ಕಾಲೇಜುಗಳಲ್ಲಿ ಮೂಲ ಸೌಕರ್ಯ ಕೊರತೆ
Team Udayavani, Nov 16, 2021, 11:56 AM IST
ಕಾಳಗಿ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲ ಸೌಕರ್ಯದ ಕೊರತೆಯಿರುವುದರಿಂದ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪರದಾಡುವಂತಾಗಿದೆ.
ಬರೋಬ್ಬರಿ ಹತ್ತು ಕೋಟಿ ರೂ. ಖರ್ಚು ಮಾಡಿ ಇಲ್ಲಿನ ಭರತನೂರ ರಸ್ತೆಯಲ್ಲಿ ಸರ್ಕಾರ ಪಾಲಿಟೆಕ್ನಿಕ್ ಕಾಲೇಜು ನಿರ್ಮಿಸಿ, ಕಳೆದ ಒಂದು ತಿಂಗಳ ಹಿಂದೆ ಉದ್ಘಾಟಿಸಿದೆ. ಆದರೆ, ಈ ಕಾಲೇಜಿಗೆ ಹೋಗಲು ಸೂಕ್ತ ರಸ್ತೆಯೇ ಇಲ್ಲ. ವಿದ್ಯಾರ್ಥಿಗಳು, ಸಿಬ್ಬಂದಿಗೆ ಕುಡಿಯಲು ಹಾಗೂ ಶೌಚಾಲಯಕ್ಕೆ ಬಳಸಲು ನೀರೇ ಇಲ್ಲ. ಅಭ್ಯಾಸಕ್ಕೆ ಬೇಕಾಗುವ ಪ್ರಾಯೋಗಿಕ ಸಾಮಗ್ರಿಗಳೂ ಇಲ್ಲ. ಬೃಹತ್ ಕಟ್ಟಡಕ್ಕೆ ರಕ್ಷಣೆ ನೀಡಲು ಸುತ್ತು ಗೋಡೆಯೇ ಇಲ್ಲ. ಹೀಗಾಗಿ ಇಲ್ಲಿನ 86 ಬೋಧಕ-ಬೋಧಕೇತರ ಸಿಬ್ಬಂದಿ, 350 ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಅನೇಕ ಸಮಸ್ಯೆಗಳಿವೆ. ಕಾಲೇಜಿನಲ್ಲಿ ಶೌಚಾಲಯವಿದ್ದರೂ ಸೆಪ್ಟಿಕ್ ಟ್ಯಾಂಕ್ ಇಲ್ಲ. ಆದ್ದರಿಂದ ಈ ಶೌಚಾಲಯ ನಿರುಪಯುಕ್ತವಾಗಿದೆ. ನೀರು ಸಹ ಅವಶ್ಯಕತೆಗೆ ಬೇಕಾದಷ್ಟು ದೊರಕುತ್ತಿಲ್ಲ. ಅಲ್ಲದೇ ಶೌಚಾಲಯದ ಕಿಟಕಿ, ಬಾಗಿಲುಗಳನ್ನು ಕಿಡಿಗೇಡಿಗಳು ಹಾಳು ಮಾಡಿದ್ದು, ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳನ್ನು ಬಿಸಾಕುತ್ತಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಜಿ.ಎಸ್. ಮಾಲಿ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಚಂದ್ರಶೇಖರ ಪಾಟೀಲ ಅಭಿಮಾನಿಗಳಿಂದ ಕಾಶೀಯಾತ್ರೆ
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ಉದ್ಘಾಟನೆ ವೇಳೆ ಆಗಮಿಸಿದ ಶಾಸಕರು, ಸಂಸದರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಪ್ರತಿದಿನ ನೀರು ಖರೀದಿಸಿ ಕುಡಿಯುತ್ತಿದ್ದೇವೆ. –ಮಹೇಶ ಹಿರೇಮಠ, ವಿದ್ಯಾರ್ಥಿ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು
-ಭೀಮರಾಯ ಕುಡ್ಡಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ