ಅಧಿಕಾರಿಗಳಿಗಿಂತ ಪತ್ರಕರ್ತರ ಜವಾಬ್ದಾರಿ ಹೆಚ್ಚು: ಗುರುಕರ್


Team Udayavani, May 11, 2022, 9:29 AM IST

1journalist

ಕಲಬುರಗಿ: ಸಮಾಜದಲ್ಲಿ ಸರ್ಕಾರದ ಅಧಿಕಾರಿಗಳಿಗಿಂತ ಪತ್ರಕರ್ತರ ಜವಾಬ್ದಾರಿ ಮತ್ತು ಸಾಮಾಜಿಕ ಕಳಕಳಿ ಹೆಚ್ಚು. ಸರ್ಕಾರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅವರು ಅಧಿಕಾರಿಗಳಷ್ಟೇ ಎಚ್ಚರಿಕೆ ವಹಿಸುತ್ತಾರೆ ಮತ್ತು ವಹಿಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್‌ ಜಿ.ಗುರುಕರ್‌ ಹೇಳಿದರು.

ನಗರದ ಎಚ್‌ಕೆಸಿಸಿಐ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾ ಧಿಕಾರಿಗಳ ಅಧಿಕಾರ ಸ್ವೀಕಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತ ಸಮಾಜದಲ್ಲಿನ ಸಮಸ್ಯೆಗಳಿಗೆ ಬೆಳಕು ಚೆಲ್ಲುವಂತಹ ಕೆಲಸ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಆತುರತೆ ಸಲ್ಲದು. ತುಸು ಏರುಪೇರಾದರೂ, ಮಾಹಿತಿ ತಪ್ಪಾದರೂ ಅದು ಸಮಾಜಕ್ಕೆ ಹೊಡೆತ ಬೀಳುವಂತಾಗುತ್ತದೆ ಎಂದರು.

ಇಸ್ರೇಲ್‌ ದಾಳಿಯಲ್ಲಿನ ಸಾವು, ನೋವುಗಳಿಂತಲೂ ನಮ್ಮ ದೇಶದಲ್ಲಿ ನಡೆಯುವ ಕೃಷಿ, ನೀರಾವರಿ ಹಾಗೂ ಹಲವು ಕ್ಷೇತ್ರಗಳಲ್ಲಿ ಬೆಳವಣಿಗೆ, ಸಾಧನೆ, ಕೊರತೆಯೂ ಮುಖಪುಟದ ಸುದ್ದಿಗಳಾಗಿರುತ್ತವೆ. ಇದು ಸಕಾರಾತ್ಮಕವೂ ಮತ್ತು ಮಾಧ್ಯಮಗಳ ಹೊಣೆಗಾರಿಕೆ ತೋರಿಸುತ್ತದೆ ಎಂದು ಹೇಳಿದರು.

ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಮುಂದಿನ ಯೋಜನೆಗಳಿಗೆ ಸಹಕಾರ ನೀಡಲಾಗುವುದು. ಸಮಾಜದ ಸ್ವಾಸ್ಥ್ಯ ಕಾಪಾಡುವ ಪತ್ರಕರ್ತರಿಗೆ ಆರೋಗ್ಯ ವಿಮೆ ಮಾಡಿಸಬೇಕು ಎಂದು ಸಲಹೆ ನೀಡಿದರು.

ನಗರ ಪೊಲೀಸ್‌ ಆಯುಕ್ತ ಡಾ| ವೈ.ಎಸ್‌.ರವಿಕುಮಾರ ಮಾತನಾಡಿ, ಪೊಲೀಸರು ಮತ್ತು ಪತ್ರಕರ್ತರು ಇಬ್ಬರೂ ಬೇರೆ ಏನಲ್ಲ. ಉಭಯತರು ಸಮಾಜದ ಜನರ ಸೌಖ್ಯ ಮತ್ತು ಭದ್ರತೆಗಾಗಿ ಬಡಿದಾಡುತ್ತಾರೆ. ಹಲವಾರು ಸಂದರ್ಭದಲ್ಲಿ ಪತ್ರಕರ್ತ ನಿಖರವಾದ ಮಾಹಿತಿ ಪಡೆಯಲು ಸಂಪರ್ಕಿಸುತ್ತಾರೆ. ಪರಸ್ಪರರು ಸಹಕಾರಿಂದ ಸಮಾಜದ ಆರೋಗ್ಯ ಮತ್ತು ಜನರ ಒಳಿತು ಬಯಸೋಣ ಎಂದರು.

ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಅಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ನಮ್ಮ ಮುಂದೆ ಹಲವಾರು ಸವಾಲುಗಳಿವೆ. ಎಲ್ಲವನ್ನು ನಾವು ಎದುರಿಸಿಕೊಂಡು ಮುನ್ನಡೆಯಬೇಕಿದೆ. ಈಗಂತೂ ನಮ್ಮ ಸಂಘ ಇನ್ನಷ್ಟು ನಿಖರವಾಗಿ ಕೆಲಸ ಮಾಡುತ್ತಿದ್ದು, ಸರ್ಕಾರದಿಂದ ಪತ್ರಕರ್ತರಿಗೆ ಸಿಗಬೇಕಾಗಿರುವ ಸೌಕರ್ಯಗಳನ್ನು ಕೊಡಿಸಲು ಮತ್ತು ಕೆಲಸದ ಹೊತ್ತಿನಲ್ಲಿ ನಡೆಯುವ ಅವಘಡಗಳನ್ನು ತಪ್ಪಿಸಲು ಸಂಘ ಪ್ರಯತ್ನಿಸುತ್ತಿದೆ ಎಂದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ನೂತನ ಪದಾ ಧಿಕಾರಿಗಳನ್ನು ಸನ್ಮಾನಿಸಿ, ಪ್ರಮಾಣ ಪತ್ರ ವಿತರಿಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧೇಶ್ವರಪ್ಪ, ಮಾಧ್ಯಮ ಅಕಾಡೆಮಿ ಸದಸ್ಯ ದೇವಿಂದ್ರಪ್ಪ ಕಪನೂರ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್‌ ಠಾಕೂರ, ಆಕಾಶವಾಣಿಯ ಸದಾನಂದ ಪೆರ್ಲ, ಪತ್ರಕರ್ತರಾದ ವಾದಿರಾಜ ವ್ಯಾಸಮುದ್ರ, ಸದಾನಂದ ಜೋಶಿ, ಶಂಕರ ಕೋಡ್ಲಾ, ರಾಮಕೃಷ್ಣ ಬಡಶೇಷಿ, ಜಯತೀರ್ಥ ಪಾಟೀಲ, ಮನೋಜಕುಮಾರ ಗುದ್ದಿ, ದೇವಿಂದ್ರಪ್ಪ ಅವಂಟಿ, ಶರಣು ಜಿಡಗಾ, ಸತೀಶ ಜೇವರ್ಗಿ, ಡಾ| ಜಗದೀಶ ಸಿರಿವಾರ, ಬಿ.ವಿ.ಚಕ್ರವರ್ತಿ, ಅಶೋಕ ಕಪನೂರ, ಅಜೀಜುಲ್ಲ ಸರಮಸ್ತ್, ಶರಣಬಸಪ್ಪ ಅನವಾರ, ಸುರೇಶ ಬಡಿಗೇರ ಇತರರಿದ್ದರು.

ಶಿವರಂಜನ ಸತ್ಯಂಪೇಟ ಸ್ವಾಗತಿಸಿದರು. ಸಂಗಮನಾಥ ರೇವತಗಾಂವ ನಿರೂಪಿಸಿದರು. ಅರುಣ ಕದಮ್‌ ವಂದಿಸಿದರು.

ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರಕರ್ತರಿಗೆ ನಿಯಂತ್ರಣ ಹೇರುವ, ನಿಜವಾದ ಪತ್ರಕರ್ತರಿಗೆ ಸೇತುವೆಯಾಗಿ ಕೆಲಸ ಮಾಡುವ ಅನಿವಾರ್ಯತೆ ಸದ್ಯ ಇದೆ. ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ಪಡೆದು, ನಿಖರ ವರದಿ ನೀಡಬೇಕು. ಇದು ಎಲ್ಲರಿಗೂ ಒಳ್ಳೆಯದು. ಡಾ| ವೈ.ಎಸ್‌.ರವಿಕುಮಾರ, ಪೊಲೀಸ್ಆಯುಕ್ತ

ಪತ್ರಕರ್ತರ ಸಂಘ ಇನ್ನು ಹೊಸ ಉಮೇದಿನೊಂದಿಗೆ ಚಲಿಸಲಿದೆ. ಗ್ರಂಥಾಲಯ, ಆಟೋಟ ಮತ್ತು ಕ್ರೀಡಾ ಸಲಕರಣೆ ವ್ಯವಸ್ಥೆ ಮತ್ತು ಪತ್ರಕರ್ತ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಹಾಯಧನ ನಿಧಿ ಹೆಚ್ಚಳ ಮತ್ತು ಪತ್ರಕರ್ತರ ವಿಕಾಸಕ್ಕಾಗಿ ಬೇಕಾಗುವ ಎಲ್ಲ ಹೆಜ್ಜೆಗಳನ್ನು ದೃಢವಾಗಿ ಮತ್ತು ಪಾರದರ್ಶಕವಾಗಿ ಇಡಲಾಗುವುದು. ಬಾಬುರಾವ್ಯಡ್ರಾಮಿ, ಜಿಲ್ಲಾಧ್ಯಕ್ಷ, ಪತ್ರಕರ್ತರ ಸಂಘ

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.