ಬತ್ತುತ್ತಿದೆ ಬ್ಯಾರೇಜ್‌-ಬೆಳೆಗೆ ನೀರಿನ ಕೊರತೆ


Team Udayavani, Feb 1, 2022, 12:33 PM IST

10water

ಚಿಂಚೋಳಿ: ತಾಲೂಕಿನ ಮುಲ್ಲಾಮಾರಿ ನದಿಗೆ ನಿರ್ಮಿಸಲಾಗಿರುವ ಬ್ಯಾರೇಜ್‌ಗಳಿಗೆ ಇನ್ನುವರೆಗೆ ಗೇಟ್‌ ಅಳವಡಿಸದೇ ಇರುವುದರಿಂದ ನೀರು ವ್ಯರ್ಥವಾಗಿ ಹರಿದು ರೈತರ ಬೆಳೆಗಳಿಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ಮುಲ್ಲಾಮಾರಿ ನದಿಯ ಅಕ್ಕಪಕ್ಕ ರೈತರು ದೂರಿದ್ದಾರೆ.

ತಾಲೂಕಿನ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಕೊಟಗಾ, ಕನಕಪೂರ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಿಂಚೋಳಿ, ಪೋಲಕಪಳ್ಳಿ, ಗರಗಪಳ್ಳಿ, ಜಟ್ಟೂರ ಗ್ರಾಮಗಳ ಹತ್ತಿರ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ.

ಎಲ್ಲ ಬ್ಯಾರೇಜ್‌ಗಳಿಗೆ ಜಲ ಸಂಪನ್ಮೂಲ ಇಲಾಖೆಯಿಂದ ನವೆಂಬರ್‌ ತಿಂಗಳಲ್ಲಿಯೇ ಗೇಟ್‌ ಅಳವಡಿಸಿ ನೀರಿನ ಸಂಗ್ರಹಣೆ ಮಾಡುವ ಕಾರ್ಯ ನಡೆಯಬೇಕಾಗಿತ್ತು. ಆದರೆ ಇಲಾಖೆ ಅಧಿಕಾರಿಗಳ ಬೇಜಾವಾಬ್ದಾರಿಯಿಂದ ಎಲ್ಲ ಬ್ಯಾರೇಜ್‌ಗಳಿಗೆ ಗೇಟ್‌ಗಳು ಅಳವಡಿಸದೇ ಇರುವುದರಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.

ಮುಲ್ಲಾಮಾರಿ ನದಿಗೆ ನಿರ್ಮಿಸಿದ ಬ್ಯಾರೇಜ್‌ಗಳಲ್ಲಿನ ನೀರಿನ ಸಂಗ್ರಹಣೆ ಆಧಾರ ಮೇಲೆ ನದಿ ದಡದ ರೈತರು ತಮ್ಮ ಹೊಲಗಳಲ್ಲಿ ಹೆಚ್ಚಾಗಿ ತರಕಾರಿ, ಕಲ್ಲಂಗಡಿ, ದ್ರಾಕ್ಷಿ, ಕಬ್ಬು, ಬಾಳೆ, ನೀರಾವರಿ ಬೆಳೆಗಳು ಬೆಳೆಯುತ್ತಾರೆ. ಆದರೆ ನದಿಯಲ್ಲಿ ನೀರಿನ ಸಂಗ್ರಹಣೆ ಕಡಿಮೆ ಇರುವುದರಿಂದ ಬೆಳೆಗಳಿಗೆ ಸಮರ್ಪಕವಾಗಿ ನೀರು ಹರಿಸಲು ಆಗುತ್ತಿಲ್ಲ ಎಂಬುದು ರೈತರ ಕೊರಗು.

ಮುಲ್ಲಾಮಾರಿ ನದಿಯಲ್ಲಿ ರಾಜಾರೋಷವಾಗಿ ಟ್ರ್ಯಾಕ್ಟರ್‌, ಲಾರಿ, ಟಂಟಂ, ವಾಹನಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುವ ಮರಳುಗಳ್ಳರ ಹಾವಳಿ ಹೆಚ್ಚಾಗಿದೆ. ಕೊಟಗಾ, ಅಡಕಿಮೊಕ ತಾಂಡಾ, ಚಿಮ್ಮನಚೋಡ, ಕನಕಪೂರ, ತಾಜಲಾಪೂರ, ಮರಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ, ದೇಗಲಮಡಿ, ಚಿಂಚೋಳಿ, ಪೋಲಕಪಳ್ಳಿ, ಭಗರಗಪಳ್ಳಿ-ಭಕ್ತಂಪಳ್ಳಿ, ಹಲಕೊಡಾ, ಪೋತಂಗಲ, ಜಟ್ಟೂರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಟ ಹೆಚ್ಚಾಗಿರುವುದರಿಂದ ನದಿ ನೀರು ಬತ್ತಿ ಹೋಗುತ್ತಿದೆ.

ಬೇಸಿಗೆ ದಿನಗಳಲ್ಲಿ ದನಕರುಗಳಿಗೆ ಕುಡಿಯುವ ನೀರು ಸಂಗ್ರಹಣೆ ಅತಿ ಅವಶ್ಯವಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಗರಗಪಳ್ಳಿ ಬ್ಯಾರೇಜ್‌ಗೆ ಗೇಟ್‌ ಅಳವಡಿಸಬೇಕು ಎಂದು ಮುಲ್ಲಾಮಾದಿ ನದಿ ದಂಡೆಯ ರೈತರು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.