ತೆವಳುತ್ತ ಸಾಗಿದೆ ಕಾಗಿಣಾ ಮೇಲ್ಸೇತುವೆ ಕಾಮಗಾರಿ..!
ಕಾಮಗಾರಿ ಪೂರ್ಣಗೊಳಿಸುವ ಅವಧಿ ಮುಗಿದಿದ್ದರೂ ಇನ್ನು ತೆವಳುತ್ತ ಕೆಲಸ ಸಾಗಿದೆ.
Team Udayavani, Aug 12, 2021, 6:08 PM IST
ಸೇಡಂ: ತಾಲೂಕಿನ ಮಳಖೇಡ ಬಳಿಯ ಕಾಗಿಣಾ ನದಿಗೆ ನಿರ್ಮಿಸುತ್ತಿರುವ ಮೇಲ್ಸೇತುವೆ ಕಾಮಗಾರಿ ತೆವಳುತ್ತ ಸಾಗಿದೆ. ಪ್ರತಿ ಬಾರಿ ಧಾರಾಕಾರ ಮಳೆಯಾದರೆ ಪ್ರವಾಹ ಉಂಟಾಗಿ ಮೇಲ್ಸೇತುವೆ ಮುಳುಗುತ್ತದೆ. ಬ್ರಿಡ್ಜ್ ಮೇಲೆ ನೀರು ಹರಿಯುತ್ತದೆ. ಇದರಿಂದ ಹೈದ್ರಾಬಾದ- ಕಲಬುರಗಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಸ್ಥಗಿತ ಗೊಂಡ ಉದಾಹರಣೆಗಳಿವೆ.
24 ಕೋಟಿ ರೂ.ಗಳ ಈ ಕಾಮಗಾರಿಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ (ಕೆಆರ್ ಡಿಸಿಎಲ್) ವಹಿಸಲಾಗಿದೆ. ಟೆಂಡರ್ ಪಡೆದ ಗುತ್ತಿಗೆದಾರರಿಗೆ 18 ತಿಂಗಳಲ್ಲಿ ಕಾಮಗಾರಿ ಯನ್ನು ಪೂರ್ಣಗೊಳಿಸಲು ಸೂಚಿಸಲಾಗಿತ್ತು. ಕಾಮಗಾರಿ ಪೂರ್ಣಗೊಳಿಸುವ ಅವಧಿ ಮುಗಿದಿದ್ದರೂ ಇನ್ನು ತೆವಳುತ್ತ ಕೆಲಸ ಸಾಗಿದೆ.
ಪ್ರವಾಹ ಸ್ಥಿತಿಯಿಂದ ಕಾಗಿಣಾ ನದಿ ತಟದಲ್ಲಿರುವ ಐತಿಹಾಸಿಕ ಸುಕ್ಷೇತ್ರ ಟೀಕಾಚಾರ್ಯರ ಮೂಲ ವೃಂದಾವನ ಪ್ರತಿ ಬಾರಿ ಯೂ ಮುಳುಗುತ್ತದೆ. ಅನೇಕ ಮನೆಗಳಿಗೆ ನೀರು ನುಗ್ಗಿ ಇಲ್ಲಿನ ಜನರು ಅಪಾರ ನಷ್ಟ ಅನುಭವಿಸುವಂತೆ ಆಗುತ್ತದೆ. ಅಲ್ಲದೇ ಅನೇಕ ಸಾವು-ನೋವುಗಳು ಉಂಟಾಗಿವೆ. ಕಾಮಗಾರಿ ಸಂಪೂರ್ಣವಾಗಲು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಕೆಆರ್ಡಿಸಿಎಲ್ ಅಧಿಕಾರಿಗಳಿಗೆ ಸೂಚಿಸಲು ಸರ್ಕಾರಕ್ಕೆ ಒತ್ತಡ ಹೇರಬೇಕು ಎಂದು
ನಾಗರಿಕರು ಆಗ್ರಹಿಸಿದ್ದಾರೆ.
ಮಳಖೇಡ, ಸಂಗಾವಿ ಹಾಗೂ ಇನ್ನಿತರೆ ಕಾಗಿಣಾ ನದಿ ತಟದ ನಿವಾಸಿಗಳ ಮನೆಗಳಿಗೆ ನದಿ ನೀರು ನುಗ್ಗುತ್ತಿರುವುದರಿಂದ, ಬ್ರಿಡ್ಜ್ ಮುಳುಗಿ ಪ್ರಯಾಣಿಕರಿಗೆ ಅನಾನುಕೂಲ ಆಗುತ್ತಿರುವುದರಿಂದ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಅಧಿ ಕಾರಿಗಳು ಮತ್ತು ಗುತ್ತಿಗೆದಾರರು ಅವಧಿಯೊಳಗೆ ಮುಗಿಸುವ ಜವಾಬ್ದಾರಿ ವಹಿಸಬೇಕು. ಈ ನಿಟ್ಟಿನಲ್ಲಿ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ, ಕಾಮಗಾರಿ ಪೂರ್ಣಗೊಳಿಸಲು ಸೂಚಿಸಬೇಕು.
ಕಲ್ಯಾಣಪ್ಪಗೌಡ ಪಾಟೀಲ, ಬಿಜೆಪಿ ಹಿರಿಯ ಮುಖಂಡ, ಮಳಖೇಡ
ಕೆಲ ದಿನಗಳ ಹಿಂದೆ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದ್ದರಿಂದ ಪ್ರವಾಹ ಭೀತಿ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದರಿಂದ ಕಾಗಿಣಾ ನದಿಯ ಬ್ರಿಡ್ಜ್ ಮುಳುಗಡೆ ಆಗುವ ಭೀತಿಗೊಳಗಾಗಿತ್ತು. ಬ್ರಿಡ್ಜ್ ಕಾಮಗಾರಿ ಪೂರ್ಣ ಮಾಡಿ ಸಮಸ್ಯೆಗೆ ತಿಲಾಂಜಲಿ ಹಾಡಬೇಕಾದ ಅ ಧಿಕಾರಿಗಳು ಕೈಕಟ್ಟಿ ಕುಳಿತ ಪರಿಣಾಮ ಬ್ರಿಡ್ಜ್ ಕಾಮಗಾರಿ ಪೂರ್ಣಗೊಂಡಿಲ್ಲ.
ಎಸ್ಟಿಮೇಟ್ ಪ್ರಕಾರ ಈ ತಿಂಗಳು ಕಾಗಿಣಾ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಇತ್ತೀಚೆಗೆ ನದಿಯಲ್ಲಿ ನೀರಿನ ಮಟ್ಟ ಜಾಸ್ತಿಯಾದ ಕಾರಣ ಕಾಮಗಾರಿ ವಿಳಂಬವಾಗಿದೆ. ಸಾಧ್ಯವಾದ ಮಟ್ಟಿಗೆ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆ ಪಡೆದ ಸಂಸ್ಥೆಗೆ ಸೂಚಿಸಲಾಗಿದೆ.
ಚನ್ನಬಸಪ್ಪ,ಕಾರ್ಯನಿರ್ವಾಹಕ ಅಧಿಕಾರಿ,
ಕೆಆರ್ಡಿಸಿಎಲ್, ಕಲಬುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ