ದಲ್ಲಾಳಿ ಹಾವಳಿ ತಪ್ಪಿಸಿದ ನೇರ ಮಾರುಕಟ್ಟೆ

ನೇರ ಮಾರಾಟ ಮಾಡುತ್ತಿರುವ ಕೃಷಿಕ: ಗ್ರಾಹಕರಿಗೆ ತಾಜಾ ತರಕಾರಿ „ಸೂಕ್ತ ಮಾಹಿತಿ-ವ್ಯವಸ್ಥೆ ಕಲ್ಪಿಸುತ್ತಿರುವ ಸಂಚಾರಿ ಪೊಲೀಸರು

Team Udayavani, Apr 29, 2020, 10:36 AM IST

29-April-01

ಕಲಬುರಗಿ: ನಗರದ ಜಿಡಿಎ ನಿವೇಶನ ಬಡಾವಣೆಯಲ್ಲಿ ಸ್ಥಾಪಿತವಾಗಿರುವ ತರಕಾರಿ ಮಾರುಕಟ್ಟೆಯಲ್ಲಿ ಮಳಿಗೆಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಲಾಗಿದೆ

ಕಲಬುರಗಿ: ಕಷ್ಟಪಟ್ಟು ಬೆಳೆದ ತರಕಾರಿಯನ್ನು ದಲ್ಲಾಳಿಗಳು ಬೇಡಿದ ಬೆಲೆಗೆ ನೀಡಿ ನಿರಾಸೆಯಿಂದ ಮನೆಗೆ ಮರಳಬೇಕಿತ್ತು. ಇಲ್ಲವೇ ಕೆಲವೊಮ್ಮೆ ದಲ್ಲಾಳಿಗಳ ದೌರ್ಜನ್ಯಕ್ಕೆ ಒಳಗಾಗಿ ರಸ್ತೆಗೆ ಚೆಲ್ಲಿ ಬರಲಾಗುತ್ತಿತ್ತು. ಇಂತಹ ಕೆಟ್ಟ ವ್ಯವಸ್ಥೆ ತೊಲಗಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾರೂ ಗಮನಹರಿಸಿರಲಿಲ್ಲ.

ಇದು ನಗರ ಕೇಂದ್ರ ಬಸ್‌ ನಿಲ್ದಾಣ ಹತ್ತಿರದ ಕಣ್ಣಿ ತರಕಾರಿ ಮಾರುಕಟ್ಟೆಯಲ್ಲಿ ತೊಂದರೆ ಅನುಭವಿಸಿದ ರೈತರ ನೋವಿನ ದಿನಗಳು. ಈಗ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜನಸಂದಣಿ ಹಾಗೂ ಮಧ್ಯವರ್ತಿ(ದಲ್ಲಾಳಿ) ಗಳ ಹಾವಳಿ ತಪ್ಪಿಸಲೆಂದು ನಗರದ ಕೇಂದ್ರ ಬಸ್‌ ನಿಲ್ದಾಣ ಹತ್ತಿರದಲ್ಲಿದ್ದ ಕಣ್ಣಿ ತರಕಾರಿ ಮಾರುಕಟ್ಟೆಯನ್ನು ನಗರದ ಜೇವರ್ಗಿ ರಸ್ತೆಯ ಅಟಲ್‌ ಬಿಹಾರಿ ವಾಜಪೇಯಿ ಜಿಡಿಎ ಬಡಾವಣೆಗೆ ಸ್ಥಳಾಂತರಿಸಿದ್ದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ.

ಕಷ್ಟಪಟ್ಟು ಬೆಳೆದ ಟೋಮ್ಯಾಟೋ ಒಂದು ರೂ.ಕೆ.ಜಿಗೆ ಪಡೆದು ಅದನ್ನು ಗ್ರಾಹಕರಿಗೆ ಕೆ.ಜಿಗೆ 10ರೂ.ನಂತೆ, ಉಳಾಗಡ್ಡಿ, ಸೌತೆಕಾಯಿ, ಆಲೂ ಜತೆಗೆ ತರಕಾರಿಯನ್ನು ಸಹ ಇದೇ ದರದಲ್ಲಿ ರೈತರಿಂದ ಪಡೆದು ಅದನ್ನು ನಾಲ್ಕೈದು ಪಟ್ಟು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದನ್ನು ನಾವು ದಶಕಗಳಿಂದ ನೋಡುತ್ತಾ ಬಂದಿದ್ದೇವೆ. ಇಲ್ಲಿ ರೈತ ಹಾಗೂ ಗ್ರಾಹಕ (ಸಾರ್ವಜನಿಕ) ಇಬ್ಬರೂ ನಷ್ಟ ಅನುಭವಿಸುತ್ತಿದ್ದರು. ಆದರೀಗ ಜಿಡಿಎ ಬಡಾವಣೆಯಲ್ಲಿ ಸ್ಥಾಪಿಸಿರುವ ತಾತ್ಕಾಲಿಕ ತರಕಾರಿ ಮಾರುಕಟ್ಟೆಯಲ್ಲಿ ರಾತ್ರಿ 8 ಗಂಟೆಯಿಂದ ಬೆಳಗಿನ ಜಾವದವರೆಗೂ ರೈತರು ಸಾಧ್ಯವಾದ ಮಟ್ಟಿಗೆ ನೇರವಾಗಿ ಮಾರಾಟ ಮಾಡುತ್ತಿರುವುದು ರೈತರಿಗೆ ಹಾಗೂ ಗ್ರಾಹಕರಿಬ್ಬರಿಗೂ ಉಪಯುಕ್ತವಾಗಿದೆ. ಅಲ್ಲದೇ ದಲ್ಲಾಳಿಗಳ ದೌರ್ಜನ್ಯಕ್ಕೆ ತಕ್ಕಪಟ್ಟಿಗೆ ಕಡಿವಾಣ ಹಾಕಿರುವುದು ಪ್ರಶಂಸನೀಯಕ್ಕೆ ಪಾತ್ರವಾಗುತ್ತಿದೆ.

ಕಣ್ಣಿ ಮಾರುಕಟ್ಟೆಯಲ್ಲಿ ಜಾಗ ಇಕ್ಕಟ್ಟಾಗಿತ್ತು. ಅಲ್ಲದೇ ರಾಜ್ಯ ಹೆದ್ದಾರಿ ರಸ್ತೆಯಾಗಿರುವುದರಿಂದ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗಿತ್ತು. ಸಂಚಾರಿ ಪೊಲೀಸರಿಗಂತೂ ದೊಡ್ಡ ಸವಾಲಾಗಿತ್ತು. ಈಗ ವಿಶಾಲವಾದ ಜಾಗದಲ್ಲಿ ಹೊಸದಾಗಿ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗಿದೆ. ಜತೆಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗಿದೆ. ಸಂಚಾರಿ ಪೊಲೀಸರು ಧ್ವನಿವರ್ಧಕಗಳ ಮೂಲಕ ಸೂಕ್ತ ಮಾಹಿತಿ ನೀಡುತ್ತಿದ್ದಾರೆ. ಅಲ್ಲದೇ ಕೋವಿಡ್‌ ಮಾಹಿತಿ ಕೇಂದ್ರ ಸ್ಥಾಪಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ವಹಿವಾಟು ಎಷ್ಟು?: ಈ ಮಾರುಕಟ್ಟೆಯಲ್ಲಿ ದಿನಾಲು ಏನಿಲ್ಲವೆಂದರೂ 50ರಿಂದ 60 ಲಕ್ಷ ರೂ. ವ್ಯಾಪಾರ-ವಹಿವಾಟು ನಡೆಯುತ್ತಿದೆ. ದಿನಾಲು ನಗರದ ಸುತ್ತಮುತ್ತಲಿನ 175ರಿಂದ 200 ವಾಹನಗಳಲ್ಲಿ ತಾಜಾ ತರಕಾರಿ ಬರುತ್ತದೆ. ಆದರೆ ಈ ವಹಿವಾಟು ಸರಿಯಾದ ನಿಟ್ಟಿನಲ್ಲಿ ನಡೆಯುತ್ತಿಲ್ಲ ಎನ್ನುವುದು ಮಾತ್ರ ಅಸಮಾಧಾನದ ಸಂಗತಿಯಾಗಿದೆ.

ಈಗ ವ್ಯವಸ್ಥೆ ಕಲ್ಪಿಸಿರುವುದು ತಾತ್ಕಾಲಿಕವಾಗಿದೆ. ಏಕೆಂದರೆ ಈ ಜಾಗ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೇರೆಡೆ ಇದೇ ತೆರನಾದ ವ್ಯವಸ್ಥೆ ಕಲ್ಪಿಸಿ ರೈತರಿಗೆ ನೇರ ಮಾರುಕಟ್ಟೆಗೆ ವ್ಯವಸ್ಥೆ ಕಲ್ಪಿಸಿದಲ್ಲಿ ಕೃಷಿಕನಿಗೆ ನ್ಯಾಯ ಕಲ್ಪಿಸಿದಂತಾಗುತ್ತದೆ. ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಯವರು ಈ ನಿಟ್ಟಿನಲ್ಲಿ ವಿಚಾರ ಮಾಡಿ ಕಾರ್ಯರೂಪಕ್ಕೆ ತರಲಿ ಎಂಬುದೇ ರೈತರ ಒಕ್ಕೊರಲಿನ ಆಗ್ರಹವಾಗಿದೆ.

ಕಲಬುರಗಿ ನಗರದ ಎರಡ್ಮೂರು ಕಡೆ ಮೂಲಭೂತ ಸೌಕರ್ಯಗಳೊಂದಿಗೆ ರೈತರೇ ನೇರವಾಗಿ ತರಕಾರಿ ಮಾರಾಟ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು. ದಲ್ಲಾಳಿಗಳ ಹಾವಳಿ ತಪ್ಪಿಸಲು ಮಳಿಗೆಗಳನ್ನು ಸುತ್ತಮುತ್ತಲಿನ ಗ್ರಾಮಗಳ ರೈತ ಸಹಕಾರಿ ಸಂಘಗಳಿಗೆ ಹಾಗೂ ರೈತರಿಗೆ ಹಂಚಿಕೆ ಮಾಡಬೇಕು. ಎಪಿಎಂಸಿಯಲ್ಲಿ ಕೃಷಿ ಉತ್ಪನ್ನಗಳಿಗೆ ದರ ಘೋಷಣೆ ಮಾಡುವಂತೆ ತರಕಾರಿಗೂ ದಿನನಿತ್ಯ ದರ ಘೋಷಣೆ ಮಾಡಬೇಕು. ಕೋಲ್ಡ್‌ ಸ್ಟೋರೇಜ್‌ ಸ್ಥಾಪನೆಯಾಗಬೇಕು.
ಬಸವರಾಜ ವ್ಹಿ ಡಿಗ್ಗಾವಿ,
ನಂದಿವನ ಸಂಸ್ಥಾಪಕ

ಲಾಕ್‌ಡೌನ್‌ದಿಂದ ಕಣ್ಣಿ ಮಾರುಕಟ್ಟೆ ಜಿಡಿಎ ನಿವೇಶನ ಬಡಾವಣೆಗೆ ಬಂದಿರುವುದು ಅನುಕೂಲವಾಗಿದೆ. ಕಣ್ಣಿ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ದೌರ್ಜನ್ಯ ನಡೆಸುತ್ತಿದ್ದರು. ಕೇಳಿದ ದರಕ್ಕೆ ತರಕಾರಿ ನೀಡದಿದ್ದರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶವೇ ನೀಡುತ್ತಿರಲಿಲ್ಲ. ಕೆಲವೊಮ್ಮೆ ಉಚಿತವಾಗಿಯೇ ಕೊಟ್ಟು ಬಂದಿದ್ದೆವು. ಮುಂಗೈ ಜೋರು ಇದ್ದವರು ಜಾಗ ಪಡೆಯುತ್ತಿದ್ದರು. ಆದರೀಗ ಎಪಿಎಂಸಿಯವರು ಮಳಿಗೆಯನ್ನು ಇಂತಹವರಿಗೆ ಎಂದು ನಿಗದಿ ಮಾಡುತ್ತಿರುವುದರಿಂದ ದಲ್ಲಾಳಿ ಹಾವಳಿ ನಿಂತಿದೆ. ಬೆಳಗ್ಗೆಯೂ ತರಕಾರಿ ಮಾರಲು ವ್ಯವಸ್ಥೆಯಾದರೆ ಉತ್ತಮವಾಗುತ್ತದೆ. ಕಣ್ಣಿ ಮಾರುಕಟ್ಟೆ ಅಂತಹ ಕೆಟ್ಟ ಸ್ಥಿತಿ ಯಾರಿಗೂ ಬರಬಾರದು.
ಯಲ್ಲಾಲಿಂಗ ಪೂಜಾರಿ,
ರೈತ, ಕೂಟನೂರ

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.