ಕೋವಿಡ್ ಸೋಂಕಿಗೆ ಮತ್ತಿಬ್ಬರ ಬಲಿ

ಪೆರೋಲ್‌ನಲ್ಲಿ ತೆರಳಿದ್ದ 10 ಕೈದಿಗಳಿಗೆ ಸೋಂಕು ನಿನ್ನೆ 85 ಜನರಿಗೆ ಸೋಂಕು ದೃಢ

Team Udayavani, Jul 10, 2020, 10:38 AM IST

10July-01

ಕಲಬುರಗಿ: ನಗರದ ಕೇಂದ್ರ ಜೈಲಿನಿಂದ ಪೆರೋಲ್‌ ಮೇಲೆ ತೆರಳಿದ್ದ 10 ಕೈದಿಗಳಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನೆಲ್ಲ ಬೇರೊಂದು ಕಡೆ ಇರಿಸಲಾದ್ದರಿಂದ ಜೈಲು ಅಧಿಕಾರಿಗಳು ಮತ್ತು ಇತರ ಕೈದಿಗಳು ನಿಟ್ಟುಸಿರು ಬಿಡುವಂತೆ ಆಗಿದೆ.

ಕೋವಿಡ್ ಭೀತಿ ಹಿನ್ನೆಲೆಯಿಂದಲೇ 73 ಜನ ಕೈದಿಗಳು ಪೆರೋಲ್‌ ಮೇಲೆ ಕಳುಹಿಸಲಾಗಿತ್ತು. ಇದರಲ್ಲಿ ಇತ್ತೀಚಿಗೆ 60 ಜನರಿ ಮರಳಿ ಬಂದಿದ್ದಾರೆ. ಎಲ್ಲರನ್ನೂ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, 10 ಜನರಿಗೆ ಸೋಂಕು ಪತ್ತೆಯಾಗಿದೆ. ಹೀಗಾಗಿ ಎಲ್ಲ ಸೋಂಕಿತರನ್ನು ಈಗ ಐಸೋಲೇಷನ್‌ ವಾರ್ಡ್‌ಗೆ ದಾಖಲಾಗಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಕೊಂಡು ಬರಲಾಗಿದೆ. ಹೊಸ ಆರೋಪಿಗಳು ಮತ್ತು ಪೆರೋಲ್‌ ಮೇಲೆ ಹೋಗಿರುವ ಕೈದಿಗಳಿಗಾಗಿ ಜೈಲಿನ ಸಮೀಪದ ಕಟ್ಟಡವೊಂದರ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಅವರನ್ನು ಇರಿಸಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕೋವಿಡ್ ನೆಗೆಟಿವ್‌ ವರದಿ ಬಂದವರನ್ನು ಮಾತ್ರವೇ ಜೈಲಿನ ಒಳಗಡೆ ಬಿಡಲಾಗುತ್ತದೆ. ಪಾಸಿಟಿವ್‌ ಬರುವ ಸೋಂಕಿತ ಕೈದಿಗಳಿಗೆ ಪ್ರತ್ಯೇಕ ಐಸೋಲೇಷನ್‌ ವಾರ್ಡ್‌ ಮಾಡಲಾಗಿದ್ದು. ಅಲ್ಲಿನ ಅವರನ್ನು ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಐಸೋಲೇಷನ್‌ ವಾರ್ಡ್ ಗೆ ಪೊಲೀಸ್‌ ಭದ್ರತೆಯನ್ನು ಕಲ್ಪಿಸಲಾಗಿದೆ ಎಂದು ಜೈಲಿನ ಅಧೀಕ್ಷಕ ರಮೇಶ ಮಾಹಿತಿ ನೀಡಿದ್ದಾರೆ.

ಎಸ್‌ಪಿ ಕಚೇರಿಗೂ ಕಂಟಕ: ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಕಚೇರಿಗೂ ಕೋವಿಡ್ ಕಂಟಕ ಶುರುವಾಗಿದ್ದು, ಕಚೇರಿಯ ಏಳು ಮಂದಿ ಸಿಬ್ಬಂದಿಗೂ ಸೋಂಕು ವಕ್ಕರಿಸಿದೆ. ಪೊಲೀಸರಿಗೆ ಸೋಂಕು ಹರಡುತ್ತಿರುವುದರಿಂದ ಎಲ್ಲ ಸಿಬ್ಬಂದಿಗೆ ರ್‍ಯಾಂಡಮ್‌ ಪರೀಕ್ಷೆ ಮಾಡಲಾಗುತ್ತಿದ್ದು, ಇದರಲ್ಲಿ 47 ವರ್ಷ, 48 ವರ್ಷ, 49 ವರ್ಷ ಹೀಗೆ ವಿವಿಧ ವಯೋಮಾನ ಸಿಬ್ಬಂದಿಗೆ ಕೋವಿಡ್‌ ಪತ್ತೆಯಾಗಿದೆ. ಒಂದೇ ದಿನ 85 ಜನರಿಗೆ ಸೋಂಕು: ಪೆರೋಲ್‌ ಮೇಲೆ ತೆರಳಿದ್ದ ಕೈದಿಗಳು ಹಾಗೂ ಎಸ್‌ಪಿ ಕಚೇರಿಯ ಸಿಬ್ಬಂದಿ ಸೇರಿ ಗುರುವಾರ ಒಟ್ಟು 85 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,901ಕ್ಕೆ ಏರಿಕೆಯಾಗಿದೆ.

ಕಲಬುರಗಿ ನಗರದ ಮತ್ತು ತಾಲೂಕಿನಲ್ಲೇ ಸುಮಾರು 65 ಪ್ರಕರಣಗಳು ಪತ್ತೆಯಾಗಿವೆ. ಚಿತ್ತಾಪುರ-7, ಸೇಡಂ-3, ಜೇವರ್ಗಿ-2, ಯಾಡ್ರಾಮಿ, ಚಿಂಚೋಳಿ, ಶಹಾಬಾದ್‌, ಆಳಂದ ಮತ್ತು ಕಾಳಗಿಯಲ್ಲಿ ತಲಾ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯುಳ್ಳ 30 ಜನರಿಗೆ ಕೊರೊನಾ ಹರಡಿದೆ. 85 ಸೋಂಕಿತರಲ್ಲಿ 19 ಮಹಿಳೆಯರು ಸೇರಿದ್ದು, ಒಂದು ವರ್ಷದ ಗಂಡು ಮಗು, ಮೂರು ವರ್ಷದ ಬಾಲಕಿ-ಬಾಲಕ, ಐದು ವರ್ಷದ ಬಾಲಕ ಸಹ ಇದ್ದಾರೆ. ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ (ಆರ್‌ಎಫ್‌ಎಸ್‌ ಎಲ್‌)ಕ್ಕೂ ಸೋಂಕು ವಕ್ಕರಿಸಿದ್ದು, ಒಂದು ಮಗು, ಐದು ವರ್ಷದ ಮಕ್ಕಳು ಹಾಗೂ 29 ವರ್ಷದ ಮಹಿಳೆಗೆ ಸೋಂಕು ಅಂಟಿಕೊಂಡಿದೆ. ಹಗರಗಾ ಕ್ರಾಸ್‌ನ ಸ್ವಪ್ನಾ ಬೇಕರಿಯಲ್ಲಿ 29 ವರ್ಷದ ವ್ಯಕ್ತಿ, ಕೆಬಿಎನ್‌ ಆಸ್ಪತ್ರೆಯಲ್ಲಿ 23 ವರ್ಷದ ವ್ಯಕ್ತಿ, ಹಜ್‌ ಕಮಿಟಿಯಲ್ಲಿ 24 ವರ್ಷದ ವ್ಯಕ್ತಿಗೆ ಸೋಂಕು ವಕ್ಕರಿಸಿದೆ.

ಇದೇ ವೇಳೆ 41 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಒಟ್ಟು 1,901ಕ್ಕೆ ಸೋಂಕಿತರ ಪೈಕಿ ಇದುವರೆಗೆ 1,392 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಂತೆ ಆಗಿದೆ. ಇನ್ನು, 477 ಸೋಂಕಿತರು ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

32 ಕ್ಕೇರಿದ ಸಾವಿನ ಸಂಖ್ಯೆ
ಕೋವಿಡ್ ಮಹಾಮಾರಿ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯುಳ್ಳವರಿಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಗುರುವಾರ ಮತ್ತಿಬ್ಬರು ಸಾವನ್ನಪ್ಪಿರುವುದು ಖಚಿತವಾಗಿದೆ. ಇದರೊಂದಿಗೆ ಒಟ್ಟು 32 ಜನರು ಬಲಿಯಾದಂತಾಗಿದೆ. ನಗರದ ಜಮ್‌-ಜಮ್‌ ಕಾಲೋನಿಯ 50 ವರ್ಷದ ಮಹಿಳೆ (ಪಿ-26,670) ಜು.5ರಂದು ಜಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಜು.8 ರಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅದೇ ರೀತಿ ಮೆಹಬೂಬ್‌ ನಗರದ 53 ವರ್ಷದ ವ್ಯಕ್ತಿ (ಪಿ-30,965) ಸಹ ತೀವ್ರ ಉಸಿರಾಟ ಬಳಲುತ್ತಿದ್ದರು. ಹೀಗಾಗಿ ಜು.4ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಜು.8ರಂದು ಅಸುನೀಗಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.