ಜಟ್ಟೂರು-ಕಾಗಿಣಾ ಬಾಂದಾರು ಸೇತುವೆ ಕಾಮಗಾರಿ ಪೂರ್ಣ


Team Udayavani, Jun 11, 2020, 10:53 AM IST

11-June-02

ಚಿಂಚೋಳಿ: ತಾಲೂಕಿನ ಜಟ್ಟೂರ ಗ್ರಾಮದ ಹತ್ತಿರ ಹರಿಯುವ ಮುಲ್ಲಾಮಾರಿ ನದಿಗೆ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್‌ದಲ್ಲಿ ನೀರನ್ನು ಸಂಗ್ರಹಿಸಲಾಗಿದೆ.

ಚಿಂಚೋಳಿ: ತಾಲೂಕಿನ ಜಟ್ಟೂರು ಗ್ರಾಮದ ಬಳಿ ಹರಿಯುವ ಮುಲ್ಲಾಮಾರಿ ಕಾಗಿಣಾ ನದಿಗೆ ನಿರ್ಮಿಸಲಾಗುತ್ತಿದ್ದ ಬಾಂದಾರು (ಬ್ರಿಡ್ಜ್ ಕಂ ಬ್ಯಾರೇಜ್‌) ಕಾಮಗಾರಿ ಪೂರ್ಣವಾಗಿದ್ದು, ತೆಲಂಗಾಣ ಗಡಿ ಭಾಗಕ್ಕೆ ತೆರಳು ಮತ್ತು ನೀರಾವರಿ ಸೌಲಭ್ಯಕ್ಕೆ ಅನುಕೂಲವಾಗಲಿದೆ.

ಜಟ್ಟೂರ ಗ್ರಾಮದ ಬಳಿಯಿರುವ ಮುಲ್ಲಾಮಾರಿ ಮತ್ತು ಕಾಗಿಣಾ ನದಿ ಮಳೆಗಾಲದಲ್ಲಿ ತುಂಬಿ ಹರಿಯುತ್ತದೆ. ಹೀಗಾಗಿ ಈ ಭಾಗದ ಗ್ರಾಮಸ್ಥರು ನೆರೆಯ ತೆಲಂಗಾಣ ರಾಜ್ಯದ ತಾಂಡೂರ, ಬಶಿರಾಬಾದ ನಗರ ಪ್ರದೇಶಗಳಿಗೆ ವ್ಯಾಪಾರಕ್ಕಾಗಿ ಮತ್ತು ಆಸ್ಪತ್ರೆಗೆ ಹೋಗುವಾಗ ನದಿಯಲ್ಲಿ ಈಜಿ ಹೋಗುವ ಸ್ಥಿತಿಯಿತ್ತು. ಈ ವೇಳೆ ಕೆಲವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋದ ಘಟನೆಗಳು ನಡೆದಿದ್ದವು. ಜಟ್ಟೂರ, ಹಲಕೋಡಾ, ಪೋತಂಗಲ್‌ ಗ್ರಾಮಸ್ಥರು ಅನುಭವಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಮಾಜಿ ಸಚಿವ ಡಾ| ಮಲ್ಲಿಕಾರ್ಜುನ ಖರ್ಗೆ, ಸೇಡಂ ಕ್ಷೇತ್ರದ ಮಾಜಿ ಶಾಸಕ ಡಾ| ಶರಣಪ್ರಕಾಶ ಪಾಟೀಲ ಪರಿಶ್ರಮದಿಂದಾಗಿ 26.6 ಕೋಟಿ ರೂ. ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್‌ ಮಂಜೂರಿಯಾಗಿತ್ತು.

ಈ ಬಾಂದಾರ ಹಾಗೂ ಸೇತುವೆ ನಿರ್ಮಿಸಬೇಕು ಎನ್ನುವುದು ಮಾಜಿ ಮುಖ್ಯಮಂತ್ರಿ ದಿ| ವೀರೇಂದ್ರ ಪಾಟೀಲ ಅವರ ಕನಸಾಗಿತ್ತು. ಮಾಜಿ ಸಚಿವ ದಿ| ವೈಜನಾಥ ಪಾಟೀಲ ಮತ್ತು ಮಾಜಿ ಶಾಸಕ ಕೈಲಾಶನಾಥ ಪಾಟೀಲ ಕೂಡ ಪ್ರಯತ್ನ ನಡೆಸಿದ್ದರು.

ತಾಲೂಕಿನ ಗಡಿಗ್ರಾಮ ಜಟ್ಟೂರು, ತೆಲಂಗಾಣ ರಾಜ್ಯದ ಜೀವಣಗಿ ಗ್ರಾಮಗಳ ಮಧ್ಯೆ ಹರಿಯುವ ಮುಲ್ಲಾಮಾರಿ ನದಿಗೆ 192ಮೀಟರ್‌ ಉದ್ದ, ಏಳು ಮೀಟರ್‌ ಎತ್ತರದ ಸೇತುವೆ ನಿರ್ಮಾಣವಾಗಿದೆ. ಬಾಂದಾರ್‌ನಲ್ಲಿ ಮೂರು ಮೀಟರ್‌ ಎತ್ತರದ ವರೆಗೆ ನೀರು ಸಂಗ್ರಹಿಸಲು ಉದ್ದೇಶಿಸಲಾಗಿದೆ. ಇದು ಒಟ್ಟು 70 ಗೇಟುಗಳನ್ನು ಹೊಂದಿದೆ. ಬಾಂದಾರ ನಿರ್ಮಾಣದಿಂದಾಗಿ ಜಟ್ಟೂರ ಗ್ರಾಮದಿಂದ 5.75 ಕಿ.ಮೀ ವರೆಗೆ ಹಿನ್ನೀರು ಸಂಗ್ರಹ ಆಗಲಿದೆ. ಅಲ್ಲದೇ ಒಟ್ಟು 1408.7 ಎಕರೆ ಜಮೀನು ನೀರಾವರಿಗೆ ಒಳಪಡಲಿದೆ. 26.6 ಕೋಟಿ ರೂ. ಟೆಂಡರ್‌ದಲ್ಲಿ 23.66 ಕೋಟಿ ರೂ. ವೂತ್ತಕ್ಕೆ ಬೆಂಗಳೂರಿನ ಅಮೃತಾ ಕಂಪನಿ ಗುತ್ತಿಗೆ ಪಡೆದಿತ್ತು. ಒಟ್ಟು 18 ತಿಂಗಳಲ್ಲಿ ಈ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣವಾಗಿದೆ. ಇದರಿಂದಾಗಿ ತಾಲೂಕಿನ ಜಟ್ಟೂರ, ಕರ್ಚಖೇಡ, ಛತ್ರಸಾಲ ಗ್ರಾಮಗಳ ರೈತರು ಹಾಗೂ ತೆಲಂಗಾಣ ರಾಜ್ಯದ ರೈತರಿಗೆ ನೀರಾವರಿ ಬೆಳೆ ಬೆಳೆಯಲು ನೆರವಾಗಲಿದೆ.

ಜಟ್ಟೂರ ಗ್ರಾಮದ ಬಳಿ ಹರಿಯುವ ಮುಲ್ಲಾಮಾರಿ ನದಿಗೆ ನಿರ್ಮಿಸಲಾಗುತ್ತಿದ್ದ ಬ್ಯಾರೇಜ್‌ ಕಾಮಗಾರಿ ಪೂರ್ಣಗೊಂಡಿದ್ದು, ಎಲ್ಲ ಗೇಟ್‌ಗಳನ್ನು ಅಳವಡಿಸಿ ನೀರನ್ನು ತಡೆಹಿಡಿಯಲಾಗಿದೆ. ಬ್ಯಾರೇಜ್‌ ಕಾಮಗಾರಿ ಪೂರ್ಣಗೊಂಡಿದ್ದರಿಂದ ತೆಲಂಗಾಣದ ಗಡಿಭಾಗಕ್ಕೆ ಹೋಗಲು ಹಾಗೂ ನೀರಾವರಿ ಸೌಲಭ್ಯ ಒದಗಿಸಲು ಅನುಕೂಲವಾಗಿದೆ.
ನಾಗಪ್ಪ, ಜೆಇ,
ಸಣ್ಣ ನೀರಾವರಿ ಇಲಾಖೆ

ಬ್ರಿಡ್ಜ್ ಕಮ್‌ ಬ್ಯಾರೇಜ್‌ ನಿರ್ಮಾಣದಿಂದ ಕಡಿಮೆ ಅಂತರದಲ್ಲಿ ತಾಂಡೂರ, ಬಶೀರಾಬಾದ್‌ ನಗರ ಪ್ರದೇಶಗಳಿಗೆ ಸಂಚರಿಸಲು ಹಾಗೂ ತೆಲಂಗಾಣದ ಜೀವಣಗಿ, ಕ್ಯಾದಗೇರಾ, ಬಶಿರಾಬಾದ ಮತ್ತು ಕರ್ನಾಟಕದ ಜಟ್ಟೂರು, ಪೋತಂಗಲ್‌, ಹಲಕೋಡಾ, ಛತ್ರಸಾಲ, ಕರ್ಚಖೇಡ, ನಿಡಗುಂದಾ ಗ್ರಾಮಗಳ ನೀರಾವರಿಗೆ ಅನುಕೂಲವಾಗಲಿದೆ.
ವೆಂಕಟರೆಡ್ಡಿ ಪಾಟೀಲ ಜಟ್ಟೂರ,
ತಾ.ಪಂ ಸದಸ್ಯ, ಶಿರೋಳಿ

ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.