ಕೋವಿಡ್ ನಿಯಂತ್ರಣ: ಜಿಲಾಡಳಿತಕ್ಕೆ ಹೊಸ ತಲೆ ನೋವು


Team Udayavani, May 13, 2020, 10:52 AM IST

13-May-02

ಕಲಬುರಗಿ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಜಿಲ್ಲಾಡಳಿತಕ್ಕೆ ಈಗ ಹೊರ ರಾಜ್ಯಗಳಿಂದ ಬಂದಿರುವ ವಲಸಿಗರನ್ನು ಕ್ವಾರಂಟೈನ್‌ ಮಾಡುವುದು ಹೊಸ ಸವಾಲಾಗಿ ಪರಿಣಮಿಸಿದೆ.

ಲಾಕ್‌ಡೌನ್‌ ಜಾರಿಯಾದ ನಂತರ ಬೆಂಗಳೂರು, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಹಲವೆಡೆಗಳಿಂದ 76 ಸಾವಿರಕ್ಕೂ ಅಧಿಕ ಜನರು ಜಿಲ್ಲೆಗೆ ಬಂದಿದ್ದಾರೆ. ಕೋವಿಡ್ ಅಧಿಕವಾಗಿ ಹರಡಿರುವ ಮಹಾರಾಷ್ಟ್ರವೊಂದರಿಂದಲೇ 23 ಸಾವಿರ ಜನರು ಆಗಮಿಸಿದ್ದಾರೆ. ಆರಂಭದಲ್ಲಿ ಬಂದವರನ್ನು ಕೇವಲ ಹೋಂ ಕ್ವಾರಂಟೈನ್‌ ಮಾಡಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಕೋವಿಡ್  ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ ಹೊರಗಡೆಯಿಂದ ಯಾರೇ ಬಂದರೂ, ಅವರನ್ನು ಕಡ್ಡಾಯವಾಗಿ ಪ್ರತ್ಯೇಕ ಸ್ಥಳಗಳಲ್ಲಿ ಕ್ವಾರಂಟೈನ್‌ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ. ಅಲ್ಲದೇ, ಕ್ವಾರಂಟೈನ್‌ಗೆ ಒಳಗಾಗುವವರನ್ನು ಮಾತ್ರವೇ ಕರೆದುಕೊಂಡು ಬರುವ ಷರತ್ತು ಸಹ ವಿಧಿಸಲಾಗುತ್ತಿದೆ.

ಈ ನಡುವೆ ಕೆಲ ಕಡೆಗಳಲ್ಲಿ ಕ್ವಾರಂಟೈನ್‌ ಕೇಂದ್ರಗಳ ಸ್ಥಾಪನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಹೊರಗಡೆಯಿಂದ ಬಂದ ವಲಸಿಗರು ಕ್ವಾರಂಟೈನ್‌ ಆಗಲು ಆಕ್ಷೇಪ ಹೊರ ಹಾಕುತ್ತಿದ್ದಾರೆ. ಹೀಗಾಗಿ ಕ್ವಾರಂಟೈನ್‌ ಎನ್ನುವುದೇ ಜಿಲ್ಲಾಡಳಿತಕ್ಕೆ ಹೊಸ ತಲೆ ನೋವಾಗುವ ಸಂಭವ ಇದೆ.

ಮುಂಬೈನಿಂದ ಬಂದವರಿಂದ ತಗಾದೆ: ಮಾರಣಾಂತಿಕ ಸೋಂಕಿನಿಂದ ಈಗಾಗಲೇ ಜಿಲ್ಲೆ ತತ್ತರಿಸಿದೆ. ಹೊಸ ಪ್ರಕರಣಗಳು ಪತ್ತೆಯಾಗುತ್ತಲೇ ಇವೆ. ಹೊರ ರಾಜ್ಯಗಳಿಂದ ಬಂದ ವಲಸಿಗರಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಮುಂಬೈನಿಂದ ಬಂದು ಆಳಂದ ತಾಲೂಕಿನ ವಿ.ಕೆ. ಸಲಗರ ಗ್ರಾಮದ ವಸತಿ ನಿಲಯದಲ್ಲಿ ಕ್ವಾರಂಟೈನ್‌ ಆಗಿದ್ದ ಕಮಲಾಪುರ ತಾಲೂಕಿನ 30 ವರ್ಷದ ಸೋಂಕಿತ ವ್ಯಕ್ತಿ (ಪಿ-806) ಗೆ ಮೇ 10ರಂದು ಕೋವಿಡ್ ದೃಢ ಪಟ್ಟು ಮತ್ತಷ್ಟು ಆತಂಕ ಹುಟ್ಟಿಸಿದೆ. ಆದ್ದರಿಂದ ವಲಸಿಗರ ಮೇಲೆ ಹೆಚ್ಚಿನ ನಿಗಾ ವಹಿಸುವುದು ಅನಿವಾರ್ಯವಾಗಿದೆ. ಆದರೆ, ಮಂಗಳವಾರ ಬೆಳಗಿನ ಜಾವ ವಿಶೇಷ ಶ್ರಮಿಕ್‌ ರೈಲಿನಲ್ಲಿ ಮುಂಬೈನಿಂದ ಆಗಮಿಸಿದ ಕೆಲ ವಲಸಿಗರು ಕ್ವಾರಂಟೈನ್‌ ಬಗ್ಗೆ ತಗಾದೆ ತೆಗೆದಿದ್ದಾರೆ. ಮುಂಬೈನಿಂದ ಬಂದ ನಂತರ ಮನೆಗೆ ರವಾನಿಸಿ ಹೋಂ ಕ್ವಾರಂಟೈನ್‌ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಸರ್ಕಾರದ ಕ್ವಾರಂಟೈನ್‌ ಕೇಂದ್ರಗಳಿಗೆ ರವಾನಿಸುವುದಾಗಿ ಹೇಳುತ್ತಿದ್ದಾರೆ ಎಂದು ನಾಲವಾರ, ಯಾಗಾಪುರ ಮತ್ತು ಅಲಿಪುರದ ವಲಸಿಗರು ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ ಸೃಷ್ಟಿಸಿದ್ದರು. ಆದರೆ, ಅಧಿಕಾರಿಗಳು ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೇ ಎಲ್ಲರನ್ನೂ ಅವರ ಊರುಗಳ ಸಮೀಪದ ಕ್ವಾರಂಟೈನ್‌ ಕೇಂದ್ರಗಳಿಗೆ ಸ್ಥಳಾಂತರ ಮಾಡಿದ್ದಾರೆ.

ಜಿಲ್ಲಾಡಳಿತದ ಮುನ್ನೆಚ್ಚರಿಕೆ: ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬರುವವರ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣಿರಿಸಿದ್ದು, ಹೊರ ಜಿಲ್ಲೆಯಿಂದ ಬಂದ ಎಲ್ಲರ ಆರೋಗ್ಯ ತಪಾಸಣೆ ಮಾಡಿ, ಬಳಿಕ ಒಳ ಬಿಡಲಾಗುತ್ತಿದೆ. ಕ್ವಾರಂಟೈನ್‌ ಕೇಂದ್ರಗಳಲ್ಲೂ ಕಟ್ಟುನಿಟ್ಟಿನ ಕ್ರಮ ವಹಿಸುತ್ತಿದ್ದು, ಉಸ್ತುವಾರಿಗೆ ಕಂದಾಯ ಇಲಾಖೆ ಸಿಬ್ಬಂದಿ ನೇಮಿಸಲಾಗಿದೆ. ಅಲ್ಲಿ ಪರಿಸ್ಥಿತಿ ಬಿಗಡಾಯಿಸಿದರೆ ತಕ್ಷಣವೇ ಪೊಲೀಸ್‌ ಸಿಬ್ಬಂದಿಯನ್ನೂ ರವಾನಿಸುವ ಕೆಲಸವಾಗುತ್ತಿದೆ.

ನಾಲ್ಕು ಸಾವಿರ ಜನರಿಗೆ ವ್ಯವಸ್ಥೆ
ಹೊರಗಡೆಯಿಂದ ಬಂದವರಿಗೆ ಕ್ವಾರಂಟೈನ್‌ ಮಾಡಲು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಮತ್ತು ಅಲ್ಪಸಂಖ್ಯಾತ ಇಲಾಖೆ ಸುಮಾರು 40 ವಸತಿ ನಿಲಯಗಳನ್ನು ಬಳಕೆ ಮಾಡಲಾಗುತ್ತಿದೆ. ಅಲ್ಲಿ ಸುಮಾರು ನಾಲ್ಕು ಸಾವಿರ ಜನರಿಗೆ ಕ್ವಾರಂಟೈನ್‌ ವ್ಯವಸ್ಥೆ ಆಗಲಿದೆ. ಜತೆಗೆ ವಸತಿ ಗೃಹಗಳು ಹಾಗೂ ಸಮುದಾಯ ಭವನಗಳನ್ನೂ ಕ್ವಾರಂಟೈನ್‌ ಕೇಂದ್ರಗಳನ್ನಾಗಿ ಜಿಲ್ಲಾಡಳಿತ ಪರಿವರ್ತಿಸುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜಿಲ್ಲೆಗೆ ಹೊರ ಭಾಗದಿಂದ ಯಾರೇ ಬಂದರೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಲಾಗುತ್ತದೆ. ನಂತರದಲ್ಲಿ 12-14ನೇ ದಿನ ಪ್ರತಿಯೊಬ್ಬರ ಗಂಟಲು ದ್ರಾವಣ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಪ್ರಯೋಗಾಲಯದ ವರದಿ ನೆಗೆಟಿವ್‌ ಬಂದರೆ, ಮನೆಗೆ ಕಳುಹಿಸಿಕೊಡಲಾಗುತ್ತದೆ.
ಡಾ| ರಾಜಾ ಪಿ.,
ಸಿಇಒ ಜಿಪಂ

ಮುಂಬೈನಿಂದ ರೈಲು ಮೂಲಕ ಒಟ್ಟು 1,251 ಜನರು ಆಗಮಿಸಿದ್ದಾರೆ. ಕಲಬುರಗಿ ಜಿಲ್ಲೆ ಮಾತ್ರವಲ್ಲದೇ, ಯಾದಗಿರಿ, ವಿಜಯಪುರದ ಕಾರ್ಮಿಕರು ಸಹ ಇದ್ದರು. ಜಿಲ್ಲೆಯ ಕಾರ್ಮಿಕರನ್ನು ಆಯಾ ತಾಲೂಕುಗಳಿಗೆ ಸ್ಥಳಾಂತರಿಸಿ ಕ್ವಾರಂಟೈನ್‌ ಮಾಡಲಾಗಿದೆ. ಹೊರ ಜಿಲ್ಲೆಯವರನ್ನು ಅವರ ಜಿಲ್ಲೆಗೆ ರವಾನಿಸಲಾಗಿದೆ.
ಶರತ್‌ ಬಿ.,
ಜಿಲ್ಲಾಧಿಕಾರಿ

ರಂಗಪ್ಪ ಗಧಾರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.