ಶಾರ್ಟ್ ಸರ್ಕಿಟ್‌: ಕಲಬುರಗಿ ಮಹಾನಗರ ಪಾಲಿಕೆ ಹಳೆ ಕಚೇರಿಗೆ ಬೆಂಕಿ, ಮಹತ್ವದ ದಾಖಲೆಗಳು ಭಸ್ಮ


Team Udayavani, Apr 1, 2023, 10:32 PM IST

ಶಾರ್ಟ್ ಸರ್ಕಿಟ್‌: ಕಲಬುರಗಿ ಮಹಾನಗರ ಪಾಲಿಕೆ ಹಳೆ ಕಚೇರಿಗೆ ಬೆಂಕಿ, ಮಹತ್ವದ ದಾಖಲೆಗಳು ಭಸ್ಮ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ ಹಳೆ ಕಟ್ಟಡಕ್ಕೆ ಶಾರ್ಟ್ ಸರ್ಕಿಟ್‌ನಿಂದ ಶನಿವಾರ ಬೆಂಕಿ ಬಿದ್ದಿದ್ದು, ಲೆಕ್ಕಪತ್ರ ಶಾಖೆಯಲ್ಲಿದ್ದ ಮಹತ್ವದ ದಾಖಲೆಗಳು ಭಸ್ಮವಾಗಿವೆ ಎಂದು ಗೊತ್ತಾಗಿದೆ.

ಹಳೆ ಕಟ್ಟಡದ ಮೊದಲ ಮಹಡಿಯನ್ನು ಕೆಲ ವರ್ಷಗಳಿಂದ ಬಳಸುತ್ತಿರಲಿಲ್ಲ. ಅಲ್ಲಿ ಲೆಕ್ಕಪತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇರಿಸಲಾಗಿತ್ತು. ಈ ಕಟ್ಟಡವನ್ನು ವಿಧಾನಸಭೆ ಚುನಾವಣೆ ಪ್ರಯುಕ್ತ ಕಲಬುರಗಿ ದಕ್ಷಿಣ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೊಠಡಿಗೆ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಬೆಂಕಿ ಹೊತ್ತಿಕೊಂಡಿದ್ದರಿಂದ ಕೊಠಡಿಯಲ್ಲಿದ್ದ ಪೀಠೋಪಕರಣಗಳು, ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತ್ರ ಬರೆದಿದ್ದ ಅಧಿಕಾರಿ: ಚುನಾವಣಾಧಿಕಾರಿಗಳ ಕಚೇರಿ ಇಲ್ಲಿ ಆರಂಭಿಸುವ ಬಗ್ಗೆ ಪ್ರಸ್ತಾವ ಬಂದಾಗ ಈ ಕಟ್ಟಡ ಹಳೆಯದಾಗಿದೆ. ಬಳಕೆಗೆ ಯೋಗ್ಯವಿಲ್ಲ ಎಂದು ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಪತ್ರ ಬರೆದಿದ್ದರು. ಅದನ್ನು ಮೀರಿಯೂ ಇಲ್ಲಿ ಚುನಾವಣಾಧಿಕಾರಿಗಳ ಕಚೇರಿ ಆರಂಭಿಸಲು ಜಿಲ್ಲಾಡಳಿತ ಮುಂದಾಗಿತ್ತು. ಅಷ್ಟರಲ್ಲಿ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸಿದರು.
ಮಹಾನಗರ ಪಾಲಿಕೆಯ ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಹಳೆಯ ಕಟ್ಟಡದಲ್ಲಿದ್ದ ಬಹುತೇಕ ಕಚೇರಿಗಳನ್ನು ಸ್ಥಳಾಂತರಿಸಲಾಗಿದೆ. ಅಲ್ಲದೇ, ಹಳೆ ಕಟ್ಟಡ 30 ವರ್ಷಕ್ಕೂ ಹಳೆಯದಾಗಿದ್ದರಿಂದ ಇದನ್ನು ಉಪಯೋಗಿಸುತ್ತಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಮೂಡಲಗಿ: ಸಪ್ತಪದಿ ತುಳಿದ ಹತ್ತೆ ದಿನದಲ್ಲಿ ನವ ದಂಪತಿ ಅಪಘಾತದಲ್ಲಿ ಮೃತ್ಯು

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1fasdsads

Sakleshpura; ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ARUN SINGH

BJP: ವಿಪಕ್ಷ ನಾಯಕನ ಆಯ್ಕೆ- ನಾಳೆ ಅರುಣ್‌ ಸಿಂಗ್‌ ಆಗಮನ

HDK HDD

ಸೋಲು ಶಾಶ್ವತ ಅಲ್ಲ- ಮರಳಿ ಪಕ್ಷ ಕಟ್ಟೋಣ: ಆತ್ಮಾವಲೋಕನ ಸಭೆಯಲ್ಲಿ HDD, HDK ಕರೆ

cow

Karnataka: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌- ಮುಂದುವರಿದ ಗೊಂದಲ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ