ಸಂಡೇ ಲಾಕ್‌ಡೌನ್‌ಗೆ ಕಲಬುರಗಿ ಸ್ತಬ್ಧ

ಬೇಕಾಬಿಟ್ಟಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ |ಬಸ್‌-ಆಟೋಗಳಿಲ್ಲದೇ ಬಿಕೋ ಎನ್ನುತ್ತಿದ್ದ ರಸ್ತೆಗಳು

Team Udayavani, May 25, 2020, 10:39 AM IST

25-May-1

ಕಲಬುರಗಿ: ನಗರದ ಜಗತ್‌ ವೃತ್ತದಲ್ಲಿ "ಸಂಡೇ ಲಾಕ್‌ಡೌನ್‌'ಗೆಂದು ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದರು.

ಕಲಬುರಗಿ: ಕೋವಿಡ್ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಜಾರಿಗೆ ತರಲಾಗಿದ್ದ “ಸಂಡೇ ಲಾಕ್‌ಡೌನ್‌’ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಯಿತು. ಬಸ್‌, ಆಟೋ ಸಂಚಾರ ರದ್ದಾಗಿದ್ದಲ್ಲದೇ ಜನ ಸಂಚಾರ ವಿರಾಳವಾಗಿದ್ದರಿಂದ ಬಿಸಿಲೂರು ಕಲಬುರಗಿ ಸ್ತಬ್ಧಗೊಂಡಿತ್ತು.

ಲಾಕ್‌ಡೌನ್‌ ಕೊಂಚ ಸಡಿಲಿಕೆ ನಂತರ ಜನ, ವಾಹನ ಸಂಚಾರ ಹೆಚ್ಚಾಗಿತ್ತು. ಮಾರ್ಕೆಟ್‌ನಲ್ಲಿ ಭರ್ಜರಿ ವ್ಯಾಪಾರವೂ ನಡೆದಿತ್ತು. ರವಿವಾರ ಸಂಪೂರ್ಣ ಲಾಕ್‌ಡೌನ್‌ ಗೆ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶನಿವಾರ ಸಂಜೆಯಿಂದಲೇ ಲಾಕ್‌ಡೌನ್‌ ಜಾರಿಗೊಂಡಿದ್ದರಿಂದ ಬಹುತೇಕರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ-ಮುಂಗಟ್ಟು ಮುಚ್ಚಿದ್ದರು. ಸಾರಿಗೆ ಬಸ್‌ ಹಾಗೂ ಆಟೋಗಳು ರಸ್ತೆಗಿಳಿಯದ ಕಾರಣ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸೂಪರ್‌ ಮಾರ್ಕೆಟ್‌ ಪ್ರದೇಶ, ಜಗತ್‌ ವೃತ್ತ, ಸರ್ದಾರ ವಲ್ಲಭಬಾಯಿ ಪಟೇಲ್‌ ವೃತ್ತ, ರಾಷ್ಟ್ರಪತಿ ವೃತ್ತ, ಲಾಲ್‌ಗೇರಿ ಕ್ರಾಸ್‌, ಖರ್ಗೆ ಪೆಟ್ರೋಲ್‌ ಬಂಕ್‌ ವೃತ್ತ, ರಾಮ ಮಂದಿರ ವೃತ್ತ ಸೇರಿ ಬಹುತೇಕ ವೃತ್ತಗಳಲ್ಲಿ ಜನತೆ ಕಂಡುಬರಲಿಲ್ಲ. ಬೈಕ್‌ ಗಳಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಮನೆಗೆ ಕಳುಹಿಸಿದರು.

ಹಾಲು ಮಾರಾಟ, ಕಿರಾಣಾ ಅಂಗಡಿ, ತರಕಾರಿ, ಹಣ್ಣು ಮಾರಾಟಕ್ಕೆ ಯಾವುದೇ ಅಡ್ಡಿ ಇರಲಿಲ್ಲ. ಆದರೆ, ಮಧ್ಯಾಹ್ನದ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆ ತರಕಾರಿ, ಹಣ್ಣು ಮಾರಾಟಗಾರರೂ ವ್ಯಾಪಾರ ನಿಲ್ಲಿಸಿ ಮನೆಗಳಿಗೆ ತೆರಳಿದರು. ಕೆಲವೆಡೆ ಮೆಡಿಕಲ್‌ ಶಾಪ್‌ ಗಳು ಮಾತ್ರವೇ ತೆರೆದಿದ್ದವು. ಇನ್ನೊಂದೆಡೆ ಬಿಸಿಲಿಗೆ ಅಂಜಿ ಬಹುತೇಕ ಜನತೆ ಮನೆಗಳನ್ನು ಬಿಟ್ಟು ಹೊರಗಡೆ ಬರಲೇ ಇಲ್ಲ. ವಾರದ ಆರು ದಿನ ನಿತ್ಯ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ವೈನ್‌ಶಾಪ್‌, ಎಂಎಸ್‌ ಐಎಲ್‌ ಮಳಿಗೆ ವ್ಯಾಪಾರಕ್ಕೆ ಅನುಮತಿ ನೀಡಲಾಗಿತ್ತು. ಆದರೆ ರವಿವಾರ ಸಂಪೂರ್ಣ ಬಂದ್‌ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೂ ಬ್ರೇಕ್‌ ಹಾಕಿದ್ದರಿಂದ ಮದ್ಯದಂಗಡಿಗಳು ಬಾಗಿಲು ಹಾಕಿದ್ದವು. ಪೊಲೀಸ್‌ ಆಯುಕ್ತ ಎನ್‌. ಸತೀಶಕುಮಾರ ಮಾರ್ಗದರ್ಶನದಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು. ಡಿಸಿಪಿ ಡಿ. ಕಿಶೋರಬಾಬು, ಎಸಿಪಿ ವಿಜಯಕುಮಾರ, ಎಸ್‌.ಎಚ್‌. ಸುಬೇದಾರ, ವಿರೇಶ ಕರಡಿಗುಡ್ಡ, ಇನ್‌ ಸ್ಪೆಕ್ಟರ್‌ಗಳಾದ ಪಂಡಿತ ಸಗರ, ಎಲ್‌.ಎಚ್‌. ಗೌಂಡಿ, ಅರುಣಕುಮಾರ, ಸೋಮಲಿಂಗ ಕಿರದಳ್ಳಿ, ಸಂಗಮನಾಥ ಹಿರೇಮಠ ಹಾಗೂ ಹೋಂಗಾರ್ಡ್‌ಗಳು ಬಂದೋಬಸ್ತ್ ಏರ್ಪಡಿಸಿದ್ದರು.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.