ಇಬ್ಬರು ಮಕ್ಕಳು ಸೇರಿ ಮತ್ತೆ ಐವರಿಗೆ ಕೋವಿಡ್
Team Udayavani, May 29, 2020, 10:36 AM IST
ಕಲಬುರಗಿ: ಕೋವಿಡ್ ಮಹಾಮಾರಿಯಿಂದ ಈಗಾಗಲೇ ನಲುಗಿರುವ ಸೂರ್ಯನಗರಿಯಲ್ಲಿ ಮಹಾರಾಷ್ಟ್ರದ ಸೋಂಕಿನ ನಂಟು ನಿತ್ಯವೂ ಕಂಪನ ಉಂಟು ಮಾಡುತ್ತಲೇ ಇದ್ದು, ಗುರುವಾರ ಮತ್ತೆ ನಾಲ್ಕು ವರ್ಷ ಮತ್ತು ಒಂಭತ್ತು ವರ್ಷದ ಮಕ್ಕಳು ಸೇರಿ ಐವರಿಗೆ ಕೋವಿಡ್ ಸೋಂಕು ವಕ್ಕರಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಮೇ 10ರಿಂದಲೂ ಮುಂಬೈನಿಂದ ಬಂದವರಲ್ಲೇ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಬುಧವಾರ ಅಫಜಲಪುರದಲ್ಲಿ ಇಬ್ಬರು, ಸೇಡಂ, ಶಹಾಬಾದ ಮತ್ತು ಚಿತ್ತಾಪುರ ತಾಲೂಕಿನಲ್ಲಿ ತಲಾ ಒಬ್ಬರಿಗೆ ಹೆಮ್ಮಾರಿ ಪತ್ತೆಯಾಗಿದೆ. ಮುಂಬೈನಿಂದ ಬಂದ ಹಿನ್ನೆಲೆಯಲ್ಲಿ ಇವರೆಲ್ಲರೂ ಕ್ವಾರಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ ಆಗಿದ್ದರು. ಸೇಡಂ ತಾಲೂಕಿನ ಮೇದಕ್ ಗ್ರಾಮದ 30 ವರ್ಷದ ಮಹಿಳೆ (ಪಿ-2422), ಶಹಾಬಾದ ತಾಲೂಕಿನ ಭಂಕೂರ ಬಳಿಯ ತರಿ ತಾಂಡಾದ 30 ವರ್ಷದ ಮಹಿಳೆ (ಪಿ-2492) ಹಾಗೂ ಚಿತ್ತಾಪುರ ತಾಲೂಕಿನ ಅನಿಕೇರಿ ಬಳಿಯ ರಾಮಾನಾಯಕ ತಾಂಡಾದ ಒಂಭತ್ತು ವರ್ಷದ ಬಾಲಕ (ಪಿ-2493)ನಿಗೆ ಕೋವಿಡ್-19 ದೃಢವಾಗಿದೆ.
ಅಫಜಲಪುರ ತಾಲೂಕಿನ ಶಿರವಾಳ ಗ್ರಾಮದ 25 ವರ್ಷದ ಮಹಿಳೆ (ಪಿ-2520) ಮತ್ತು ನಂದರ್ಗಾ ಗ್ರಾಮದ 4 ವರ್ಷದ ಗಂಡು ಮಗು (ಪಿ-2521) ವಿಗೆ ಕೋವಿಡ್ ಪತ್ತೆಯಾಗಿದೆ. ಸೋಂಕು ಪತ್ತೆಯಾದ ಕೂಡಲೇ ಕ್ವಾರಂಟೈನ್ ಕೇಂದ್ರದಿಂದ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 190ಕ್ಕೆ ಹೆಚ್ಚಳವಾಗಿದ್ದು, ಇದರಲ್ಲಿ 75 ಜನ ಗುಣಮುಖರಾಗಿದ್ದಾರೆ. ಏಳು ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಉಳಿದಂತೆ 108 ಜನ ಮಹಾಮಾರಿ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ