ಬಸವ ಜಯಂತಿ ಸರಳ ಆಚರಣೆ
ಜಿಲ್ಲಾಡಳಿತದಿಂದ ಮಹಾಮಾನವತಾವಾದಿಗೆ ನಮನಸಾಮಾಜಿಕ ಅಂತರ ಕಾಯ್ದುಕೊಂಡ ಸಿಬ್ಬಂದಿ
Team Udayavani, Apr 27, 2020, 10:36 AM IST
ಕಲಬುರಗಿ: ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಜಿಲ್ಲಾ ಧಿಕಾರಿ ಶರತ್ ಬಿ. ಅವರು ಪುಷ್ಪಾರ್ಚನೆ ಮಾಡಿದರು
ಕಲಬುರಗಿ: ಮಹಾ ಮಾನವತಾವಾದಿಹಾಗೂ ಜಗಜ್ಯೋತಿ ಶ್ರೀ ಬಸವೇಶ್ವರ ಅವರಜಯಂತಿ ನಿಮಿತ್ತ ರವಿವಾರ ನಗರದ ಜಗತ್ವೃತ್ತದಲ್ಲಿರುವ ಬಸವೇಶ್ವರಪ್ರತಿಮೆಗೆ ಜಿಲ್ಲಾ ಧಿಕಾರಿ ಶರತ್ ಬಿ. ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ 12ನೇ ಶತಮಾನದ ಸಾಮಾಜಿಕ ಹರಿಕಾರನಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವುದರೊಂದಿಗೆ ಜಿಲ್ಲಾಡಳಿತದಿಂದ ಸರಳವಾಗಿ ಜಯಂತಿ ಆಚರಿಸಲಾಯಿತು. ಸಂಸದ ಡಾ.ಉಮೇಶ ಜಾಧವ, ಶಾಸಕ ಡಾ.ಅಜಯ ಸಿಂಗ್, ಕಲಬುರಗಿ
ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಪ್ರೊಬೇಷನರಿ ಐಎಎಸ್ ಅಧಿ ಕಾರಿ ಗೋಪಾಲಕೃಷ್ಣ ಬಿ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಅವರು ಸಹ ಮಹಾನ್ ದಾರ್ಶನಿಕನಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಪೊಲೀಸ್ ಠಾಣೆಗಳಲ್ಲಿ ಜಯಂತಿ: ನಗರದ ಚೌಕ್, ಬ್ರಹ್ಮಪುರ, ಮಹಿಳಾ ಹಾಗೂ ಗ್ರಾಮೀಣ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಬಸವಜ ಜಯಂತಿ ಆಚರಿಸಲಾಯಿತು. ಕಾಯಕವೇ ಕೈಲಾಸ ಹಾಗೂ ಸರ್ವರೂ ಸಮಾನರು ಎಂಬ ಬಸವಣ್ಣನವರ ತತ್ವದಡಿ ಇಲಾಖೆ ಕಾರ್ಯನಿರ್ವಹಿಸುತ್ತಿರುವುದು ಎಲ್ಲರಿಗೂ ತಿಳಿದ ವಿಷಯ ಎಂದು ಠಾಣಾಧಿಕಾರಿಗಳು ಹೇಳಿದರು. ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ