ಕಲಬುರಗಿ-ಮುಂಬೈ ನೇರ ವಿಮಾನ ಆರಂಭ

. ವಿಮಾನ ನಿಲ್ದಾಣ ಎಲ್ಲ ರೀತಿಯಿಂದಲೂ ಸುರಕ್ಷಿತವಾಗಿದೆ

Team Udayavani, Mar 26, 2021, 6:38 PM IST

Flight

ಕಲಬುರಗಿ: ದೇಶದ ವಾಣಿಜ್ಯ ನಗರಿ, ನೆರೆಯ ಮಹಾರಾಷ್ಟ್ರದ ರಾಜಧಾನಿ ಮುಂಬೈ ಹಾಗೂ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ನಡುವೆ
ಗುರುವಾರದಿಂದ ಅಲಯನ್ಸ್‌ ಏರ್‌ ಸಂಸ್ಥೆಯ ನೇರ ವಿಮಾನ ಸಂಚಾರ ಆರಂಭವಾಗಿದೆ. ಇನ್ಮುಂದೆ ಕೇವಲ ಒಂದೂವರೆ ಗಂಟೆಯಲ್ಲಿ ಕಲಬುರಗಿಯಿಂದ
ಮುಂಬೈಗೆ ತಲುಪಬಹುದು ಮತ್ತು ಮುಂಬೈನಿಂದ ಕಲಬುರಗಿಗೆ ಬರಬಹುದಾಗಿದೆ.

ಗುರುವಾರ ಮುಂಬೈನಿಂದ ಹೊರಟ ಮೊದಲ ವಿಮಾನ ಬೆಳಗ್ಗೆ 9:07ಕ್ಕೆ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮುಂಬೈನಿಂದ ಎಂಟು ಜನ ಪ್ರಯಾಣಿಕರು ಬಂದರು. ಏರ್‌ಪೋರ್ಟ್‌ಗೆ ಇಳಿದ ಕೂಡಲೇ ಅಗ್ನಿಶಾಮಕ ವಾಹನಗಳ ಮೂಲಕ ವಿಮಾನಕ್ಕೆ ವಾಟರ್‌ ಸೆಲ್ಯೂಟ್‌ ಮಾಡಲಾಯಿತು. ನಂತರ ಇಲ್ಲಿನ ವಿಮಾನ ನಿಲ್ದಾಣದಿಂದ ಬೆಳಗ್ಗೆ 9:40ಕ್ಕೆ ಹಾರಾಟ ಆರಂಭಿಸಿತು. ಮುಂಬೈಗೆ ಹೊರಟ ವಿಮಾನದಲ್ಲಿ 22 ಪ್ರಯಾಣಿಕರು ತೆರಳಿದರು.

70 ಸೀಟು ಸಾಮರ್ಥ್ಯದ ಈ ವಿಮಾನವು ವಾರದ ಎಲ್ಲ ದಿನವೂ ಮುಂಬೈ-ಕಲಬುರಗಿ ಮಧ್ಯೆ ವಿಮಾನ ಹಾರಾಟ ನಡೆಸಲಿದೆ. ನಿತ್ಯ ಮುಂಬೈನಿಂದ ಬೆಳಗ್ಗೆ 7:20ಕ್ಕೆ ಹೊರಡಲಿದೆ. 9 ಗಂಟೆಗೆ ಇಲ್ಲಿಗೆ ಬಂದಿಳಿಯಲಿದೆ. ಮರಳಿ ಕಲಬುರಗಿ ಯಿಂದ 9:25ಕ್ಕೆ ತೆರಳಿ, 10:55ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯಲಿದೆ.

ಅಲಯನ್ಸ್‌ ಏರ್‌ ಮತ್ತು ಸ್ಟಾರ್‌ ಏರ್‌ ಸಂಸ್ಥೆಗಳು ಈಗಾಗಲೇ ಕಲಬುರಗಿಯಿಂದ ಬೆಂಗಳೂರು, ದೆಹಲಿ, ತಿರುಪತಿ ನಡುವೆ ವಿಮಾನ ಸಂಚಾರ ನಡೆಸುತ್ತಿವೆ. ಇದೀಗ ಮುಂಬೈಗೂ ವಿಮಾನ ಸೇವೆ ಆರಂಭವಾಗಿರುವುದರಿಂದ ಕಡಿಮೆ ಅವಧಿಯಲ್ಲಿ ಕಲಬುರಗಿ ವಿಮಾನ ನಿಲ್ದಾಣದ ತನ್ನ ವ್ಯಾಪ್ತಿಯನ್ನು 4 ಪ್ರಮುಖ ನಗರಗಳಿಗೆ ವಿಸ್ತರಿಸಿಕೊಂಡಂತೆ ಆಗಿದೆ.

ಕೊರೊನಾ ಮುನ್ನೆಚ್ಚರಿಕೆ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಹಾವಳಿ ಹೆಚ್ಚಾಗಿರುವ ಮಧ್ಯೆಯೂ ಅಲಯನ್ಸ್‌ ಏರ್‌ ವಿಮಾನ ಹಾರಾಟ ಸಂಚಾರ ಆರಂಭಿಸಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಅನುಸರಿಸಲಾಗುತ್ತಿದೆ. ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆಯ ಆರ್ ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯವಾಗಿ ಮಾಡಲಾಗಿದೆ. ಕೊರೊನಾ ಕುರಿತ ತಪಾಸಣೆಗಾಗಿ ನಾಗರಿಕ ವಿಮಾನಯಾನ ಇಲಾಖೆ, ರಾಜ್ಯ ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸಲಾಗಿದೆ.

ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್ ಮತ್ತು ಮಾಸ್ಕ್ ಧರಿಸುವಿಕೆ ಕಡ್ಡಾಯ ಮಾಡುವುದರೊಂದಿಗೆ ಕೊರೊನಾ ನೆಗೆಟಿವ್‌ ವರದಿ ತರದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ಮಾದರಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ. ಮುಂಬೈನಿಂದ ಬರುವ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್‌ ವರದಿ ಅಗತ್ಯವಾಗಿದೆ.
ವರದಿ ಹೊಂದಿರದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಲಾಗುತ್ತದೆ. ಅಲ್ಲದೇ, ರ್ಯಾಪಿಡ್‌ ಪರೀಕ್ಷೆ ಸಹ ಮಾಡುವ ವ್ಯವಸ್ಥೆ ಇದೆ. ಯಾವುದೇ ಭೀತಿ ಇಲ್ಲದೇ ಪ್ರಯಾಣಿಸಬಹುದು. ವಿಮಾನ ನಿಲ್ದಾಣ ಎಲ್ಲ ರೀತಿಯಿಂದಲೂ ಸುರಕ್ಷಿತವಾಗಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರರಾವ್ ತಿಳಿಸಿದ್ದಾರೆ.

ವಾಣಿಜ್ಯ ಟಿಕೆಟ್‌ ದರ
ಕಲಬುರಗಿ ಮತ್ತು ಮುಂಬೈ ನಡುವಿನ ವಿಮಾನದ ಪ್ರಯಾಣ ಟಿಕೆಟ್‌ ದರವು ವಾಣಿಜ್ಯವಾಗಿದೆ. ಹೀಗಾಗಿ ಟಿಕೆಟ್‌ ಬೆಲೆಯಲ್ಲಿ ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ. ಉಡಾನ್ ಯೋಜನೆಯಡಿ ಆಗಿದ್ದರೆ ಅಗ್ಗದ ದರದಲ್ಲಿ ಪ್ರಯಾಣಿಸಬಹುದಾಗಿತ್ತು. ವಿಮಾನದ ಒಟ್ಟು ಸೀಟುಗಳಲ್ಲಿ ಶೇ.50 ಸೀಟುಗಳಿಗೆ ಟಿಕೆಟ್‌ನಲ್ಲಿ ವಿನಾಯಿತಿ ದೊರೆಯುತ್ತಿತ್ತು.

ಕಲಬುರಗಿ ಮತ್ತು ಮುಂಬೈ ನಡುವೆ ವಿಮಾನ ಹಾರಾಟಕ್ಕಾಗಿ ಸಾಕಷ್ಟು ಬಹು ಬೇಡಿಕೆ ಇತ್ತು. ಇದೀಗ ಅಲಯನ್ಸ್‌ ಏರ್‌ ಸಂಸ್ಥೆಯ ನೇರ ವಿಮಾನ ಸಂಚಾರ ಆರಂಭಿಸುವ ಮೂಲಕ ಜನರ ನಿರೀಕ್ಷೆ ಪೂರೈಸಿದೆ . ಈ ವಿಮಾನ ಕಲಬುರಗಿ ಮಾತ್ರವಲ್ಲದೇ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ಜಿಲ್ಲೆಗಳ ಜನರಿಗೆ ಉಪಯೋಗವಾಗಲಿದೆ.
ಜ್ಞಾನೇಶ್ವರರಾವ್‌, ನಿರ್ದೇಶಕ,
ಕಲಬುರಗಿ ವಿಮಾನ ನಿಲ್ದಾಣ

ಟಾಪ್ ನ್ಯೂಸ್

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

1-wewqewq

LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4

ಬೆಳ್ತಂಗಡಿಯಲ್ಲಿ ಬಸ್‌-ಟ್ಯಾಂಕರ್‌ ಅಪಘಾತ: ತಪ್ಪಿದ ಭಾರೀ ಅನಾಹುತ, 20 ಮಂದಿಗೆ ಗಾಯ

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

1-wewqewq

LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.