ಕೋವಿಡ್ ಸೋಂಕಿನಿಂದ 36 ವರ್ಷದ ವ್ಯಕ್ತಿ ಸಾವು


Team Udayavani, Jul 3, 2020, 10:37 AM IST

03-July-01

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿನಿಂದ ಮತ್ತೊಂದು ಸಾವು ಸಂಭವಿಸಿದ್ದು, ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬೀದರ ಜಿಲ್ಲೆಯ ಹುಮನಾಬಾದ್‌ನ 36 ವರ್ಷದ ವ್ಯಕ್ತಿ (ಪಿ-16,764) ಸೋಂಕಿನಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬೆಂಗಳೂರಿನಿಂದ ವಾಪಸ್ಸಾಗಿದ್ದ ಇವರು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಪ್ರಜ್ಞಾಹೀನನಾಗಿದ್ದರು.

ಜೂ.29ರಂದು ನಗರದ ಜಿಮ್ಸ್‌ ಆಸ್ಪತ್ರೆಗೆ ದಾಖಲಾಗಿತ್ತು. ಜೂ.30ರಂದೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುರುವಾರ ಪ್ರಯೋಗಾಲಯದ ವರದಿ ಬಂದಿದ್ದು, ಕೋವಿಡ್ ಸೋಂಕು ದೃಢವಾಗಿದೆ. ಗುರುವಾರ ಮೃತ ವ್ಯಕ್ತಿ ಸೇರಿ 38 ಜನರಿಗೆ ಸೋಂಕು ಪತ್ತೆಯಾಗಿದೆ. ಆಘಾತಕಾರಿ ಎಂದರೆ ಸೋಂಕಿತರ ಪೈಕಿ ಆರು ಮಕ್ಕಳು ಇದ್ದಾರೆ. ಮಹಾರಾಷ್ಟ್ರದಿಂದ ಬಂದಿರುವ 18 ಜನರು, ಸೋಂಕಿತರ ಸಂಪರ್ಕಕ್ಕೆ ಬಂದ ಮೂವರಿಗೆ ಕೋವಿಡ್ ವಕ್ಕರಿಸಿದೆ. ಅಫಜಲಪುರ ತಾಲೂಕಿನ ಹವನೂರ ಗ್ರಾಮವೊಂದರಲ್ಲೇ ಮಹಾರಾಷ್ಟ್ರದಿಂದ ಮರಳಿದ 8 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

ಮತ್ತೊಂದು ಆಘಾತಕಾರಿ ಅಂಶವೆಂದರೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಒಂಭತ್ತು ಜನರಿಗೆ ಕೋವಿಡ್‌ ಕಾಣಿಸಿಕೊಂಡಿದೆ. 27 ವರ್ಷದ ಮಹಿಳೆ ಹಾಗೂ 20ರಿಂದ 52 ವರ್ಷದೊಳಗಿನ ಎಂಟು ಪುರುಷರಿಗೆ ಮಹಾಮಾರಿ ದೃಢಪಟ್ಟಿದೆ. ಒಟ್ಟಾರೆ, ಸೋಂಕಿತರ ಸಂಖ್ಯೆ 1,488ಕ್ಕೆ ಏರಿಕೆಯಾಗಿದೆ. ಇತ್ತ, 23 ಜನರು ಸೋಂಕಿನಿಂದ ಗುಣಮುಖರಾಗಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ ಗುಣಮುಖರಾದವರ ಸಂಖ್ಯೆ ಸಹ 1,126ಕ್ಕೆ ಹೆಚ್ಚಳವಾಗಿದೆ. ಇನ್ನು, 343 ಸೋಂಕಿತರು ಐಸೋಲೇಷನ್‌ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಾಡಿ: ಹೋಂ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿದ್ದ ಹಾಗೂ ಮಹಾರಾಷ್ಟ್ರದಿಂದ ಬಂದು ಮಾಹಿತಿ ನೀಡದೆ ಮನೆಯಲ್ಲಿ ವಾಸವಿದ್ದ ವ್ಯಕ್ತಿ ಸೇರಿದಂತೆ ಒಟ್ಟು ಐವರ ವಿರುದ್ಧ ವಾಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಪಟ್ಟಣದಲ್ಲಿ ರೈಲ್ವೆ ಕಾರ್ಮಿಕ ಸೇರಿದಂತೆ ಒಟ್ಟು ಮೂವರು, ಲಾಡ್ಲಾಪುರ ಗ್ರಾಮದ ಓರ್ವ ವ್ಯಕ್ತಿ ಹಾಗೂ ಯಾಗಾಪುರ ಗ್ರಾ.ಪಂ ವ್ಯಾಪ್ತಿಯ ಬಾಂಬ್ಲಾ ನಾಯಕ ತಾಂಡಾ ನಿವಾಸಿಯೊಬ್ಬರ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗಿದೆ. ಇವರನ್ನು ಶುಕ್ರವಾರ ವಶಕ್ಕೆ ಪಡೆದುಕೊಂಡು 14 ದಿನಗಳ ಸರಕಾರಿ ಕ್ವಾರಂಟೈನ್‌ಗೆ ಸೇರಿಸಲಾಗುವುದು ಎಂದು ಪಿಎಸ್‌ಐ ವಿಜಯಕುಮಾರ ಭಾವಗಿ ತಿಳಿಸಿದ್ದಾರೆ.

ಹೋಂಗಾರ್ಡ್‌ಗೂ ಕೋವಿಡ್
ಕೋವಿಡ್ ವಾರಿಯರ್ಸ್‌ ಆಗಿರುವ ಮತ್ತಿಬ್ಬರು ಪೊಲೀಸರು ಹಾಗೂ ಓರ್ವ ಹೋಂಗಾರ್ಡ್ಗೆ ಸೋಂಕು ಕಾಣಿಸಿಕೊಂಡಿದೆ. ನಗರದ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯ ಮತ್ತು ಬ್ರಹ್ಮಪುರ ಠಾಣೆಯ ತಲಾ ಒಬ್ಬ ಪೇದೆ ಮತ್ತು ರಾಘವೇಂದ್ರ ನಗರ ಠಾಣಾ ವ್ಯಾಪ್ತಿಯ ಹೋಂಗಾರ್ಡ್‌ಗೆ ಕೋವಿಡ್ ಪತ್ತೆಯಾಗಿದೆ. ಬಸವೇಶ್ವರ ಆಸ್ಪತ್ರೆ ಆವರಣದ ಪಿಜಿ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬರಿಗೆ ಸೋಂಕು ಹರಡಿದೆ. ಅಲ್ಲದೇ, ಮಾತೃ ಸಂಸ್ಥೆಯ ಹಿರಿಯ ಉದ್ಯೋಗಿಯೊಬ್ಬರಿಗೂ ಕೊರೊನಾ ಕಾಣಿಸಿಕೊಂಡಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.