ಶಿಕ್ಷಣ ಹೋರಾಟದ ಅಸ್ತ್ರವಾಗಲಿ


Team Udayavani, Jan 14, 2022, 11:18 AM IST

6education

ವಾಡಿ: ನಮ್ಮ ಜೀವನದುದ್ದಕ್ಕೂ ಶಿಕ್ಷಣದ ಮೂಲಕ ಸಂಪಾದಿಸಿದ ಜ್ಞಾನವನ್ನು ಕೇವಲ ವೈಯಕ್ತಿಕ ಬದುಕಿಗೆ ಸೀಮಿತವಾಗಿಸಿಕೊಳ್ಳದೇ ಶೋಷಣೆಗೊಳಗಾದ ಜನರ ಹೋರಾಟದ ಅಸ್ತ್ರವಾಗಿಸಿ ಎಂದು ಎಂದು ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ ಎಸ್‌) ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ ಹೇಳಿದರು.

ಎಐಎಂಎಸ್‌ಎಸ್‌ ಮಹಿಳಾ ಸಂಘಟನೆ ವತಿಯಿಂದ ಪಟ್ಟಣದ ಎಸ್‌ಯುಸಿಐ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಮೌಡ್ಯ, ಅಜ್ಞಾನ, ಅಂಧಕಾರದಲ್ಲಿ ಮುಳುಗಿ ಪುರುಷ ಪ್ರಧಾನ ವ್ಯವಸ್ಥೆಯಿಂದ ಶೋಷಣೆಗೊಳಗಾಗಿದ್ದ ಹೆಣ್ಣುಮಕ್ಕಳಿಗೆ ಅಕ್ಷರ ಜ್ಞಾನ ನೀಡುವಲ್ಲಿ ಇಡೀ ಬದುಕು ಮೀಸಲಿಟ್ಟ ಸಾವಿತ್ರಿಬಾಯಿ ಫುಲೆ ಮತ್ತು ಅವರ ಪತಿ ಜ್ಯೋತಿಬಾ ಫುಲೆ ಮಹಾನ್‌ ವ್ಯಕ್ತಿಗಳಾಗಿದ್ದಾರೆ ಎಂದರು.

ಈ ದಂಪತಿಯೊಂದಿಗೆ ಶೈಕ್ಷಣಿಕ ಕ್ರಾಂತಿಗೆ ದನಿಯಾಗಿ ನಿಂತ ಮುಸ್ಲಿಂ ಸಮುದಾಯದ ಮೊದಲ ಶಿಕ್ಷಿತ ಮಹಿಳೆ ಫಾತಿಮಾ ಶೇಖ್‌ ಸಮಾಜದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಇವರು ತೆರೆದ ಶಾಲೆಗಳನ್ನು ಮುಚ್ಚಲು ಅಂದಿನ ಮಹಿಳಾ ಶಿಕ್ಷಣ ವಿರೋಧಿಗಳು ಶತಾಯಗತಾಯ ಪ್ರಯತ್ನಿಸಿದ್ದರು. ಆದರೆ ಇವುಗಳಿಗೆ ಎದೆಗುಂದದ ಫುಲೆ ದಂಪತಿ ಹೆಣ್ಣಿನ ನಾಲಿಗೆ ಮೇಲೆ ಅಕ್ಷರಗಳನ್ನು ಬರೆದು ಅವರ ಹಣೆಬರಹವನ್ನೇ ಬದಲಿಸಿದರು ಎಂದರು.

ದೇಶದ ವಿವಿಧ ಕ್ಷೇತ್ರಗಳಲ್ಲದೇ ವಿದೇಶಗಳಲ್ಲಿಯೂ ಮಹಿಳೆಯರು ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದರೆ ಅದಕ್ಕೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಫಾತಿಮಾ ಶೇಖ್‌, ರಾಜಾರಾಮ ಮೋಹನರಾಯ, ಈಶ್ವರಚಂದ್ರ ವಿದ್ಯಾಸಾಗರ ಕಾರಣರಾಗಿದ್ದಾರೆ ಎಂದರು.

ಶಿಕ್ಷಕಿ ಪದ್ಮರೇಖಾ ವಿ.ಕಾಳೆ ಬೆಳಗುಂದಿ ಮಾತನಾಡಿ, ಎಲ್ಲ ಸಮುದಾಯದ ಮಹಿಳೆಯರಿಗೆ ಶಿಕ್ಷಣ ಕೊಡಲು ಪಣ ತೊಟ್ಟ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಸಮಾಜದಲ್ಲಿನ ಎಲ್ಲ ಅಡೆತಡೆಗಳನ್ನು ದಿಟ್ಟತನದಿಂದ ಎದುರಿಸಿ ಜ್ಞಾನದ ಜ್ಯೋತಿಯಾದರು. ಅವರು ಹಚ್ಚಿದ ಶಿಕ್ಷಣದ ಜ್ಯೋತಿಯನ್ನು ಎತ್ತಿ ಹಿಡಿಯಲು ಸಂಘಟಿತರಾಗೋಣ ಎಂದು ಹೇಳಿದರು.

ಎಐಎಂಎಸ್‌ಎಸ್‌ ಮಹಿಳಾ ಸಂಘಟನೆ ನಗರ ಸಮಿತಿ ಸದಸ್ಯರಾದ ಜಯಶ್ರೀ ಜಿ.ಕುಂಬಾರ, ಕೋಕಿಲಾ ಶರಣು ಹೇರೂರ, ಶಿವಲೀಲಾ ರಮೇಶ ಹಡಪದ, ಶರಣಮ್ಮ ಕುಂಬಾರ, ಸೀತಾಬಾಯಿ ಎಂ.ಹೇರೂರ, ಶರಣಮ್ಮ ಹಡಪದ, ಜ್ಯೋತಿ ರಾಜು ಒಡೆಯರಾಜ, ಶಾಂತಮ್ಮ ನಾಯ್ದೊಡಿ, ಲಕ್ಷ್ಮೀ ಎಸ್‌.ಹೇರೂರ, ರೇಣುಕಾ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.