Flag Hoisting ವೇಳೆ ಅಂಬೇಡ್ಕರ್,ಗಾಂಧೀಜಿ ಭಾವಚಿತ್ರ ಇಡದೆ ಅವಮಾನ;ವಿದ್ಯಾರ್ಥಿಗಳ ಪ್ರತಿಭಟನೆ
ಗುಲ್ಬರ್ಗ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Aug 16, 2023, 3:28 PM IST
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾನಿಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಅಂಬೇಡ್ಕರ್ ಹಾಗೂ ಗಾಂಧೀಜಿಯವರ ಭಾವಚಿತ್ರ ಇಡದೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಆ.16ರ ಬುಧವಾರ ಗುಲ್ಬರ್ಗ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.
ಘಟನೆಗೆ ಕಾರಣಿಕರ್ತರಾದ ಸಿಬ್ಬಂದಿ ಹಾಗೂ ಆಡಳಿತ ಕುಲಸಚಿವ ಶರಣಪ್ಪ ಸತ್ಯಂಪೇಟೆ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾರ್ಯಸೌಧದ ಮುಂದೆ ವಿದ್ಯಾರ್ಥಿಗಳು ಮುಷ್ಕರ ಮಾಡಿದರು.
ಈ ವೇಳೆ ಕುಲಪತಿ ಪ್ರೊ. ದಯಾನಂದ್ ಅಗಸರ ಹಲವಾರು ಬಾರಿ ಮನವಿ ಮಾಡಿದರೂ ವಿದ್ಯಾರ್ಥಿಗಳು ಹಿಂದೆ ಸರಿಯಲಿಲ್ಲ. ಅಲ್ಲದೆ, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವಗಳನ್ನೇ ಬಲಿಕೊಟ್ಟ ಮಹಾನ್ ನಾಯಕರಿಗೆ ಅಪಮಾನ ಮಾಡಲಾಗಿದೆ. ಇದೊಂದು ಉದ್ದೇಶಪೂರ್ವಕ ಕೃತ್ಯವಾಗಿದೆ ಎಂದರು.
ಧ್ವಜಾರೋಹಣದ ವೇಳೆ ಹೋರಾಟಗಾರರಾದ ಮಹಾತ್ಮ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಡ್ಡಾಯವಾಗಿ ಇಟ್ಟು ಪೂಜೆ ಮಾಡಬೇಕೆನ್ನುವುದು ಸುಪ್ರೀಂಕೋರ್ಟ್ ಆದೇಶವು ಆಗಿತ್ತು. ಆದರೆ ಅದನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗಿದೆ.
ಈ ಕುರಿತು ಕೇಳಿದಾಗ ಕುಲಸಚಿವರು ಅಸಮರ್ಪಕವಾಗಿ ಹೇಳಿಕೆ ನೀಡಿದ್ದಲ್ಲದೆ, ಭಾವಚಿತ್ರ ಇಡುವ ಕುರಿತು ಕಾರಣಗಳನ್ನು ನೀಡಿ ಸಮರ್ಥನೆ ಮಾಡಿಕೊಂಡಿದ್ದಾರೆ. ಆದ್ದರಿಂದ ಇದೊಂದು ಉದ್ದೇಶಪೂರ್ವಕ ಅವಮಾನವಾಗಿದ್ದು, ಕೂಡಲೇ ಸಂಬಂಧಪಟ್ಟ ಎಲ್ಲ ಸಿಬ್ಬಂದಿ ಹಾಗೂ ಆಡಳಿತ ಕುಲಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.
ಈ ಪ್ರತಿಭಟನೆಯಿಂದಾಗಿ ಎರಡು -ಮೂರು ಗಂಟೆಗಳ ಕಾಲ ಗುಲ್ಬರ್ಗ ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ದಲಿತ ವಿದ್ಯಾರ್ಥಿಗಳು ಸೇರಿದಂತೆ ಇತರೆ ವಿದ್ಯಾರ್ಥಿಗಳು ಈ ಘಟನೆ ಕುರಿತು ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಕುಲಪತಿಗಳ ಮೇಲೆ ಒತ್ತಡ ಹೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !