ಸಹಕಾರ ಸಂಘ ಆಭರಣ ಸಾಲ ನೀಡಲಿ: ಬೆಣ್ಣೂರ


Team Udayavani, Jan 16, 2022, 10:00 AM IST

1loan

ಕಲಬುರಗಿ: ಚಿನ್ನಾಭರಣಗಳ ಮೇಲಿನ ಸಾಲ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ನೀಡುತ್ತಿದ್ದು, ಜನಸಾಮಾನ್ಯರಿಗೆ ಈ ಸೌಲಭ್ಯ ನಿಲುಕದಂತೆ ಆಗಿರುವುದರಿಂದ ಸಹಕಾರ ಸಂಘಗಳು ಚಿನ್ನಾಭರಣಗಳ ಮೇಲೆ ಸಾಲ ನೀಡಲು ಮುಂದೆ ಬರುವುದು ಅಗತ್ಯವಿದೆ ಎಂದು ಯುಕೆಪಿ ಕಾಡಾದ ಭೂ-ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ ಶರಣಬಸಪ್ಪ ಬೆಣ್ಣೂರ ಹೇಳಿದರು.

ನಗರದ ಶೇಖರೋಜಾ ಬಡಾವಣೆಯ ವೀರಶೈವ ಪತ್ತಿನ ಸಹಕಾರ ಸಂಘದ ವತಿಯಿಂದ ಹಮ್ಮಿಕೊಂಡ ಚಿನ್ನಾಭರಣಗಳ ಮೇಲಿನ ಸಾಲ ಸೌಲಭ್ಯದ ಕಾರಉಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಹುತೇಕ ಅಕ್ಷರಸ್ಥ ಹಾಗೂ ಅನೂಕೂಲಸ್ಥರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಸಾಲ ಸೌಲಭ್ಯ ಪಡೆಯುತ್ತಾರೆ. ಆದರೆ ಜನಸಾಮಾನ್ಯರ ಬಳಿ ಒಡವೆಗಳಿದ್ದರೂ ಸಾಲ ಪಡೆಯುವುದು ಗಗನ ಕುಸುಮವಾಗಿದೆ. ಏಕೆಂದರೆ ಅವರಿಗೆ ವ್ಯವಹಾರದ ಜ್ಞಾನ ಕಡಿಮೆ. ಬ್ಯಾಂಕುಗಳ ದಾಖಲೆಗಳನ್ನು ಸಕಾಲದಲ್ಲಿ ಪೂರೈಸಲು ಆಗದೇ ಇರುವುದರಿಂದ ಕೆಲವು ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಚಿನ್ನಾಭರಣದ ಮೇಲೆ ಸಾಲ ಪಡೆದು ಬಡ್ಡಿ, ಸುಸ್ತಿಬಡ್ಡಿ ದಾಖಲೆಗಳ ಶುಲ್ಕ, ಪ್ರಕ್ರಿಯೆ ಶುಲ್ಕ ಹೀಗೆ ಹಲವಾರು ರೀತಿಯ ಶುಲ್ಕ ಕಟಿಸಿಕೊಂಡು ಹೆಚ್ಚಿನ ಹಣ ಪಡೆಯುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಸದಸ್ಯರೆ ಮಾಲೀಕರಾದ ಸಹಕಾರ ಸಂಘಗಳಲ್ಲಿ ಚಿನ್ನಾಭರಣಗಳನ್ನು ಅಡವಿಟ್ಟುಕೊಂಡು ಸಾಲ ನೀಡಲು ಮುಂದೆ ಬಂದರೆ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಸುಧಾರಿಸಿದಂತೆ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಬಸವರಾಜ ವಾಲಿ ಮಾತನಾಡಿ, ಚಿನ್ನಾಭರಣಗಳ ಮೇಲೆ ಯಾವುದೇ ರೀತಿಯ ಕಾಗದ-ಪತ್ರಗಳಿಗೆ ಅಲೆದಾಡಬೇಕಾಗಿಲ್ಲ. ಕೇವಲ ಒಂದು ರೂ. ಮಾಸಿಕ ಬಡ್ಡಿದರದಲ್ಲಿ ತಕ್ಷಣವೇ ಸಾಲ ಸೌಲಭ್ಯ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕಡಗಂಚಿಮಠದ ಅನುಯಾಯಿಗಳಾದ ಮಲ್ಲಯ್ನಾ ಮುತ್ಯಾ, ಸಂಘದ ಉಪಾಧ್ಯಕ್ಷ ಗುರುನಾಥ ಘೋಳನೂರ, ನಿರ್ದೇಶಕರಾದ ಪ್ರಭುರಾವ್‌ ಬಿರಾದಾರ, ರಾಜಶೇಖರ ಬಿರಾದಾರ, ರಾಜಶೇಖರ ಮುನ್ನಳ್ಳಿ, ಚಂದ್ರಕಾಂತ ಬಿರಾದಾರ ಮುಂತಾದವರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.