ಶಾಂತಿಯುತ ಸಮಾಜಕ್ಕೆ ಕಾನೂನು ಅರಿಯಿರಿ


Team Udayavani, Nov 29, 2021, 12:13 PM IST

7law

ಜೇವರ್ಗಿ: ದೇಶದಲ್ಲಿರುವ ಪ್ರತಿಯೊಬ್ಬ ನಾಗರಿಕರೂ ತಮ್ಮ ಹಕ್ಕು, ಕರ್ತವ್ಯ, ದೈನಂದಿನ ಸುಗಮ ಬದುಕಿಗೆ ಬೇಕಾದ ಕನಿಷ್ಟ ಕಾನೂನಿನ ಜ್ಞಾನ ಹೊಂದಿರಬೇಕು. ಇದರಿಂದ ಅಪರಾಧಗಳ ಸಂಖ್ಯೆ ಕಡಿಮೆಯಾಗಿ, ಶಾಂತಿಯುತ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಪಿಎಸ್‌ಐ ಸಂಗಮೇಶ ಅಂಗಡಿ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ ಎಸ್‌ ಘಟಕದ ಸಹಯೋಗದೊಂದಿಗೆ ಶನಿವಾರ ಏರ್ಪಡಿಸಲಾಗಿದ್ದ “ಕಾನೂನು ಅರಿವು ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ರಚನೆಯಾಗಿರುವುದು ಒಳ್ಳೆಯ ವ್ಯಕ್ತಿಗಳು ಹಾಗೂ ದೇಶದ ರಕ್ಷಣೆಗಾಗಿ. ಇದರ ಉಲ್ಲಂಘನೆ ಸಲ್ಲದು. ಬಾಲ್ಯವಿವಾಹ ಅಪರಾಧವಾಗಿದ್ದು, ಇದರಿಂದ ಮಗು ಶಿಕ್ಷಣದಿಂದ ವಂಚಿತವಾಗಿ, ಜೀವನದಲ್ಲಿ ತೊಂದರೆಗೆ ಒಳಗಾಗಬೇಕಾಗುತ್ತದೆ. ಬಾಲ್ಯ ದೌರ್ಜನ್ಯ ಸಲ್ಲದು. ವರದಕ್ಷಿಣೆ ಪಡೆಯಬಾರದು. ಬಾಲ ಕಾರ್ಮಿಕ ಪದ್ದತಿ ಕಾನೂನಿಗೆ ವಿರೋಧ ಎಂದರು.

ವಿದ್ಯಾರ್ಥಿ ದೆಸೆಯಿಂದಲೇ ಪ್ರೀತಿ-ಪ್ರೇಮ ಎನ್ನುವ ಭ್ರಮಾಲೋಕದಲ್ಲಿ ಮುಳುಗಿ ಜೀವನ ಹಾಳುಮಾಡಿಕೊಳ್ಳಬೇಡಿ. ಸಂಚಾರಿ ನಿಯಮ ಪಾಲಿಸಬೇಕು. ನಿರಂತರವಾಗಿ ಅಧ್ಯಯನ ಮಾಡುವ ಮೂಲಕ ಉನ್ನತ ಸಾಧನೆ ಮಾಡಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಚಾರ್ಯ ಮೊಹ್ಮದ್‌ ಅಲ್ಲಾಉದ್ದೀನ್‌ ಸಾಗರ ಮಾತನಾಡಿ, ಕಾನೂನಿನ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಆದ್ದರಿಂದಲೇ ವಿದ್ಯಾರ್ಥಿ ದೆಸೆಯಿಂದಲೇ ಸಾಮಾನ್ಯ ಕಾನೂನಿನ ಬಗ್ಗೆ ಜ್ಞಾನ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ನಿಮ್ಮ ಭವಿಷ್ಯದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಾರ್ವಜನಕಿ ಆಸ್ತಿ-ಪಾಸ್ತಿ ರಕ್ಷಣೆ ಮಾಡುವ ಮೂಲಕ ಆದರ್ಶ ವಿದ್ಯಾರ್ಥಿಗಳಾಗಬೇಕು ಎಂದು ಸಲಹೆ ನೀಡಿದರು.

ಉಪನ್ಯಾಸಕ ರವೀಂದ್ರಕುಮಾರ ಬಟಗೇರಿ ಸ್ವಾಗತಿಸಿದರು. ಎನ್‌ಎಸ್‌ಎಸ್‌ ಅಧಿಕಾರಿ ಎಚ್‌.ಬಿ.ಪಾಟೀಲ ನಿರೂಪಿಸಿ, ವಂದಿಸಿದರು. ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್‌, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್‌, ಮಂಜುನಾಥ ಎ.ಎಂ., ಪ್ರಕಾಶ ಪಾಟೀಲ, ಪ್ರಥಮ ದರ್ಜೆ ಸಹಾಯಕ ನೇಸರ ಬೀಳಗಿ, ಅತಿಥಿ ಉಪನ್ಯಾಸಕರಾದ ಬಸವರಾಜ ಎಸ್‌.ಪುರಾಣೆ, ವಿಜಯಲಕ್ಷ್ಮೀ, ವಿದ್ಯಾರ್ಥಿ ಪ್ರತಿನಿಧಿಗಳಾದ ಕರೀಮ್‌, ಬಸವರಾಜ, ಹುಲೆಪ್ಪ, ಐಶ್ವರ್ಯ, ಪಾರ್ವತಿ, ಶಿವಲೀಲಾ ಹಾಗೂ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.