಾವಣೆಯ ಗೌರಮ್ಮ ಸಿ.ಕೆ, ಮಹೇಶ ಎಸ್.ಬಿ, ಸಾಬಮ್ಮ, ಶರಣಮ್ಮ, ಮಹಾದೇವಿ, ಲಕ್ಷ್ಮಿಬಾಯಿ, ಪಾರ್ವತಿ, ಸುನೀತಾ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ