ಸರ್ಕಾರಿ ಸೌಲಭ್ಯ ಸದ್ಬಳಕೆಯಾಗಲಿ


Team Udayavani, Apr 19, 2022, 1:15 PM IST

12government

ಆಳಂದ: ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆ ನಿಟ್ಟಿನಲ್ಲಿ ಸರ್ಕಾರದಿಂದ ಹಲವಾರು ಸೌಲಭ್ಯ ನೀಡಲಾಗುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದು ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಹೇಳಿದರು.

ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಯೋವೃದ್ಧರಿಗೆ ರಾಷ್ಟ್ರೀಯ ಭದ್ರತಾ ಯೋಜನೆಯಡಿ ಅಂಗವಿಕಲ, ವಿಧವೆಯರಿಗೆ ಮಾಸಾಶನ ನೀಡಲಾಗುತ್ತಿದೆ. ಮಧ್ಯವರ್ತಿಗಳ ಮೊರೆ ಹೋಗದೇ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ಕೆಲಸ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಾಮಸ್ಥರು ನೀರಿನ ಸಮಸ್ಯೆ ಕುರಿತು ತಹಶೀಲ್ದಾರ್‌ ಗಮನಕ್ಕೆ ತಂದಾಗ, ತಕ್ಷಣವೇ ಕ್ರಮ ಕೈಗೊಂಡು ನೀರು ಒದಗಿಸಬೇಕು ಎಂದು ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮದಿಂದ ಅಧಿಕಾರಿಗಳು ಹಳ್ಳಿಗೆ ಬರುವುದರಿಂದ ಸಮಸ್ಯೆಗಳನ್ನು ಆಲಿಸಲು ಅನುಕೂಲವಾಗುತ್ತಿದೆ. ಜತೆಗೆ ಜನಸಾಮಾನ್ಯರಿಗೆ ಸ್ಥಳದಲ್ಲೇ ಸೌಲಭ್ಯ ದೊರೆಯುತ್ತಿದೆ ಎಂದರು.

ಗ್ರಾಪಂ ಅಧಕ್ಷೆ ಮಹಾದೇವಿ ಪೂಜಾರಿ, ಉಪಾಧ್ಯಕ್ಷೆ ಜೋತಿ ಕದಂ, ನಾಡ ತಹಶೀಲ್ದಾರ್‌ ದಯಾನಂದ, ಕಂದಾಯ ನಿರೀಕ್ಷಕ ರಾಜಕುಮಾರ ಸರಸಂಬಿ, ಗ್ರಾಮ ಲೆಕ್ಕಾ ಧಿಕಾರಿ ಭೀಮಾಶಂಕರ, ಪಿಡಿಒ ಚಿದಾನಂದ ಆಲೇಗಾಂವ, ರಾಜಕುಮಾರ ಮೂಲಗೆ, ಶ್ರೀಮಂತ ಜುಲ್ಪೆ, ಶ್ರೀಮಂತ ನಾಗೂರೆ, ಪರಮೇಶ್ವರ ಬನಸೋಡೆ, ಶರಣಪ್ಪ, ಮಲ್ಲಿಕಾರ್ಜುನ ಪಾಟೀಲ, ಮಹಾದೇವ ಮೋಘಾ, ಭೀಮರಾವ್‌ ದುದನಿ, ಪ್ರಕಾಶ ಜಮಾದಾರ ಇತರರು ಇದ್ದರು.

ವಿಧವಾ ವೇತನ, ಸಂಧ್ಯಾಸುರಕ್ಷ, ಅಂಗವಿಕಲ ಮಾಸಾಶನ ಸೇರಿದಂತೆ 36 ಫಲಾನುಭವಿಗಳಿಗೆ ಸ್ಥಳದಲ್ಲೇ ಆದೇಶಪ್ರತಿಯನ್ನು ತಹಶೀಲ್ದಾರ್‌ ವಿತರಿಸಿದರು. ಅರ್ಹ ಫಲಾನುಭವಿಗಳ ಪಡಿತರ ಚೀಟಿಗೆ ಹೆಸರು ಸೇರ್ಪಡೆ, ರಾಷ್ಟ್ರೀಯ ಭದ್ರತಾ ಯೋಜನೆಯಡಿ ಶವಸಂಸ್ಕಾರಕ್ಕೆ ಪರಿಹಾರ ವಿತರಿಸಲಾಯಿತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.