ಬಸ್ ಬಂದ್ರೂ ಜನ ಬರಲಿಲ್ಲ
Team Udayavani, May 22, 2020, 10:50 AM IST
ಜೇವರ್ಗಿ: ಪಟ್ಟಣದ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ.
ಜೇವರ್ಗಿ: ಲಾಕ್ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದ ಸಾರಿಗೆ ಸಂಸ್ಥೆಯ 5 ಬಸ್ಗಳ ಸಂಚಾರ ಆರಂಭವಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದು, ಸಾರಿಗೆ ಬಸ್ಗಳು ಕೆಲ ಭಾಗಗಳಲ್ಲಿ ಖಾಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗುರುವಾರ ಜೇವರ್ಗಿ ಬಸ್ ಘಟಕದಿಂದ ಬೆಂಗಳೂರಿಗೆ ಒಂದು ಬಸ್ ಹಾಗೂ ಕಲಬುರಗಿಗೆ 4 ಬಸ್ ಗಳ ಓಡಾಟ ಆರಂಭಿಸಲಾಗಿದೆ. ಬೆಂಗಳೂರಿಗೆ ತೆರಳಿದ ಬಸ್ನಲ್ಲಿ 28 ಜನ ಪ್ರಯಾಣಿಕರು ಪ್ರಯಾಣ ಬೆಳೆಸಿದರು. ಪ್ರಯಾಣಕ್ಕೂ ಮುನ್ನ ವಿಳಾಸ ನಮೂದಿಸಿಕೊಂಡು, ಮಾಸ್ಕ್ ಹಾಗೂ ಸ್ಯಾನಿಟೈಸರ್ ಸಿಂಪರಣೆ, ಥರ್ಮಲ್ ಸ್ಕ್ರಿನಿಂಗ್ ತಪಾಸಣೆ ನಡೆಸಲಾಯಿತು.
ಬೆಳಿಗ್ಗೆಯಿಂದ ಸಂಜೆವರೆಗೂ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿತ್ತು. ಸಾರಿಗೆ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಹೊರತುಪಡಿಸಿ ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಾಗಿ ಕಂಡುಬರಲಿಲ್ಲ. ಬಸ್ ಸಂಚಾರ ಪ್ರಾರಂಭವಾಗಿದ್ದರೂ ಸಂಚಾರಕ್ಕೆ ಪ್ರಯಾಣಿಕರೇ ಬರುತ್ತಿಲ್ಲ. ಕೆಲ ಪ್ರಯಾಣಿಕರು ನೂರೆಂಟು ಪ್ರಶ್ನೆಗಳನ್ನು ಕೇಳಿ ವಾಪಸ್ ಹೋಗುತ್ತಿದ್ದಾರೆ. ಮರಳಿ ಬರುವುದಕ್ಕೆ ಬಸ್ ಇದೆಯಾ?ಎಷ್ಟೊತ್ತಿಗೆ ಬರುತ್ತದೆ? ಇತ್ಯಾದಿ ಮಾಹಿತಿ ಕೇಳಿ ವಾಪಸ್ಸಾಗುತ್ತಿದ್ದಾರೆ. ಅದರಲ್ಲೂ ಕಲಬುರಗಿ ನಗರದಲ್ಲಿ ಸಾಕಷ್ಟು ಕೋವಿಡ್ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಜೇವರ್ಗಿಯಿಂದ ಪ್ರಯಾಣಿಸಲು ಜನ ಹೆದರುತ್ತಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ