ಪೊಲೀಸರೇ ಕಸರತ್ತು ಮಾಡಿ

ವೈದ್ಯಕೀಯ-ಶಿಕ್ಷಣಕ್ಕೆ 30 ಲಕ್ಷ ಪ್ರಸ್ತಾವನೆ ಕಲ್ಯಾಣ ನಿಧಿಯಲ್ಲಿ 30 ಲಕ್ಷ ಜಮೆ

Team Udayavani, Apr 3, 2019, 4:52 PM IST

3-April-22

ಕಲಬುರಗಿ: ಜಿಲ್ಲಾ ಸಶಸ್ತ್ರ ಪೊಲೀಸ್‌ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಡಿಎಆರ್‌ಎ ಆರ್‌ಎಸ್‌ಐ ಅಪ್ಸರ್‌ ಅಲಿ ಪೊಲೀಸ್‌ ಧ್ವಜ ಬಿಡುಗಡೆ ಮಾಡಿದರು. ಐಜಿಪಿ ಮನೀಷ ಖರ್ಬಿಕರ್‌, ಜಿ.ಪಂ. ಸಿಇಒ ಡಾ| ರಾಜಾ ಪಿ., ಎಸ್‌ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಹಾಗೂ ಇತರರಿದ್ದರು.

ಕಲಬುರಗಿ: ಸದಾ ಒತ್ತಡದಲ್ಲಿರುವ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಪ್ರತಿದಿನ ಬೆಳಗಿನ ಹೊತ್ತು ನಿಯಮಿತವಾಗಿ ಕನಿಷ್ಠ ಪಕ್ಷ 30 ನಿಮಿಷಗಳ ಕಾಲ ವಾಯುವಿಹಾರ ಅಥವಾ ಕಸರತ್ತು ಮಾಡುವ ರೂಢಿ ಬೆಳೆಸಿಕೊಂಡಲ್ಲಿ ಜೀವನ ಪರ್ಯಂತ ಆರೋಗ್ಯವಾಗಿರಬಹುದಾಗಿದೆ ಎಂದು ನಿವೃತ್ತ ಡಿ.ಎ.ಆರ್‌. ಎ.ಆರ್‌.ಎಸ್‌.ಐ. ಅಪ್ಸರ್‌ ಅಲಿ ಸಲಹೆ ನೀಡಿದರು.

ಜಿಲ್ಲಾ ಸಶಸ್ತ್ರ ಪೊಲೀಸ್‌ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪರೇಡ್‌ ವಂದನೆ ಸ್ವೀಕರಿಸಿದ ನಂತರ ಪೊಲೀಸ್‌ ಧ್ವಜ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಪೊಲೀಸ್‌ ಇಲಾಖೆಯ ಸುಮಾರು 10 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಲಾಗಿದೆ. ಕವಾಯತು ಪ್ರದರ್ಶನ ತುಂಬಾ ಆಕರ್ಷಕವಾಗಿದ್ದು, ಶಿಸ್ತಿನಿಂದ ಕೂಡಿತ್ತು ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಪೊಲೀಸ್‌ ಅಧೀಕ್ಷಕ ಯಡಾ ಮಾರ್ಟೀನ್‌ ಮಾರ್ಬನ್ಯಾಂಗ್‌ ಮಾತನಾಡಿ, ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸದ್ಯ ನಿವೃತ್ತ ಪೊಲೀಸ್‌ ಕಲ್ಯಾಣ ನಿಧಿಯಲ್ಲಿ ಒಟ್ಟು 6 ಲಕ್ಷ ರೂ.ಗಳು ಜಮೆಯಾಗಿದೆ ಎಂದರು.

ನಿವೃತ್ತ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ವತಿಯಿಂದ ವೈದ್ಯಕೀಯ ವೆಚ್ಚಕ್ಕಾಗಿ 20 ಸಾವಿರ ರೂ. ವಿನಿಯೋಗಿಸಲಾಗುತ್ತಿದೆ. 2016-17 ಮತ್ತು 2017-18ನೇ ಸಾಲಿನಲ್ಲಿ ನಿವೃತ್ತ ಪೊಲೀಸ್‌ ಕಲ್ಯಾಣ ನಿಧಿಯಡಿಯಲ್ಲಿ ವೈದ್ಯಕೀಯ ಮತ್ತು ಶಿಕ್ಷಣ ವೆಚ್ಚಕ್ಕಾಗಿ 30 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವಂತೆ ಪ್ರಧಾನ ಕಚೇರಿಯೊಂದಿಗೆ ವ್ಯವಹರಿಸಲಾಗಿದೆ ಎಂದರು.

ಇದೇ ವೇಳೆ ನಿವೃತ್ತ ಪೊಲೀಸ್‌ ಸಿಬ್ಬಂದಿಗಳಾದ ಪಿ.ಐ. ನಾರಾಯಣಪ್ಪ, ಎಸ್‌. ಆರ್‌.ಎಸ್‌.ಐ. ಚಂದಪ್ಪ, ಎಚ್‌.ಸಿ. ಗಳಾದ ಪರುತಪ್ಪಾ, ವೀರಭದ್ರಪ್ಪ, ಮಹ್ಮದ್‌ ಅಬ್ದುಲ್‌ ಸತ್ತಾರ ಅವರನ್ನು ಸನ್ಮಾನಿಸಲಾಯಿತು. ಕಲಬುರಗಿ ಈಶಾನ್ಯ ವಲಯ ಪೊಲೀಸ್‌ ಮಹಾ ನಿರೀಕ್ಷಕ ಮನೀಷ ಖರ್ಬಿಕರ್‌, ಜಿಪಂ ಸಿಇಒ ಡಾ| ರಾಜಾ ಪಿ., ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್‌, ಐಎಎಸ್‌ ಪ್ರೊಬೇಷನರಿ ಅಧಿ ಕಾರಿ ಸ್ನೇಹಲ್‌ ಸುಧಾಕರ ಲೋಖಂಡೆ, ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ, ನಿವೃತ್ತ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲೆಯ ನಿವೃತ್ತ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳ ಕಲ್ಯಾಣ ಚಟುವಟಿಕೆಗಳಿಗಾಗಿ ಈಗಾಗಲೇ ನಿವೇಶನ ಮಂಜೂರಾತಿ ಮಾಡಲಾಗಿದೆ. ಜಿಲ್ಲೆಯ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೂ ಕ್ಯಾಂಟೀನ್‌ ಸೌಲಭ್ಯ ನೀಡಲಾಗಿದ್ದು, ಈಗಾಗಲೇ 263 ಪೊಲೀಸ್‌
ಕ್ಯಾಂಟೀನ್‌ ಕಾರ್ಡುಗಳನ್ನು ಒದಗಿಸಲಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿ ಕ್ಷೇಮಾಭಿವೃದ್ಧಿ ದೃಷ್ಟಿಕೋನದಿಂದ ಪೊಲೀಸ್‌ ಕ್ಯಾಂಟೀನ್‌, ಹಿಟ್ಟಿನ ಗಿರಣಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸೋಲಾರ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಸ್ಥಾನದಲ್ಲಿ ನೂತನವಾಗಿ 120 ವಸತಿ ಗೃಹಗಳನ್ನು ನಿರ್ಮಾಣ ಮಾಡಿ ಸಿಬ್ಬಂದಿಗಳಿಗೆ ಹಂಚಿಕೆ ಮಾಡಲಾಗಿದೆ. ಬೃಹತ್‌ ಪ್ರಮಾಣದ ಉದ್ಯಾನವನ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ ಮಕ್ಕಳ ಪಾರ್ಕ್‌, ವಾಕಿಂಗ್‌ ಟ್ರ್ಯಾಕ್ , ಅಕ್ಯೂಫ್ರೇಶರ್‌ ಪಾಥ್‌ವೇ, ಅತ್ಯಾಧುನಿಕ ವ್ಯಾಯಾಮ ಶಾಲೆ ನಿರ್ಮಿಸಲಾಗಿದೆ.
. ಯಡಾ ಮಾರ್ಟೀನ್‌
ಮಾರ್ಬನ್ಯಾಂಗ್‌,
ಜಿಲ್ಲಾ ಪೊಲೀಸ್‌ ಅಧೀಕ್ಷಕ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.