ಕೋವಿಡ್ ಮಹಾಮಾರಿಗೆ ಮತ್ತಿಬ್ಬರು ಬಲಿ
Team Udayavani, Jun 28, 2020, 10:38 AM IST
ಕಲಬುರಗಿ: ಕೋವಿಡ್ ಮಹಾಮಾರಿ ಮತ್ತಿಬ್ಬರನ್ನು ಬಲಿ ಪಡೆದಿದೆ. 72 ವರ್ಷದ ವೃದ್ಧ, 50 ವರ್ಷದ ವ್ಯಕ್ತಿ ಸೋಂಕಿಗೆ ತುತ್ತಾಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ.
ಮೃತ ಇಬ್ಬರೂ ಕಲಬುರಗಿ ನಗರ ಪ್ರದೇಶದವರೇ ಆಗಿದ್ದು, ಜ್ವರ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಗಾಜಿಪುರ ಬಡಾವಣೆಯ 50 ವರ್ಷದ ವ್ಯಕ್ತಿ (ಪಿ-11,278) ತೀವ್ರ ಉಸಿರಾಟದ ತೊಂದರೆಯಿಂದ ಜೂ.25ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಜೂ.26ರಂದು ಕೊನೆಯುಸಿರೆಳೆದಿದ್ದಾರೆ.
ಮತ್ತೊಂದೆಡೆ, ಮದೀನಾ ಕಾಲೋನಿಯ 72 ವರ್ಷದ ವೃದ್ಧ (ಪಿ-9833) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಮಾನ್ಯ ಜ್ವರ ಬಂದಿದ್ದರಿಂದ ವೃದ್ಧನನ್ನು ಜೂ.23ರಂದು ಜಿಮ್ಸ್ಗೆ ದಾಖಲಿಸಲಾಗಿತ್ತು. ಇವರೂ ಜೂ.26ರಂದೇ ಅಸುನೀಗಿದ್ದಾರೆ.ಇಬ್ಬರ ಗಂಟಲು ಮಾದರಿ ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಶನಿವಾರ ಪ್ರಯೋಗಾಲಯದ ಬಂದ ವರದಿಯಲ್ಲಿ ಕೋವಿಡ್ ದೃಢಪಟ್ಟಿದೆ. ಆದರೆ, ವರದಿ ಬರುವ ಮುನ್ನವೇ ಮೃತಪಟ್ಟಿದ್ದಾರೆ.
ಮೃತರು ಸೇರಿ ಶನಿವಾರ ಒಟ್ಟು 33 ಜನರಿಗೆ ಸೋಂಕು ಪತ್ತೆಯಾಗಿದೆ. ಇದರಲ್ಲಿ 29 ಮಂದಿ 50 ವರ್ಷದೊಳಗಿನವರೇ ಹೆಚ್ಚು ಸೋಂಕಿತರಾಗಿದ್ದು, ಇಬ್ಬರು ಮಕ್ಕಳು ಸೇರಿದ್ದಾರೆ. ಉಳಿದಂತೆ 50 ವರ್ಷಕ್ಕಿಂತ ಮೇಲ್ಪಟ್ಟ ನಾಲ್ವರಿಗೆ ಕೊರೊನಾ ಕಾಣಿಸಿಕೊಂಡಿದೆ. ಇದೇ ಶನಿವಾರ ಮತ್ತೆ 24 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,364ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಿಂದ 959 ಸೋಂಕಿತರು ಬಿಡುಗಡೆಗೊಂಡಿದ್ದರೆ, ಇನ್ನೂ 388 ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ವಾಡಿ: ಪಟ್ಟಣ ವ್ಯಾಪ್ತಿಯಲ್ಲಿ ಶನಿವಾರ ನಾಲ್ವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ವಾಡಿ ನಗರದ ಜಾಂಬವೀರ ಕಾಲೋನಿಯ 7 ವರ್ಷದ ಬಾಲಕಿಗೆ, ಬಿರ್ಲಾ ಏರಿಯಾದ 20 ವರ್ಷದ ಯುವತಿಗೆ ಹಾಗೂ ನಾಲವಾರ ವ್ಯಾಪ್ತಿಯ ಬಾಲಿಸೌಕಾರ ತಾಂಡಾದ 49 ವರ್ಷದ ಪುರುಷ, 50 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇವರೆಲ್ಲರೂ ಮಹಾರಾಷ್ಟ್ರದ ವಲಸಿಗರಾಗಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ