ಬೇರೆಡೆಯಿಂದ ಬಂದ್ರೆ ಕ್ವಾರಂಟೈನ್‌


Team Udayavani, Apr 17, 2020, 10:51 AM IST

17-April-02

ಕಲಬುರಗಿ: ಕೆಕೆಆರ್‌ಡಿಬಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ಜನಪ್ರತಿನಿಧಿ ಗಳು ಹಾಗೂ ಅ ಧಿಕಾರಿಗಳ ಸಭೆಯಲ್ಲಿ ಸಂಸದ ಡಾ| ಉಮೇಶ ಜಾಧವ ಮಾತನಾಡಿದರು

ಕಲಬುರಗಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್‌-19 (ಕೊರೊನಾ) ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗಡಿ ಭಾಗದ ಮಹಾರಾಷ್ಟ್ರ , ತೆಲಂಗಾಣ ಹಾಗೂ ಹೊರ ಜಿಲ್ಲೆಗಳಿಂದ ಬರುವ ಜನರನ್ನು ತಡೆಯಬೇಕು. ಒಂದು ವೇಳೆ ಕದ್ದುಮುಚ್ಚಿ ಒಳಗೆ ಬರುವಂತ ಜನರನ್ನು ಆಯಾ ತಾಲೂಕಿನ ಹಾಸ್ಟೆಲ್‌ಗ‌ಳಲ್ಲೇ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿ ಇಡಬೇಕೆಂದು ಸಂಸದ ಡಾ| ಉಮೇಶ ಜಾಧವ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ನಗರದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿ ಗಳು, ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಂಸದರ ಸಲಹೆಗೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಡಾ| ಪಿ. ರಾಜಾ, ಕ್ವಾರಂಟೈನ್‌ಗಾಗಿ ಈಗಾಗಲೇ ವಸತಿ ನಿಲಯಗಳನ್ನು ಗುರುತಿಸಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶರತ್‌ ಬಿ. ಮಾತನಾಡಿ, ಬೇರೆಡೆಯಿಂದ ಜಿಲ್ಲೆಗೆ ಜನ ಬರುವುದು ನಿಲ್ಲುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ ಎಂದರು. ಇದಕ್ಕೆ ಧ್ವನಿಗೂಡಿಸಿದ ಎಸ್‌ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಬೆಂಗಳೂರು ಸೇರಿದಂತೆ 500-600 ಕಿ.ಮೀ ದೂರದಿಂದ ಬರುತ್ತಾರೆ. ಒಂದು ವೇಳೆ ಜಿಲ್ಲೆಯ ಗಡಿಯಲ್ಲಿ ತಡೆದರೂ, ಹೊಲಗಳ ಮಧ್ಯೆ ಕಾಲುದಾರಿಗಳಲ್ಲಿ ಅವರವರ ಊರು ಸೇರಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಪ್ರಾದೇಶಿಕ ಆಯುಕ್ತ ಡಾ| ಎನ್‌.ವಿ. ಪ್ರಸಾದ್‌ ಮಾತನಾಡಿ, ಪೊಲೀಸರು, ಗ್ರಾಮ ಪಂಚಾಯಿತಿ ಅ ಧಿಕಾರಿಗಳು, ಆಶಾ ಕಾರ್ಯಕರ್ತೆಯರು ನಿತ್ಯ ಗ್ರಾಮಗಳಿಗೆ ಭೇಟಿ ನೀಡಿ, ಹೊಸದಾಗಿ ಬರುವವರ ಮಾಹಿತಿ ಪಡೆಯಬೇಕೆಂದು ಸೂಚಿಸಿದರು. ನಗರ ಪೊಲೀಸ್‌ ಅಯುಕ್ತ ಎನ್‌. ಸತೀಶಕುಮಾರ ಮಾತನಾಡಿ, ಆರೋಗ್ಯ ಮತ್ತಿತರ ಅನಿವಾರ್ಯ ಕಾರ್ಯಗಳ ನಿಮಿತ್ತ ಕೊರೊನಾ ಪಾಸ್‌ಗಳನ್ನು ಪಡೆದು ಬೇರೆ ರಾಜ್ಯ ಅಥವಾ ಜಿಲ್ಲೆಗಳಿಗೆ ಹೋದವರು ಅಲ್ಲಿಯೇ ಇರಬೇಕು. ಒಂದು ವೇಳೆ ವಾಪಸ್‌ ಬಂದಲ್ಲಿ ಅವರನ್ನು 14 ದಿನ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ ಎಂದರು.

ವೈದ್ಯರಿಗೂ ಕ್ವಾರಂಟೈನ್‌: ಇಎಸ್‌ಐ, ಜಿಮ್ಸ್‌ ಆಸ್ಪತ್ರೆಯಲ್ಲಿ ಕೊರೊನಾ ಐಸೋಲೇಷನ್‌ ವಾರ್ಡ್‌ಗಳಲ್ಲಿ ಸೇವೆ ಸಲ್ಲಿಸುವ ಕೆಲ ವೈದ್ಯರು, ಪ್ಯಾರಾಮೆಡಿಕಲ್‌ ಸಿಬ್ಬಂದಿ, ನರ್ಸ್‌ ಕರ್ತವ್ಯದ ಬಳಿಕ ಅವರವರ ಮನೆಗೆ ಹೋಗುತ್ತಿರುವ ಬಗ್ಗೆ ಮಾಹಿತಿ ಪಡೆದ ಸಂಸದರು, ವೈದ್ಯರು ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ವೈದ್ಯರು, ಸಿಬ್ಬಂದಿ ಕ್ವಾರಂಟೈನ್‌ಗಾಗಿ ಗ್ರ್ಯಾಂಡ್‌ ಹೋಟೆಲ್‌ ಕಾಯ್ದಿರಿಸಲಾಗಿದೆ ಎಂದರು. ಸಿಇಒ ಡಾ| ರಾಜಾ ಪಿ. ಮಾತನಾಡಿ, ಇಎಸ್‌ಐ ಆಸ್ಪತ್ರೆಯಲ್ಲಿ 40 ಕೊಠಡಿ ಗುರುತಿಸಲಾಗಿದೆ. ವೈದ್ಯಕೀಯ ಸಿಬ್ಬಂದಿಗೂ ಇಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇದೆ. ಯಾರೂ ಕ್ವಾರಂಟೈನ್‌ ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು. ಇದಕ್ಕೆ ಉತ್ತರಿಸಿದ ಸಂಸದ ಜಾಧವ, ಅವರವರ ಕುಟುಂಬದವರ ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಕ್ವಾರಂಟೈನ್‌ ಆಗಬೇಕು ಎಂದು ವೈದ್ಯಕೀಯ ಸಿಬ್ಬಂದಿಯಲ್ಲಿ ಮನವಿ ಮಾಡಿದರು. ಅಲ್ಲದೇ ಕೂಡಲೇ ಈ ಕುರಿತು ಕ್ರಮ ಕೈಗೊಳ್ಳುವಂತೆ ಡಿಎಚ್‌ಒ ಡಾ| ಜಬ್ಟಾರ್‌ಗೆ ಸೂಚಿಸಿದರು.

ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮುತ್ತಿಮಡು, ವಿಧಾನ ಪರಿಷತ್‌ ಸದಸ್ಯರಾದ ಬಿ.ಜಿ. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಇಎಸ್‌ಐ ಆಸ್ಪತ್ರೆ ಡೀನ್‌ ನಾಗರಾಜ, ಜಿಮ್ಸ್‌ ನಿರ್ದೇಶಕಿ ಡಾ| ಕವಿತಾ ಪಾಟೀಲ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.