ಕೃಷಿ ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಳ


Team Udayavani, Apr 16, 2020, 10:37 AM IST

16-April-01

ಕಲಬುರಗಿ: ಇಡೀ ಮಾನವ ಕುಲವನ್ನೇ ತಲ್ಲಣಿಸಿದ ಕೊರೊನಾ ವೈರಸ್‌ ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಹೊಡೆತ ನೀಡಿದರೂ ಕೂಲಿ ಕಾರ್ಮಿಕರ ಸಂಖ್ಯೆ ಮಾತ್ರ ಹೆಚ್ಚಳವಾಗುವಂತೆ ಮಾಡಿದೆ. ಕೃಷಿ ಕೆಲಸ ಕಾರ್ಯ ಹಾಗೂ ತೋಟಗಳಲ್ಲಿ ವರ್ಷಕ್ಕೆಂದು ಇಂತಿಷ್ಟು ಸಂಬಳಕ್ಕೆಂದು ದುಡಿಯುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಅಲ್ಲದೇ ಸಂಬಳ ಸಹ ಕಳೆದ ವರ್ಷಕ್ಕಿಂತ ಕಡಿಮೆ ಆಗಿದೆ.

ಪ್ರತಿ ವರ್ಷ ಯುಗಾದಿ ಹಬ್ಬದ ದಿನದಿಂದ ಹಿಡಿದು ಮುಂದಿನ ಯುಗಾದಿವರೆಗೂ ದುಡಿತದ ಅವಧಿ ಚಾಲ್ತಿಯಲ್ಲಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕೊರೊನಾ ಬರುವ ಮುಂಚೆ ಮಾರ್ಚ್‌ ಮಧ್ಯದ ಅವಧಿಯಲ್ಲಿ ವರ್ಷದ ಅವಧಿಗೆ ದುಡಿತಕ್ಕೆ ಒಂದು ಲಕ್ಷ ಇಲ್ಲವೇ 1.20 ಲಕ್ಷ ರೂ. ಸಂಬಳ ನಿಗದಿಯಾಗಿತ್ತು. ಆದರೆ ಈ ಸಮಯದಲ್ಲೇ ಕೊರೊನಾ ಹಾವಳಿ ವ್ಯಾಪಕವಾಗಿ ದೂರದ ಊರುಗಳಿಗೆ ಹೋಗಿದ್ದ ಕೃಷಿ ಕೂಲಿ ಕಾರ್ಮಿಕರು ವಾಪಸ್‌ ಬಂದ ನಂತರ ಸಂಬಳ ಕಡಿಮೆ ಆಗಲಾರಂಭಿಸಿತು. 80 ಸಾವಿರದಿಂದ 90 ಸಾವಿರ ರೂ.ಗೆ ಬಂದು ನಿಂತಿತ್ತು. ಇದಕ್ಕೆ ವಾಪಸ್‌ ಬಂದ ದುಡಿಯುವವರೇ ಕಾರಣ ಎನ್ನುವುದರಲ್ಲಿ ಎರಡು ಮಾತಿಲ್ಲ.

ಉದ್ಯೋಗ ಖಾತ್ರಿ ಯೋಜನೆ ಬಂದು ರೈತರಿಗೆ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ ತಂದೊಡ್ಡಿದ್ದು ಒಂದೆಡೆಯಾದರೆ, ಊರಲ್ಲಿ ಇದ್ದ ಕೃಷಿ ಕೂಲಿ ಕಾರ್ಮಿಕರು ದೂರದ ಪಟ್ಟಣಗಳಿಗೆ ಕಟ್ಟಡ, ಇಟ್ಟಂಗಿ ಭಟ್ಟಿ ಸೇರಿದಂತೆ ಇತರ ಕಾಮಗಾರಿಗೆ ಪ್ರತಿ ಹಳ್ಳಿಯಿಂದ 100ರಿಂದ 150 ಕೃಷಿ ಕೂಲಿ ಕಾರ್ಮಿಕರು ಹೋಗಿದ್ದರು. ಕೊರೊನಾ ಹೊಡೆತದಿಂದ ಶೇ. 90 ಕಾರ್ಮಿಕರೆಲ್ಲರೂ ಈಗಾಗಲೇ ಮರಳಿ ಸ್ವ ಗ್ರಾಮಕ್ಕೆ ಬಂದಿದ್ದು, ಇದರಲ್ಲಿ ಶೇ.80 ಕಾರ್ಮಿಕರು ವಾಪಸ್‌ ಹೋಗದಿರಲು ನಿರ್ಧರಿಸಿದ್ದಾರೆ.

ಇವರೆಲ್ಲರೂ ಊರಲ್ಲೇ ಹೊಲ-ಗದ್ದೆಗಳಲ್ಲಿ ಕೃಷಿ ಕೂಲಿ ಮಾಡಿಕೊಂಡು ಜೀವನ ಸಾಗಿಸಲು ಮುಂದಾಗಿದ್ದಾರೆ. ಹೀಗಾಗಿ ರೈತರಿಗೆ ತಕ್ಕಮಟ್ಟಿಗೆ ಕೃಷಿ ಕೂಲಿ ಕಾರ್ಮಿಕ ಸಮಸ್ಯೆ ನೀಗುವುದು ಸ್ಪಷ್ಟವಾಗಿದೆ. ಕೊರೊನಾ ಭೀತಿಯಿಂದ ಕಾರ್ಮಿಕರು ಕಷ್ಟಪಟ್ಟು ಜೀವ ಕೈಯಲ್ಲಿಡಿದುಕೊಂಡು ಬಂದಿರುವುದನ್ನು ಜೀವನ ಪರ್ಯಂತ ಮರೆಯುವಂತಿಲ್ಲ. ಕೆಲವೆಡೆ ಮಾಲೀಕರು ಸಂಬಳ ನೀಡದೇ ಬರಿಗೈಲಿ ಕಳುಹಿಸಿ ರುವುದು ಮಾನಸಿಕವಾಗಿ ಕುಗ್ಗುವಂತೆ ಮಾಡಿದೆ. ಊರಲ್ಲಿ ರೈತರು ಊಟಕ್ಕೆ ಜೋಳ ಕೊಡ್ತಾರೆ, ಜೀವನ ಸಾಗಿಸಲಿಕ್ಕೆ ಹಣ ನೀಡ್ತಾರೆ. ಇನ್ಮುಂದೆ ಹಳ್ಳಿ ಬಿಟ್ಟು ಇನ್ಮುಂದೆ ಹೋಗೋದಿಲ್ಲ ಎಂದು ಕೃಷಿ ಕೂಲಿ ಕಾರ್ಮಿಕರು ಹೇಳುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಹೆಚ್ಚಿಗೆ ಸಿಗಬಹುದು. ಆದರೆ ಅನಗತ್ಯವಾಗಿ ಖರ್ಚೆ ಹೆಚ್ಚಾಗುತ್ತಿತ್ತು. ಊರಿಗೆ ಬರುವಾಗ ಬರಿಗೈಲೆ ಬರುತ್ತಿದ್ದೆವು. ಈಗ ಅದರ ಸಹವಾಸವೇ ಬೇಡ, ಸತ್ತರೇ ಊರಲ್ಲೇ ಇರ್ತೇವೆ ಎನ್ನುತ್ತಾರೆ ಮುಂಬೈ, ಪುಣೆ-ಬೆಂಗಳೂರಿಗೆ ಹೋಗಿ ವಾಪಸ್ಸಾಗಿರುವ ಕೂಲಿಕಾರರು. ಹಳ್ಳಿಗೆ ಬಂದಿರುವ ಬಹುತೇಕ ಯುವಕರು ತಮ್ಮ ಹೊಲ ಗದ್ದೆಗಳ ಕೃಷಿ ಕಾಯಕದಲ್ಲಿ ತೊಡಗೋಣ ಎಂಬುದಾಗಿ ಹೇಳುತ್ತಿದ್ದಾರೆ.

ಮೇಟಿ ವಿದ್ಯೆಗೆ ಹೆಚ್ಚಿದ ಮಹತ್ವ: ಸಕಾಲಕ್ಕೆ ಕೃಷಿ ಕೂಲಿ ಕಾರ್ಮಿಕರು ಸಿಗದೇ ಇದ್ದುದ್ದಕ್ಕೆ ಅನೇಕ ರೈತರು ಕೃಷಿ ಮಾಡೋದನ್ನೇ ಬಿಟ್ಟಿದ್ದರು. ಇನ್ನು ಕೆಲವರು ಗುತ್ತಿಗೆ ಕೃಷಿಗೆ ಮೊರೆ ಹೋಗಿದ್ದರು. ಈಗ ಗ್ರಾಮಗಳಿಗೆ ಕೃಷಿ ಕೂಲಿ ಕಾರ್ಮಿಕರು ವಾಪಸ್‌ ಬಂದಿದ್ದರಿಂದ ಕೃಷಿಯಿಂದ ವಿಮುಕ್ತರಾದವರು ಮತ್ತೆ ಕೃಷಿ ಕಾರ್ಯಕ್ಕೆ ಇಳಿದಿದ್ದಾರೆ. ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಯಿಂದ ವರ್ಷಕ್ಕೆ ಶೇ.5ರಿಂದ7 ಪ್ರತಿಶತದಷ್ಟು ರೈತರು ಕೃಷಿಯಿಂದ ವಿಮುಕ್ತರಾಗುತ್ತಿದ್ದರು ಎನ್ನುವುದೊಂದು ವರದಿ ಇತ್ತು. ಈಗ ಇವರೆಲ್ಲರೂ ವಾಪಸ್‌ ಕೃಷಿಗೆ ಮರಳಿ ಬರುವುದು ನಿಶ್ಚಿತ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಒಟ್ಟಾರೆ ಮೇಟಿ ವಿದ್ಯೆಗೆ ಈಗ ಹೆಚ್ಚಿನ ಮಹತ್ವ ಬರುತ್ತಿದೆ.

ದೂರದ ಊರಿಗೆ ಹೋದವರಿಂದು ಹಳ್ಳಿಗಳಿಗೆ ವಾಪಸ್‌ ಬಂದಿದ್ದಾರೆ. ಇವರಿಗೆ ಕೃಷಿ ಕೂಲಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟರೆ ಬೇರೆ ಕಾರ್ಯವಿಲ್ಲ. ಮುಖ್ಯವಾಗಿ ಕೃಷಿ ಕೂಲಿ ಕಾರ್ಮಿಕರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.  ದಿನ ದಿನಗಳಲ್ಲಿ ತಕ್ಕಮಟ್ಟಿಗೆ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ ನೀಗುವ ವಿಶ್ವಾಸ ಹೊಂದಲಾಗಿದೆ.
ಭೀಮಶೆಟ್ಟಿ ಎಂಪಳ್ಳಿ,
ಅಧ್ಯಕ್ಷರು, ಕೃಷಿ ಕೂಲಿ
ಕಾರ್ಮಿಕರ ಸಂಘ,
ಕಲಬುರಗಿ

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.