ರೇಪ್‌ ಆರೋಪಿಗೆ ಕೋವಿಡ್ : ಪೊಲೀಸರಿಗೆ ಭೀತಿ

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1232ಕ್ಕೇರಿಕೆ ಇದುವರೆಗೆ 779 ಜನ ಆಸ್ಪತ್ರೆಯಿಂದ ಬಿಡುಗಡೆ

Team Udayavani, Jun 24, 2020, 10:45 AM IST

24-June-02

ಕಲಬುರಗಿ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಹಗಲಿರಳು ಶ್ರಮಿಸುತ್ತಿದ್ದ ಪೊಲೀಸರಿಗೂ ಇದೀಗ ಮಹಾಮಾರಿ ಆತಂಕ ಶುರುವಾಗಿದೆ. ಬಂಧಿತ ಅತ್ಯಾಚಾರ ಆರೋಪಿಯೊಬ್ಬನಿಗೆ ಕೋವಿಡ್‌-19 ದೃಢಪಟ್ಟಿರುವುದರಿಂದ ನಗರ ಪೊಲೀಸರಲ್ಲಿ ಭೀತಿ ಹೆಚ್ಚಿಸಿದೆ.

ಹತ್ತು ವರ್ಷದ ಬಾಲಕಿಯೊಬ್ಬಳ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಪೋಸ್ಕೊ ಪ್ರಕರಣವಾಗಿದ್ದರಿಂದ ಆರೋಪಿಯನ್ನು ನಗರ ಮಹಿಳಾ ಠಾಣೆ ಪೊಲೀಸರು ಬಂಧಿಸಿ ಜೂ.18ರಂದು ಠಾಣೆಗೆ ಕರೆತಂದಿದ್ದರು. ನಂತರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಅಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಪಿಯ ಗಂಟಲು ದ್ರಾವಣ ಮಾದರಿ ಸಂಗ್ರಹಿಸಿ, ಐಸೋಲೇಷನ್‌ ಮಾಡಲಾಗಿತ್ತು. ಸೋಮವಾರ ಪ್ರಯೋಗಾಲಯದಿಂದ ವರದಿ ಬಂದಿದ್ದು,
ಆರೋಪಿ (ಪಿ-9372)ಗೆ ಕೊರೊನಾ ಪಾಸಿಟಿವ್‌ ಎಂದು ದೃಢಪಟ್ಟಿದೆ.

ಕೋವಿಡ್ ಭೀತಿ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಇಷ್ಟು ದಿನ ಆರೋಪಿಗಳನ್ನು ಬಂಧಿಸದೆ, ಕೇವಲ ಪ್ರಕರಣ ದಾಖಲಿಸಿಕೊಳ್ಳುವ ಮೂಲಕ ಜಾಗ್ರತೆ ವಹಿಸಿದ್ದರು. ಲಾಕ್‌ಡೌನ್‌ ಸಡಿಲಿಕೆ ನಂತರ ಕೊಲೆ, ಪೋಸ್ಕೊದಂತಹ ಗಂಭೀರ ಪ್ರಕರಣಗಳು ನಡೆಯುತ್ತಿರುವುದರಿಂದ ಆರೋಪಿಗಳನ್ನು ಬಂಧಿಸಲು ಶುರು ಮಾಡಿದ್ದರು. ಇದರ ಬೆನ್ನೆಲ್ಲೇ ಅತ್ಯಾಚಾರಿ ಆರೋಪಿಗೆ ಸೋಂಕು ಪತ್ತೆಯಾಗಿದೆ. ಇವನಿಗೆ ಕಂಟೇನ್ಮೆಂಟ್‌ ಝೋನ್‌ ಸಂಪರ್ಕದಿಂದ ಕೋವಿಡ್ ಅಂಟಿದೆ ಎಂದು ತಿಳಿದುಬಂದಿದ್ದು, ಹಿನ್ನೆಲೆ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.

13 ಪೊಲೀಸರು ಕ್ವಾರಂಟೈನ್‌: ಆರೋಪಿಗೆ ಕೊರೊನಾ ಖಚಿತವಾಗುತ್ತಿದ್ದಂತೆ ಪೊಲೀಸರು ಸ್ವಯಂ ಪ್ರೇರಣೆಯಿಂದ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ನಗರ ಮಹಿಳಾ ಠಾಣೆ ಇನ್ಸ್‌ಪೆಕ್ಟರ್‌ ಸೇರಿ ಒಟ್ಟು 13 ಸಿಬ್ಬಂದಿಗಳನ್ನು ಕ್ವಾರಂಟೈನ್‌ ನಲ್ಲಿ ಇಡಲಾಗಿದೆ. ಪೊಲೀಸ್‌ ಠಾಣೆ ಮತ್ತು ವಾಹನಗಳನ್ನು ಸ್ಯಾನಿಟೈಜರ್‌ ಮಾಡಿ ಸ್ವಚ್ಛಗೊಳಿಸಲಾಗಿದೆ. ಕಾರಾಗೃಹದಲ್ಲಿ ಆರೋಪಿಯನ್ನು ಐಸೋಲೇಷನ್‌ದಲ್ಲಿ ಇಟ್ಟಿದ್ದರಿಂದ ಅಲ್ಲಿನ ಸಿಬ್ಬಂದಿಗೆ ಯಾವುದೇ ಆತಂಕವಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಎನ್‌. ಸತೀಶ ಕುಮಾರ ಖಚಿತ ಪಡಿಸಿದ್ದಾರೆ.

48 ಜನ ಗುಣಮುಖ: ಜಿಲ್ಲೆಯಲ್ಲಿ ಮಂಗಳವಾರ 48 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಬೀದರ ಮತ್ತು ಯಾದಗಿರಿ ಜಿಲ್ಲೆಯ ತಲಾ ಓರ್ವ ರೋಗಿ ಸೇರಿದಂತೆ ಒಟ್ಟು 48 ಜನ ಬಿಡುಗಡೆಯಾಗಿದ್ದಾರೆ. ಚಿಂಚೋಳಿ ತಾಲೂಕಿನ 1, ಕಾಳಗಿ ತಾಲೂಕಿನ 2, ಕಮಲಾಪುರ ತಾಲೂಕಿನ 7, ಚಿತ್ತಾಪುರ ತಾಲೂಕಿನ 8, ಅಫಜಲಪುರ ತಾಲೂಕಿನ 3, ಕಲಬುರಗಿ ತಾಲೂಕಿನ 8, ಆಳಂದ ತಾಲೂಕಿನ 14, ಕಲಬುರಗಿ ನಗರದ 3 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಬಂಧಿತ ಅತ್ಯಾಚಾರ ಆರೋಪಿಗೆ ಕೋವಿಡ್ ಸೋಂಕು ತಗುಲಿದ್ದು ನಿಜ. ಆದರೆ, ಠಾಣೆ ಸಿಬ್ಬಂದಿ ಅಂತರ ಕಾಪಾಡಿಕೊಂಡಿದ್ದಾರೆ. ಸುರಕ್ಷತಾ ಕ್ರಮ ಅನುಸರಿಸಿದ್ದಾರೆ. ಹೀಗಾಗಿ ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡುವುದಿಲ್ಲ. ಯಾವುದೇ ರೀತಿಯ ಆತಂಕವೂ ಇಲ್ಲ. ಅಲ್ಲದೇ ಇನ್ಸ್‌ಪೆಕ್ಟರ್‌ ಸೇರಿ ಒಟ್ಟು 13 ಸಿಬ್ಬಂದಿ ಕ್ವಾರಂಟೈನ್‌ನಲ್ಲಿ ಇದ್ದಾರೆ. ಅವರ ಗಂಟಲು ದ್ರಾವಣ ಮಾದರಿ ಸಂಗ್ರಹಿಸಿ ಪ್ರಾಯೋಗಾಲಯಕ್ಕೆ ರವಾನಿಸಲಾಗಿದೆ.
ಎನ್‌. ಸತೀಶ ಕುಮಾರ,
ನಗರ ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.