KEA Exam Scam: ಆರ್.ಡಿ. ಪಾಟೀಲ್ ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನಿಬ್ಬರ ಬಂಧನ
ಅಪಾರ್ಟ್ ಮೆಂಟ್ ಮಾಲಿಕ, ಮ್ಯಾನೇಜರ್ ವಶಕ್ಕೆ ತಗೊಂಡು ವಿಚಾರಣೆ
Team Udayavani, Nov 10, 2023, 9:46 AM IST
ಕಲಬುರಗಿ: ಆರ್ ಡಿ ಪಾಟೀಲ್ ಗೆ ಕಲಬುರಗಿಯಲ್ಲಿ ಬಾಡಿಗೆಗೆ ಫ್ಲ್ಯಾಟ್ ನೀಡಿರುವ ಕಾರಣಕ್ಕೆ ಮಾಲೀಕ ಮತ್ತು ಮ್ಯಾನೇಜರ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್.ಡಿ.ಪಾಟೀಲ್ ಕಲ್ಬುರ್ಗಿಯ ವರದಾ ಲೇಔಟ್ ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್ ನಲ್ಲಿ ಕಳೆದ ನ.6 ರಂದು ಪರಾರಿಯಾಗಿದ್ದ. ಅದಕ್ಕೂ ಮುನ್ನ ಆತ ಅಲ್ಲಿ ಬಂದು ತಂಗಿದ್ದ.
ಆತನಿಗೆ ಫ್ಲ್ಯಾಟ್ ಬಾಡಿಗೆ ನೀಡುವ ಮುನ್ನ ಸರಿಯಾಗಿ ತಿಳಿಯಬೇಕಿತ್ತು. ಆತ ಪೊಲೀಸರಿಗೆ ಬೇಕಾಗಿರುವ ಪ್ರಮುಖ ಆರೋಪಿಯಾಗಿದ್ದಾನೆ. ಅವನಿಗೆ ನೀವು ಆಶ್ರಯ ನೀಡಿದ್ದಿರಿ ಎನ್ನುವ ಕಾರಣದಿಂದಾಗಿ ಶಹಾಪೂರದ ಶಂಕರ್ ಗೌಡ ಯಾಳವಾರ್, ಆರ್ ಡಿ ಪಾಟೀಲ್ ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಬಂಧನಕ್ಕೊಳಗಾಗಿದ್ದಾರೆ.
ಅದೇ ರೀತಿ ಅಪಾರ್ಟ್ ಮೆಂಟ್ ನ ವ್ಯವಸ್ಥಾಪಕ ದಿಲೀಪ್ ಪವಾರ್ ಸಹ ಅರೆಸ್ಟ್ ಮಾಡಲಾಗಿದೆ.
ಆರ್ ಡಿ ಪಾಟೀಲ್ ನಿಂದ ಹತ್ತು ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದರು ಎಂದು ಗೊತ್ತಾಗಿದೆ.
ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್ ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾಗ ಆತ, ಇದೇ ಅಪಾರ್ಟ್ ಮೆಂಟ್ ನಲ್ಲೆ ಇದ್ದ. ನವೆಂಬರ್ 5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟ್ ಮೆಂಟ್ ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ.
ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದ. ಇದೆಲ್ಲವೂ ಪಕ್ಕದ ಕಟ್ಟಡದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ