19ಗಂಟೆಗೆ ಒಬ್ಬರಲ್ಲಿ ಕಾಣಿಸುತ್ತಿದೆ ಕೋವಿಡ್

ಪಿಪಿಇ ಕಿಟ್‌ ಕಳಪೆ-ಕುಡಿಯಲು ನೀರಿಲ್ಲಇಎಸ್‌ಐ ಆಸ್ಪತ್ರೆ ಮಾತ್ರ ಬಳಕೆಯಾಗಲಿ

Team Udayavani, Apr 29, 2020, 10:51 AM IST

29-April-02

ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಡಾ| ಅಜಯಸಿಂಗ್‌, ಕೆ.ಬಿ. ಶರಣಪ್ಪ, ಶಾಸಕ ಎಂ.ವೈ. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ ಇದ್ದರು

ಕಲಬುರಗಿ: ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ಡಾ| ಅಜಯ್‌ ಸಿಂಗ್‌ ಮತ್ತು ಶಾಸಕ ಪ್ರಿಯಾಂಕ್‌ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ವೈದ್ಯರಿಗೆ ಪಿಪಿಇ ಕಿಟ್‌, ಮಾಸ್ಕ್ಸ ಸರಿಯಾಗಿ ಸಿಗುತ್ತಿಲ್ಲ. ಕ್ವಾರಂಟೈನ್‌ನಲ್ಲಿರುವವರಿಗೆ ಸೌಲಭ್ಯ ನೀಡುತ್ತಿಲ್ಲ. ಕುಡಿಯಲು ನೀರಿಲ್ಲ. ಶೌಚಾಲಯ ವ್ಯವಸ್ಥೆಯೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪ್ರತಿ 19 ಗಂಟೆಗೆ ಒಬ್ಬರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಪೈಕಿ ಹೆಚ್ಚಿನವರು ಕಲಬುರಗಿ ಜಿಲ್ಲೆಯವರು. ಆದರೂ, ಜಿಮ್ಸ್‌ ಲ್ಯಾಬ್‌ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಟೀಕಿಸಿದರು. ಪ್ರತಿ ಜಿಲ್ಲೆಗೆ ಲ್ಯಾಬ್‌ ತೆಗೆಯುವುದಾಗಿ ಸರ್ಕಾರ ಹೇಳಿತ್ತು. ಆದರೆ, ಇಲ್ಲಿಯ ವರೆಗೆ ಎಲ್ಲ ಜಿಲ್ಲೆಗಳಲ್ಲಿ ಲ್ಯಾಬ್‌ ತೆರೆಯುವ ಕೆಲಸ ಮಾಡಿಲ್ಲ. ಹೀಗಾಗಿ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳು ಮತ್ತು ಪಕ್ಕದ ವಿಜಯಪುರದ ಮಾದರಿಗಳನ್ನು ಕಲಬುರಗಿಯ ಒಂದೇ ಲ್ಯಾಬ್‌ನಲ್ಲಿ ಪರೀಕ್ಷಿಸುವ ಪರಿಸ್ಥಿತಿ ಇದೆ. ಅದರಲ್ಲೂ ಲ್ಯಾಬ್‌ ಸಾಮರ್ಥ್ಯ ಕಡಿಮೆ ಇರುವುದರಿಂದ ಬೆಂಗಳೂರಿಗೆ ಮಾದರಿ ರವಾನಿಸಲಾಗುತ್ತಿದೆ. ವರದಿ ಬರುವ ವರೆಗೆ ಶಂಕಿತರು ಎಲ್ಲಿ ಇರುತ್ತಾರೆ? ಎಷ್ಟು ಜನರ ಸಂಪರ್ಕಕ್ಕೆ ಬಂದಿರುತ್ತಾರೆ ಎನ್ನುವ ಮಾಹಿತಿಯೂ ಸಿಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಕೋವಿಡ್ ಮಹಾಮಾರಿ ಯುದ್ಧ ಗೆಲ್ಲಬೇಕು ಎಂದರೆ ರಕ್ಷಕರಿಗೆ ಶ್ರೀರಕ್ಷೆ ದೊರಕಬೇಕು. ಐಸಿಎಂಆರ್‌ ಮಾರ್ಗಸೂಚಿ ಪ್ರಕಾರ ಪಿಪಿಇ ಕಿಟ್‌ ಇಲ್ಲ ಎಂದು ಸ್ವತಃ ವೈದ್ಯರೇ ಹೇಳುತ್ತಿದ್ದಾರೆ. ಕಳಪೆ ಪಿಪಿಇ ಕಿಟ್‌ ನೀಡಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರಿಗೆ ವೈದ್ಯರು ಲಿಖೀತವಾಗಿ ಬರೆದುಕೊಟ್ಟಿದ್ದಾರೆ. ಕೊರೊನಾ ವಾರ್ಡ್‌ ಲ್ಲಿ ಸ್ಯಾನಿಟೈಸರ್‌ ಸಹ ನೀಡಿಲ್ಲ. ವೈದ್ಯ ಸಿಬ್ಬಂದಿ ದೂರು ನೀಡಿದರೂ ಅದನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಚಿಕಿತ್ಸೆ ಸಿಗದೇ ಸತ್ತವರೆಷ್ಟು?: ಪ್ರತಿ ಜಿಲ್ಲೆಯಲ್ಲಿ ಒಂದು ಕೋವಿಡ್ ಆಸ್ಪತ್ರೆ ಇರಬೇಕೆಂದು ಸರ್ಕಾರ ಹೇಳಿದೆ. ಆದರೆ, ಜಿಲ್ಲೆಯಲ್ಲಿ ಇಎಸ್‌ಐ ಮತ್ತು ಜಿಮ್ಸ್‌ ಆಸ್ಪತ್ರೆ ಸೇರಿದಂತೆ ಎರಡನ್ನು ಕೋವಿಡ್ ಆಸ್ಪತ್ರೆ ಮಾಡಲಾಗಿದೆ. ಇದರಿಂದ ವೈದ್ಯರು, ಸಾರ್ವಜನಿಕರು ಸಮಸ್ಯೆ ಎದುರಿಸುವಂತೆ ಆಗಿದೆ ಎಂದು ಶಾಸಕರು ಹೇಳಿದರು.

ವೈದ್ಯರು ಜಿಮ್ಸ್‌, ಇಎಸ್‌ಐ ಆಸ್ಪತ್ರೆಗೆಂದು ಅಲೆದಾಡಬೇಕಾಗಿದ ಅನಿವಾರ್ಯತೆ ಸೃಷ್ಟಿಯಾಗಿದೆ. ಸಾಮಾನ್ಯ ಜನರು ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ. ಲಾಕ್‌ ಡೌನ್‌ನಲ್ಲಿ ಕೊರೊನಾ ಹೊರತಾಗಿ ಇತರ ರೋಗಿಗಳು ಸತ್ತವರೆಷ್ಟು ಎಂದು ಕೇಳಿದರೂ ಡಿಎಚ್‌ಒಗೆ ಮಾಹಿತಿ ಕೊಟ್ಟಿಲ್ಲ. ಇಎಸ್‌ಐ ಆಸ್ಪತ್ರೆ ಮಾತ್ರ ಕೊರೊನಾಗೆ ಬಳಕೆ ಮಾಡಬೇಕು. ಜಿಮ್ಸ್‌ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳಿಗೆ ಮೀಸಲಿಡಬೇಕೆಂದು ಸಲಹೆ ನೀಡಿದರು.

ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ. ಶರಣಪ್ಪ, ಶಾಸಕ ಎಂ.ವೈ. ಪಾಟೀಲ, ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ, ನೀಲಕಂಠ ಮೂಲಗೆ ಹಾಜರಿದ್ದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.