ಸುಲೇಪೇಟ ಆಸ್ಪತ್ರೆಗೆ ಸಿಬ್ಬಂದಿ ಕೊರತೆ
Team Udayavani, May 3, 2022, 12:52 PM IST
ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವೆಂದು ಮೇಲ್ದರ್ಜೆಗೇರಿಸಿ ಆರು ತಿಂಗಳಾದರೂ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರಗೆ ಮನವಿ ಪತ್ರ ಸಲ್ಲಿಸಿದರು.
ಸುಲೇಪೇಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯಾವುದೇ ರೀತಿಯ ವೈದ್ಯಕೀಯ ಉಪಕರಣಗಳು ಲಭ್ಯವಿಲ್ಲ. ವೈದ್ಯರ ಹುದ್ದೆ, ನರ್ಸ್ ಹಾಗೂ ಇನ್ನಿತರ ಹುದ್ದೆಗಳು ಖಾಲಿ ಇವೆ. ಆರೋಗ್ಯ ಸೇವೆ ಸರಿಯಾಗಿ ದೊರಕುತ್ತಿಲ್ಲ. ತುರ್ತು ಪರಿಸ್ಥಿತಿ, ಸಣ್ಣಪುಟ್ಟ ಚಿಕಿತ್ಸೆಗೂ ವೈದ್ಯರು ಲಭ್ಯವಿರುವುದಿಲ್ಲ. ಇದರಿಂದ ರೋಗಿಗಳು ಪರದಾಡುವಂತೆ ಆಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆಸ್ಪತ್ರೆಯಲ್ಲಿ ಎಕ್ಸರೇ, ಇಸಿಜಿ, ರಕ್ತ ನಿಧಿ ಕೇಂದ್ರವಿಲ್ಲ. ಗ್ರಾಮೀಣ ಪ್ರದೇಶದಿಂದ ಹೆರಿಗೆಗಾಗಿ ಬರುವ ಮಹಿಳೆಯರು ತೊಂದರೆ ಪಡುವಂತಾಗಿದೆ. ಸುಲೇಪೇಟ ಗ್ರಾಮ ಹೋಬಳಿ ಕೇಂದ್ರವಾಗಿದ್ದು, ಸುತ್ತಲೂ 35 ಹಳ್ಳಿಗಳನ್ನು ಹೊಂದಿದೆ. ದೂರದ ಗ್ರಾಮಗಳಿಂದ ಚಿಕಿತ್ಸೆಗಾಗಿ ಬರುವ ಜನರಿಗೆ ಆರೋಗ್ಯ ಸೇವೆಗಳು ಮರೀಚಿಕೆಯಾಗಿವೆ. ಕೂಡಲೇ ಸರ್ಕಾರ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಸಚಿನ್ ಚವ್ಹಾಣ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ