ಕಲಬುರಗಿ-ಹೈದ್ರಾಬಾದ್‌ ವಿಮಾನ ಶುರು


Team Udayavani, Apr 19, 2022, 9:45 AM IST

2flight

ಕಲಬುರಗಿ: ಈಗಾಗಲೇ ಬೆಂಗಳೂರು ಅಲ್ಲದೇ ದೆಹಲಿ, ತಿರುಪತಿ ಸೇರಿದಂತೆ ವಿವಿಧ ಮಹಾನಗರಗಳಿಗೆ ಇಲ್ಲಿನ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ ಶುರುವಾಗಿದ್ದು, ಇದಕ್ಕೆ ಈಗ ಹೈದ್ರಾಬಾದ್‌ ಸೇರ್ಪಡೆಯಾಗಿದೆ. ಕಲಬುರಗಿ ಜಿಲ್ಲೆಯ ಜನ ಅನೇಕ ವಸ್ತುಗಳ ಖರೀದಿಗೆ ಹೈದ್ರಾಬಾದ್‌ನ್ನು ನೆಚ್ಚಿಕೊಂಡಿದ್ದಾರೆ. ಹೀಗಾಗಿ ಸೋಮವಾರ ಶುರುವಾಗಿರುವ ಕಲಬುರಗಿ -ಹೈದ್ರಾಬಾದ್‌ ನಡುವಿನ ವಿಮಾನ ಸಂಚಾರ ಹೆಚ್ಚಿನ ಅನುಕೂಲವಾಗಲಿದೆ. ಸಂಸದ ಡಾ| ಉಮೇಶ ಜಾಧವ ವಿಮಾನ ಸಂಚಾರಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಲಬುರಗಿ ಹಾಗೂ ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳ ಅನುಕೂಲಕ್ಕಾಗಿ ಕಲಬುರಗಿ ವಿಮಾನ ನಿಲ್ದಾಣದಿಂದ ಹಲವು ಲೋಹದ ಹಕ್ಕಿಗಳು ಬೇರೆ ಬೇರೆ ರಾಜ್ಯಗಳಿಗೆ ಹಾರಾಡುವಂತೆ ಸರ್ಕಾರ ಮಾಡುತ್ತಿದೆ ಎಂದರು.

ಕಲಬುರಗಿ-ಗೋವಾ ನಡುವಿನ ಏರಲೈನ್ಸ್‌ ಏರ್‌ ವಿಮಾನ ಹಾರಾಟವನ್ನು ಕೇಕ್‌ ಕತ್ತರಿಸುವ ಮೂಲಕ ಚಾಲನೆ ನೀಡಿದ ಸಂಸದರು, ಕಲಬುರಗಿ ಜಿಲ್ಲೆಯ ವೃದ್ಧರು, ರೋಗಿಗಳು ತುರ್ತು ಚಿಕಿತ್ಸೆಗಾಗಿ ಹೈದ್ರಾಬಾದ್‌ಗೆ ಹಾಗೂ ಹೈದ್ರಾಬಾದ್‌ ನಿಂದ ಬೆಂಗಳೂರಿಗೆ ತೆರಳಲು ಈ ವಿಮಾನ ಅನುಕೂಲಕರವಾಗಲಿದೆ. ಹೈದ್ರಾಬಾದ್‌ನಿಂದ ಪವಿತ್ರ ಸ್ಥಳಗಳಾದ ಹಜ್‌, ಕಾಶಿ, ಆಯೋಧ್ಯಾ, ಅಮರನಾಥ, ವೈಷ್ಣೋದೇವಿ ಹಾಗೂ ವಿವಿಧ ಪುಣ್ಯ ಕ್ಷೇತ್ರಗಳಿಗೆ ತೆರಳಲು ಅನುಕೂಲಕರವಾಗಿದೆ. ಕಲಬುರಗಿ ಹಾಗೂ ವಿಭಾಗದ ಜಿಲ್ಲೆಗಳ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಯಾಣಿಕರು ಸರ್ಕಾರದ ಕೊರೊನಾ ನಿಯಮ ಪಾಲಿಸಬೇಕು. ವೃದ್ಧರಿಗೆ ಹಾಗೂ ರೋಗಿಗಳಿಗೆ ಮೊದಲ ಆದ್ಯತೆ ನೀಡಬೇಕಾಗಿ ಸಿಬ್ಬಂದಿಗೆ ಸೂಚಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಸಂಸದ ಡಾ| ಉಮೇಶ ಜಾಧವ ತಮ್ಮ ಮಗಳು ಶ್ರದ್ದಾ ಜಾಧವ ಹಾಗೂ ಪ್ರಯಾಣಿಕರ ಜತೆ ಹೈದ್ರಾಬಾದ್‌ಗೆ ವಿಮಾನದಲ್ಲಿ ಪ್ರಯಾಣ ಮಾಡಿದರು. ಪ್ರಾದೇಶಿಕ ಆಯುಕ್ತ ಡಾ| ಎನ್‌.ವಿ. ಪ್ರಸಾದ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌, ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್‌.ಜ್ಞಾನೇಂದ್ರರಾವ್‌ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.