ಜಿಲ್ಲಾ ಘಟಕದಲ್ಲಿ ಜೋಷಿ ಹಸ್ತಕ್ಷೇಪ ಸರಿಯಲ್ಲ: ವೀರಭದ್ರ ಸಿಂಪಿ


Team Udayavani, Dec 17, 2021, 10:19 AM IST

2simpi

ಕಲಬುರಗಿ:ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಗಳ ಕಾರ್ಯ ಚಟುವಟಿಕೆ ಮತ್ತು ಪದಾಧಿಕಾರಿಗಳ ನೇಮಕದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಮಹೇಶ ಜೋಷಿ ಅವರು ಹಸ್ತಕ್ಷೇಪ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ನಿಕಟಪೂರ್ವ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳು ಮತ್ತು ಗಡಿ ಭಾಗದ ಅಧ್ಯಕ್ಷರು ತಮ್ಮ ಆಡಳಿತ ಸುರಳಿತವಾಗಲಿ ಉದ್ದೇಶದಿಂದ ಹಲವರನ್ನು ನೇಮಿಸಿಕೊಳ್ಳುವ ಅಧಿಕಾರ ಪರಿಷತ್‌ ನಿಬಂಧನೆಗಳಲ್ಲಿದೆ. ಆದರೆ, ನೂತನ ಅಧ್ಯಕ್ಷರು ಅದನ್ನು ಮೊಟಕುಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ರಚನೆ ಮಾಡಲು ಆಯಾ ಜಿಲ್ಲಾಧ್ಯಕ್ಷರಿಗೆ ಅಧಿಕಾರವಿದೆ. ಕೇಂದ್ರ ಅಧ್ಯಕ್ಷರು ಜಿಲ್ಲಾಧ್ಯಕ್ಷರು ರಚನೆ ಮಾಡುವ ಸಮಿತಿಗೆ ಅನುಮೋದನೆ ನೀಡಬೇಕಷ್ಟೆ. ಆದರೆ, ಮಹೇಶ ಜೋಶಿ ಅವರು ಈ ಅಧಿಕಾರವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ತಾಲೂಕು, ಗಡಿ ಅಧ್ಯಕ್ಷರ, ಪದಾಧಿಕಾರಿಗಳ ನೇಮಕದಲ್ಲಿ ಕೈಹಾಕುವಂತಿಲ್ಲ ಎಂದರು.

ನೂತನ ಅಧ್ಯಕ್ಷರು ಪರಿಷತ್ತಿನ ನಿಬಂಧನೆಗಳಿಗೆ ತಿದ್ದುಪಡಿ ಮಾಡಲು ಸಮಿತಿ ರಚನೆಗೆ ಮುಂದಾಗಿದ್ದಾಗಿ ಹೇಳಿದ್ದಾರೆ. ಡಿ.4ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ವಿಷಯ ಚರ್ಚೆಯೇ ಇಲ್ಲದೆ ಸಮಿತಿ ರಚನೆ ಮಾಡಿರುವುದು ನಿಬಂಧನೆಗಳ ವಿರುದ್ಧವಾಗಿದೆ. ಅಧ್ಯಕ್ಷರ ಬಗ್ಗೆ ನಮಗೆ ಗೌರವವಿದೆ. ಅವರಿಗೆ ನಿಜವಾಗಲೂ ತಮಗೆ ಪರಿಷತ್ತಿನ ಬಗ್ಗೆ ಕಳಕಳಿ ಇದ್ದರೆ, ಕೇಂದ್ರ ಕಚೇರಿಗಳಲ್ಲಿಇರುವ ಕಾಯಂ ಸಿಬ್ಬಂದಿ, ವಾಹನ, ಇತರೆ ಸೌಕರ್ಯಗಳನ್ನು ಜಿಲ್ಲಾ ಮತ್ತು ತಾಲೂಕು, ಗಡಿ ಕೇಂದ್ರಗಳಿಗೂ ಕಲ್ಪಿಸಲಿ. ಜಿಲ್ಲೆಗಳಿಗೆ 10 ಲಕ್ಷ ರೂ., ತಾಲೂಕುಗಳಿಗೆ5 ಲಕ್ಷ ರೂ., ಹೋಬಳಿ ಘಟಕಗಳಿಗೆ 3 ಲಕ್ಷ ರೂ. ಅನುದಾನ ಕೊಡಿಸಲಿ. ಅದೆಲ್ಲವನ್ನು ಬಿಟ್ಟು ಇರುವ ಅಧಿಕಾರ ಕಿತ್ತುಕೊಳ್ಳುವ ಮನೋಭಾವ ತೋರಬಾರದು ಎಂದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.